ವಿನಾಯಕನ್ 
ಸಿನಿಮಾ ಸುದ್ದಿ

ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ 'ಜೈಲರ್' ಚಿತ್ರದ ಖಳನಟ ವಿನಾಯಕನ್ ಬಂಧನ

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಅಲ್ಲಿ ಆತನ ಕುಡಿತದ ಸ್ಥಿತಿ ಮತ್ತು ಅಸಂಬದ್ಧ ವರ್ತನೆಯು ಭದ್ರತಾ ಪಡೆಗಳು ಕ್ರಮ ಕೈಗೊಳ್ಳುವಂತೆ ಮಾಡಿದೆ.

ದಕ್ಷಿಣ ಚಿತ್ರರಂಗದ ಖ್ಯಾತ ನಟ ವಿನಾಯಕನ್ ಇತ್ತೀಚೆಗೆ ವಿವಾದಾತ್ಮಕ ಸನ್ನಿವೇಶವನ್ನು ಎದುರಿಸಬೇಕಾಯಿತು. ಸೂಪರ್‌ಸ್ಟಾರ್ ರಜನಿಕಾಂತ್ ಅವರ 'ಜೈಲರ್' ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ನಟನನ್ನು ವಿಮಾನ ನಿಲ್ದಾಣದಲ್ಲಿ ಕುಡಿದು ಗಲಾಟೆ ಮಾಡುತ್ತಿದ್ದಾಗ ಬಂಧಿಸಲಾಗಿದೆ.

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಅಲ್ಲಿ ಆತನ ಕುಡಿತದ ಸ್ಥಿತಿ ಮತ್ತು ಅಸಂಬದ್ಧ ವರ್ತನೆಯು ಭದ್ರತಾ ಪಡೆಗಳು ಕ್ರಮ ಕೈಗೊಳ್ಳುವಂತೆ ಮಾಡಿದೆ. ವಿನಾಯಕನ್ ಮದ್ಯ ಸೇವಿಸಿ ವಿಮಾನ ನಿಲ್ದಾಣವನ್ನು ತಲುಪಿದ್ದು ಅಲ್ಲಿ ತುಂಬಾ ಅಸಭ್ಯವಾಗಿ ವರ್ತಿಸಿದ್ದರು ಎಂದು ಹೇಳಲಾಗುತ್ತಿದೆ.

ವರದಿಗಳ ಪ್ರಕಾರ, ಅವರು CISF (ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್) ಜೊತೆಗೆ ವಾಗ್ವಾದ ನಡೆಸಿದ್ದು ಭದ್ರತಾ ತಪಾಸಣೆಗೆ ಅಡ್ಡಿಪಡಿಸಿದರು. ಅವರ ಅನಿರೀಕ್ಷಿತ ವರ್ತನೆಯು ವಿಮಾನ ನಿಲ್ದಾಣದಲ್ಲಿ ಅವ್ಯವಸ್ಥೆಯನ್ನು ಸೃಷ್ಟಿಸಿತು. ಇತರ ಪ್ರಯಾಣಿಕರು ಸಹ ಅನಾನುಕೂಲತೆಯನ್ನು ಎದುರಿಸಬೇಕಾಯಿತು. ಸದ್ಯ ವಿನಾಯಕ್ ಟಿಕೆಯನ್ನು ಠಾಣೆಗೆ ಕರೆದೊಯ್ದಿದ್ದು, ಆತನನ್ನು ವಿಚಾರಣೆಗೊಳಪಡಿಸಲಾಗಿದೆ. ಘಟನೆಯ ಸಂಪೂರ್ಣ ತನಿಖೆ ನಡೆಸಲಾಗುವುದು ಎಂದರು.

ಈಗ ಈ ವಿಚಾರದಲ್ಲಿ ಮುಂದಿನ ಕ್ರಮದ ಜವಾಬ್ದಾರಿ ಹೈದರಾಬಾದ್ ಪೊಲೀಸರ ಮೇಲಿದೆ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು, ವಿನಾಯಕ್ ವಿರುದ್ಧ ಯಾವ ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಘಟನೆಯು ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಜನರನ್ನು ಬೆಚ್ಚಿಬೀಳಿಸಿದೆ ಮಾತ್ರವಲ್ಲದೆ ಅವರ ಅಭಿಮಾನಿಗಳು ಮತ್ತು ಚಿತ್ರರಂಗದವರಲ್ಲಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT