ನಟ ಶಿವರಾಜ್ ಕುಮಾರ್ ಹಾಗೂ ಸುಬ್ರಹ್ಮಣ್ಯ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಆರ್ಮುಗಂ ರವಿಶಂಕರ್ ಪುತ್ರನಿಗೆ ಶಿವರಾಜ್ ಕುಮಾರ್ ಸಾಥ್: 'ಸುಬ್ರಹ್ಮಣ್ಯ' ಚಿತ್ರದ ಫಸ್ಟ್ ಲುಕ್ ರಿಲೀಸ್

ಗಣೇಶ ಚತುರ್ಥಿಯ ಶುಭ ದಿನದಂದು ಶಿವರಾಜ್ ಕುಮಾರ್ ಅವರು ಚಿತ್ರದ ಫಸ್ಟ್ ಲುಕ್ ರಿವೀಲ್ ಮಾಡಿ, ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ.

ಖ್ಯಾತ ಖಳನಟ ಪಿ ರವಿಶಂಕರ್ ಅವರ ಪುತ್ರ ಅದ್ವೈ ಅವರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಸಾಧ್ ನೀಡಿದ್ದು, ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಚಿತ್ರದ ಫಸ್ಟ್ ಲುಕ್'ನ್ನು ಬಿಡುಗಡೆ ಮಾಡಿದ್ದಾರೆ.

ಗಣೇಶ ಚತುರ್ಥಿಯ ಶುಭ ದಿನದಂದು ಶಿವರಾಜ್ ಕುಮಾರ್ ಅವರು ಚಿತ್ರದ ಫಸ್ಟ್ ಲುಕ್ ರಿವೀಲ್ ಮಾಡಿ, ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ.

ಉದ್ದನೆಯ ಕೂದಲು ಬಿಟ್ಟು ವಿನ್ಯಾಸಗೊಳಿಸಲಾದ ಉಡುಪಿನಲ್ಲಿ ಸುಂದರವಾಗಿ ಹಾಗೂ ಸೊಗಸಾಗಿ ಅದ್ವೈ ಕಾಣಿಸಿಕೊಂಡಿದ್ದಾರೆ. ಕಾಡು, ನಿಗೂಢ ಪ್ರವೇಶ ದ್ವಾರ, ಅದ್ವೈನನ್ನು ಬೆನ್ನಟ್ಟಿರುವ ತಂಡ ಫಸ್ಟ್ ಲುಕ್ ಪೋಸ್ಟರ್ ನಲ್ಲಿ ಗಮನಸೆಳೆಯುತ್ತಿದೆ.

ಮೇಲ್ನೋಟಕ್ಕೆ 'ಸುಬ್ರಹ್ಮಣ್ಯ' ಸಿನಿಮಾ ಒಂದು ಸೋಶಿಯೋ-ಫ್ಯಾಂಟಸಿ ಶೈಲಿಯ ಸಿನಿಮಾ ಎನಿಸುತ್ತಿದ್ದು, ಜೊತೆಗೆ ಅಡ್ವೆಂಚರ್ ಎಲಿಮೆಂಟ್ಸ್‌ ಕೂಡ ಸಿನಿಮಾದಲ್ಲಿ ಕಂಡು ಬಂದಿದೆ.

ಈಗಾಗಲೇ ಸಿನಿಮಾದ ಶೇ.60ರಷ್ಟು ಚಿತ್ರೀಕರಣ ಶೂಟಿಂಗ್ ಪೂರ್ಣಗೊಂಡಿದ್ದು. ಈಗಾಗಲೇ ಶೂಟಿಂಗ್ ಆಗಿರುವ ಸಿನಿಮಾದ ಗ್ರಾಫಿಕ್ಸ್ ಕೆಲಸಗಳು ಬೆಂಗಳೂರು, ಮುಂಬೈ, ಹೈದರಾಬಾದ್‌ ಹಾಗೂ ಚೆನ್ನೈನ ಪ್ರತಿಷ್ಠಿತ ಸ್ಟುಡಿಯೋಗಳಲ್ಲಿ ನಡೆಯುತ್ತಿದೆ.

ಚಿತ್ರವನ್ನು ಎಸ್.ಜಿ ಮೂವಿ ಮೇಕರ್ಸ್ ಸಂಸ್ಥೆಯ ಮೂಲಕ ತಿರುಮಲ ರೆಡ್ಡಿ ಹಾಗೂ ಅನಿಲ್ ಕಡಿಯಾಲ ಅವರು ನಿರ್ಮಾಣ ಮಾಡುತ್ತಿದ್ದಾರೆ. ಪ್ರವೀಣಾ ಕಡಿಯಾಲ ಮತ್ತು ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ರವಿ ಬಸ್ರೂರ್ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಸುಬ್ರಹ್ಮಣ್ಯ ಸಿನಿಮಾಗೆ ವಿಘ್ನೇಶ್ ರಾಜ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ವಿಜಯ್ ಎಂ ಕುಮಾರ್ ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಮಾಲಾಶ್ರೀ ಅಭಿನಯದ ದುರ್ಗಿ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ರವಿಶಂಕರ್​ ಅವರು ಈಗ ಮಗನ ಸಿನಿಮಾಗಾಗಿ ಮತ್ತೆ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಬರೋಬ್ಬರಿ 2 ದಶಕದ ಬಳಿಕ ಅವರು ಡೈರೆಕ್ಟರ್​ ಕ್ಯಾಪ್​ ಧರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT