ದೀಪಿಕಾ ದಾಸ್ 
ಸಿನಿಮಾ ಸುದ್ದಿ

'ಪಾರು ಪಾರ್ವತಿ' ಪಾತ್ರವು ನನ್ನ ಜೀವನದೊಂದಿಗೆ ಹೊಂದಿಕೊಳ್ಳುತ್ತದೆ: ಕಮ್ ಬ್ಯಾಕ್ ಸಿನಿಮಾ ಬಗ್ಗೆ ದೀಪಿಕಾ ಮಾತು

ವಿವಾಹದ ನಂತರ ವಯಕ್ತಿಕ ಬದುಕಿನ ಕಡೆಗೆ ಗಮನಹರಿಸಿದ್ದ ದೀಪಿಕಾ ದಾಸ್ ಕಮ್ ಬ್ಯಾಕ್ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ಬಹಳ ದಿನಗಳ ನಂತರ ಬೆಳ್ಳಿಪರದೆ ಮೇಲೆ ಕಾಣಿಸಿಕೊಳ್ಳುವುದಕ್ಕೆ ರೆಡಿ ಆಗಿದ್ದಾರೆ.

ನಾಗಿಣಿ, ಬಿಗ್ ಬಾಸ್ ನಂತರ ಕಿರುತೆರೆ ಕಾರ್ಯಕ್ರಮಗಳಿಂ ಹೆಸರುವಾಸಿಯಾಗಿದ್ದ ನಟಿ ದೀಪಿಕಾ ದಾಸ್ ಮದುವೆಯ ನಂತರ ಇದೀಗ ಮತ್ತೆ ಸಿನಿಮಾಗೆ ಮರಳಿದ್ದಾರೆ. ಮದುವೆ ಬಳಿಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ‘ಪಾರು ಪಾರ್ವತಿ’ ಸಿನಿಮಾದ ಪೋಸ್ಟರ್ ರಿಲೀಸ್ ಮಾಡುವ ಮೂಲಕ ನಟಿ ಸುದ್ದಿಯಲ್ಲಿದ್ದಾರೆ.

ವಿವಾಹದ ನಂತರ ವಯಕ್ತಿಕ ಬದುಕಿನ ಕಡೆಗೆ ಗಮನಹರಿಸಿದ್ದ ದೀಪಿಕಾ ದಾಸ್ ಕಮ್ ಬ್ಯಾಕ್ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ಬಹಳ ದಿನಗಳ ನಂತರ ಬೆಳ್ಳಿಪರದೆ ಮೇಲೆ ಕಾಣಿಸಿಕೊಳ್ಳುವುದಕ್ಕೆ ರೆಡಿ ಆಗಿದ್ದಾರೆ. ‘ಪಾರು ಪಾರ್ವತಿ’ ಎಂಬ ಸಿನಿಮಾದಲ್ಲಿ ದೀಪಿಕಾ ದಾಸ್ ನಾಯಕಿಯಾಗಿದ್ದಾರೆ. ಅಡ್ವೆಂಚರಸ್ ಕುರಿತಾದ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ಬಗ್ಗೆ ಮಾತನಾಡಿರುವ ದೀಪಿಕಾ ದಾಸ್, ಪಾರು ಪಾರ್ವತಿ ಕೇವಲ ಸಿನಿಮಾವಲ್ಲ, ಇದು ನಮ್ಮ ಜೀವನದಲ್ಲಿ ಸಮಯದ ದ್ವಂದ್ವವನ್ನು ಅನ್ವೇಷಿಸುವ ಭೂತ ಮತ್ತು ವರ್ತಮಾನವನ್ನು ಹೆಣೆದುಕೊಂಡಿರುವ ಸಾಹಸಮಯ ಪ್ರಯಾಣ ಎಂದು ವಿವರಿಸಿದ್ದಾರೆ. ಚಿತ್ರದಲ್ಲಿನ ಪಾಯಲ್ ಪಾತ್ರವು ನನ್ನ ವಯಕ್ತಿಕ ಜೀವನದ ಜೊತೆ ಆಳವಾದ ಸಂಬಂಧ ಹೊಂದಿದೆ. ಇದು ನನ್ನ ಸ್ವಂತ ಜೀವನದ ಅಂಶಗಳನ್ನು ಪ್ರತಿಬಿಂಬಿಸುತ್ತದೆ ಮತ್ತು ಈ ಪಾತ್ರಕ್ಕೆ ನಾನು ಜೀವ ತುಂಬುತ್ತೇನೆ ಎಂದು ದೀಪಿಕಾ ದಾಸ್ ತಿಳಿಸಿದ್ದಾರೆ.

‘ಪಾರು ಪಾರ್ವತಿ’ ಸಿನಿಮಾದಲ್ಲಿ ಪಾಯಲ್ ಅನ್ನೋ ಪಾತ್ರದಲ್ಲಿ ದೀಪಿಕಾ ನಟಿಸಿದ್ದಾರೆ. ಈ ಪಾತ್ರಕ್ಕಾಗಿ ತೂಕವನ್ನು ಕೂಡ ಕಡಿಮೆ ಮಾಡಿಕೊಂಡಿದ್ದಾರೆ. ಜೊತೆಗೆ ಕೂದಲಿಗೂ ಕತ್ತರಿ ಹಾಕಿದ್ದಾರೆ. ಅಂದಹಾಗೆ, ದೀಪಿಕಾ ಅವರು ರಿಯಲ್ ಲೈಫ್‌ನಲ್ಲಿ ಜಾಸ್ತಿ ಪ್ರವಾಸ ಮಾಡುತ್ತಾರೆ. ಈ ಸಿನಿಮಾದಲ್ಲೂ ಅವರಿಗೆ ಟ್ರಾವೆಲ್ ಮಾಡುವ ಹುಡುಗಿಯ ಪಾತ್ರವೇ ಸಿಕ್ಕಿದೆ. ತಾನು ಇಲ್ಲಿಯವರೆಗೆ ಸುಮಾರು ಹತ್ತು ದೇಶಗಳಿಗೆ ಪ್ರಯಾಣಿಸಿದ್ದೇನೆ, ಎಲ್ಲಾ 198 ರಾಷ್ಟ್ರಗಳಿಗೆ ಭೇಟಿ ನೀಡುವುದು ನನ್ನ ಕನಸು ಎಂದು ದೀಪಿಕಾ ಬಹಿರಂಗಪಡಿಸಿದ್ದಾರೆ. "ಪಾರು ಪಾರ್ವತಿಯಲ್ಲಿ ನಾನು ನಿರ್ವಹಿಸುವ ಪಾತ್ರವು ನನ್ನ ಸ್ವಂತ ಜೀವನದೊಂದಿಗೆ ಅನೇಕ ಹೋಲಿಕೆಗಳನ್ನು ಹಂಚಿಕೊಳ್ಳುತ್ತದೆ, ವಿಶೇಷವಾಗಿ ಅವರ ಸಾಹಸ ಮನೋಭಾವ ಮತ್ತು ವಿವಿಧ ದೇಶಗಳ ಪ್ರಯಾಣ ಮಾಡುವುದು ಅವರಿಗೆ ಇಷ್ಟವಾದ ವಿಷಯವಾಗಿದೆ. ಕಮ್ ಬ್ಯಾಕ್ ಗೆ ತಯಾರಿ ನಡೆಸುತ್ತಿರುವ ದೀಪಿಕಾ ದಾಸ್ ಕೂಡ ಹೊಸ ಕಥೆಗಳಿಗೆ ಹುಡಾಕಾಟ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT