ರಜನಿಕಾಂತ್ 
ಸಿನಿಮಾ ಸುದ್ದಿ

ಕ್ಷಮಿಸಿ, ನ್ಯಾಯಮೂರ್ತಿ ಹೇಮಾ ವರದಿ ಬಗ್ಗೆ ನನಗೇನೂ ಗೊತ್ತಿಲ್ಲ: ರಜನಿಕಾಂತ್

ಕೇರಳದ ನ್ಯಾಯಮೂರ್ತಿ ಹೇಮಾ ಸಮಿತಿಯಂತೆಯೇ ತಮಿಳುನಾಡಿನಲ್ಲೂ ಸಮಿತಿಯೊಂದನ್ನು ರಚಿಸಬೇಕೆಂದು ಅನೇಕರು ಒತ್ತಾಯಿಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಏನು? ನನಗೆ ಅದರ ಬಗ್ಗೆ ತಿಳಿದಿಲ್ಲ, ಕ್ಷಮಿಸಿ’ ಎಂದಷ್ಟೇ ತಿಳಿಸಿದ್ದಾರೆ.

ಚೆನ್ನೈ: ಮಲಯಾಳಂ ಸಿನಿಮಾ ರಂಗದಲ್ಲಿ ಸಂಚಲನ ಸೃಷ್ಟಿ ಮೂಡಿಸಿರುವ ನ್ಯಾಯಮೂರ್ತಿ ಹೇಮಾ ವರದಿ ಇದೀಗ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ತಮ್ಮ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಕುರಿತಂತೆ ಬಹಿರಂಗವಾಗಿ ಒಬ್ಬೊಬ್ಬರೇ ನಟಿಯರು ಮಾತಾಡುತ್ತಿದ್ದಾರೆ. ಜೊತೆಗೆ ದೂರುಗಳು ದಾಖಲಾಗುತ್ತಿವೆ.

ಮಲಯಾಳ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ಕುರಿತಂತೆ ನ್ಯಾಯಮೂರ್ತಿ ಹೇಮಾ ಸಮಿತಿ ಸಲ್ಲಿಸಿರುವ ವರದಿಯ ಬಗ್ಗೆ ನನಗೆ ಗೊತ್ತಿಲ್ಲ. ತಮಿಳುನಾಡಿನಲ್ಲಿ ಅಂತಹ ಸಮಿತಿಯನ್ನು ರಚಿಸಬೇಕೆಂಬ ಬೇಡಿಕೆಯ ಬಗ್ಗೆಯೂ ನನಗೆ ಮಾಹಿತಿ ಇಲ್ಲ ಎಂದು ನಟ ರಜನಿಕಾಂತ್‌ ಹೇಳಿದ್ದಾರೆ. ಕೇರಳದ ನ್ಯಾಯಮೂರ್ತಿ ಹೇಮಾ ಸಮಿತಿಯಂತೆಯೇ ತಮಿಳುನಾಡಿನಲ್ಲೂ ಸಮಿತಿಯೊಂದನ್ನು ರಚಿಸಬೇಕೆಂದು ಅನೇಕರು ಒತ್ತಾಯಿಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಏನು? ನನಗೆ ಅದರ ಬಗ್ಗೆ ತಿಳಿದಿಲ್ಲ, ಕ್ಷಮಿಸಿ’ ಎಂದಷ್ಟೇ ತಿಳಿಸಿದ್ದಾರೆ.

ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಶೋಷಣೆ, ತಾರತಮ್ಯ ಮತ್ತು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಇತ್ತೀಚೆಗೆ ಬಿಡುಗಡೆಯಾಗಿತ್ತು. ವರದಿ ಬಹಿರಂಗಗೊಂಡ ಬೆನ್ನಲ್ಲೇ ಕಲಾವಿದರ ಸಂಘಕ್ಕೆ ಅಧ್ಯಕ್ಷ ನಟ ಮೋಹನ್‌ಲಾಲ್, ಇತರ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದರು. ಹೇಮಾ ಸಮಿತಿ ವರದಿ ಸಲ್ಲಿಕೆಯಾದ ಬಳಿಕ ಸಿಪಿಎಂ ಶಾಸಕ ಎಂ.ಮುಕೇಶ್, ನಟ ಸಿದ್ದೀಕ್‌, ನಿರ್ದೇಶಕ ರಂಜಿತ್ ವಿರುದ್ಧ ಲೈಂಗಿಕ ದೌರ್ಜನ್ಯ ಅರೋಪಗಳು ಕೇಳಿಬಂದಿದ್ದು, ನಾಲ್ಕು ಎಫ್‌ಐಆರ್‌ ದಾಖಲಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT