ಸಿನಿಮಾ ಸುದ್ದಿ

15 ವರ್ಷಗಳ ದಾಂಪತ್ಯ ಜೀವನ ಅಂತ್ಯ: ಪತ್ನಿ ಆರತಿಗೆ ನಟ ಜಯಂ ರವಿ ವಿಚ್ಛೇದನ

ಜಯಂ ರವಿ ಮತ್ತು ಆರತಿ ನಡುವಿನ ದಾಂಪತ್ಯ ಜೀವನಕ್ಕೆ ಪೂರ್ಣ ವಿರಾಮ ಬಿದ್ದಿದೆ. 15 ವರ್ಷಗಳ ಹಿಂದೆ ಜಯಂ ರವಿ ಮತ್ತು ಆರತಿ ಅವರು ಮದುವೆ ಆಗಿದ್ದರು. ಈ ಜೋಡಿಗೆ ಇಬ್ಬರು ಗಂಡು ಮಕ್ಕಳು ಇದ್ದಾರೆ.

ಕಾಲಿವುಡ್ ಖ್ಯಾತ ನಟ ಜಯಂ ರವಿ ಅವರು ಡಿವೋರ್ಸ್​ ಪಡೆದುಕೊಂಡಿದ್ದಾರೆ. ಪತ್ನಿ ಆರತಿ ಜೊತೆಗಿನ ಸಂಸಾರಕ್ಕೆ ಅವರು ಅಂತ್ಯ ಹಾಡಿದ್ದಾರೆ. ಜಯಂ ರವಿ ಮತ್ತು ಆರತಿ ನಡುವಿನ ದಾಂಪತ್ಯ ಜೀವನಕ್ಕೆ ಪೂರ್ಣ ವಿರಾಮ ಬಿದ್ದಿದೆ. 15 ವರ್ಷಗಳ ಹಿಂದೆ ಜಯಂ ರವಿ ಮತ್ತು ಆರತಿ ಅವರು ಮದುವೆ ಆಗಿದ್ದರು. ಈ ಜೋಡಿಗೆ ಇಬ್ಬರು ಗಂಡು ಮಕ್ಕಳು ಇದ್ದಾರೆ. ಇಷ್ಟು ವರ್ಷಗಳ ಬಳಿಕ ರವಿ ಮತ್ತು ಆರತಿ ಅವರು ಡಿವೋರ್ಸ್​ ಪಡೆದಿದ್ದು ಅವರ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.

ವಿಚ್ಛೇದನ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಜಯಂ ರವಿ, ವೈಯಕ್ತಿಕ ಕಾರಣಗಳಿಂದ ಬೇರ್ಪಟ್ಟಿರುವುದಾಗಿ’ ತಿಳಿಸಿದ್ದಾರೆ. ತರಾತುರಿಯಲ್ಲಿ ಈ ನಿರ್ಧಾರಕ್ಕೆ ಬಂದಿಲ್ಲ. ವಿಚ್ಛೇದನ ತೆಗೆದುಕೊಳ್ಳುವ ಮುನ್ನ ಈ ಬಗ್ಗೆ ಹಲವು ಬಾರಿ ಚರ್ಚಿಸಿದ್ದೇವೆ. ಇಬ್ಬರ ಹಿತದೃಷ್ಟಿಯನ್ನು ಪರಿಗಣಿಸಿ ದಾಂಪತ್ಯ ಜೀವನವನ್ನು ಕೊನೆಗೊಳಿಸಿದ್ದೇವೆ ಎಂದು ಹೇಳಿದ್ದಾರೆ. ಇಂತಹ ಸಮಯದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸಬೇಕಾಗಿ ಎಲ್ಲರಲ್ಲಿಯೂ ಮನವಿ ಮಾಡುತ್ತೇನೆ. ಈ ವಿಷಯದಲ್ಲಿ ಯಾವುದೇ ಊಹೆ, ವದಂತಿ ಅಥವಾ ಆರೋಪಗಳಿಗೆ ಕಿವಿ ಕೊಡಬೇಡಿ. ಜನರಿಗೆ ಮನರಂಜನೆ ನೀಡುವುದು ನನ್ನ ಮೊದಲ ಆದ್ಯತೆಯಾಗಿದ್ದು, ನನಗೆ ಬೆಂಬಲ ನೀಡಿದ್ದಕ್ಕಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಹಲವು ಅಧ್ಯಾಯಗಳನ್ನು ಹೊಂದಿದ ಪಯಣವೇ ಜೀವನ. ಎಲ್ಲ ಅಧ್ಯಾಯಕ್ಕೂ ಅದರದ್ದೇ ಆದ ಅವಕಾಶ ಮತ್ತು ಸವಾಲುಗಳು ಇವೆ. ನೀವು ನನ್ನ ತೆರೆ ಮೇಲಿನ ಮತ್ತು ತೆರೆ ಹಿಂದಿನ ಜೀವನವನ್ನು ಗಮನಿಸುತ್ತಾ ಬಂದಿದ್ದೀರಿ. ನಾನು ಯಾವಾಗಲೂ ಅಭಿಮಾನಿಗಳು ಮತ್ತು ಮಾಧ್ಯಮದವರ ಜೊತೆ ಪಾರದರ್ಶಕವಾಗಿ ನಡೆದುಕೊಳ್ಳಲು ಪ್ರಯತ್ನಿಸಿದ್ದೇನೆ. ಇಂದು ನಾನು ಭಾರವಾದ ಮನಸ್ಸಿನಿಂದ ವೈಯಕ್ತಿಕ ಜೀವನದ ಈ ವಿಷಯ ತಿಳಿಸುತ್ತಿದ್ದೇನೆ’ ಎಂದು ಜಯಂ ರವಿ ಅವರು ತಮ್ಮ ಬರಹ ಆರಂಭಿಸಿದ್ದಾರೆ. ಅಭಿಮಾನಿಗಳಿಗೆ ಮನರಂಜನೆ ನೀಡುವುದೇ ನನ್ನ ಮೊದಲ ಆದ್ಯತೆ ಆಗಿರುತ್ತದೆ. ನಾನು ಎಂದೆಂದಿಗೂ ನಿಮ್ಮ ಜಯಂ ರವಿ ಆಗಿರುತ್ತೇನೆ. ನಿಮ್ಮ ಬೆಂಬಲವೇ ನನಗೆ ಸರ್ವಸ್ವ. ಈ ಎಲ್ಲ ವರ್ಷಗಳಲ್ಲಿ ನೀವು ನನಗೆ ನೀಡಿದ ಪ್ರೀತಿಗೆ ಚಿರಋಣಿ. ಅರ್ಥ ಮಾಡಿಕೊಂಡು ಬೆಂಬಲ ಮುಂದುವರಿಸಿದ್ದಕ್ಕೆ ಧನ್ಯವಾದಗಳು’ ಎಂದು ಜಯಂ ರವಿ ಅವರು ಬರಹ ಪೂರ್ಣಗೊಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT