ರಾಶಿ ಚಿತ್ರದ ಸ್ಟಿಲ್. 
ಸಿನಿಮಾ ಸುದ್ದಿ

'ರಾಶಿ' ಚಿತ್ರಕ್ಕೆ ನಟ ಆದಿತ್ಯ ಶಶಿಕುಮಾರ್ ನಾಯಕ

ಆದಿತ್ಯ ಶಶಿಕುಮಾರ್ ಅವರ ಹುಟ್ಟುಹಬ್ಬದ ದಿನವೇ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡುವ ಮೂಲಕ ನಾಯಕನಿಗೆ ಚಿತ್ರತಂಡ ವಿಶೇಷ ಉಡುಗೊರೆ ನೀಡಿದೆ.

ಸ್ಯಾಂಡಲ್ ವುಡ್ ಹಿರಿಯ ನಟ ಶಶಿಕುಮಾರ್ ಪುತ್ರ ಆದಿತ್ಯ ಶಶಿಕುಮಾರ್ ಅವರ ಹೊಸ ಚಿತ್ರ ಸೆಟ್ಟೇರಿದ್ದು, ಚಿತ್ರಕ್ಕೆ ರಾಶಿ ಎಂದು ಹೆಸರಿಡಲಾಗಿದೆ. ಚಿತ್ರದಲ್ಲಿ ಆದಿತ್ಯ ಅವರಿಗೆ ಕಿರುತೆರೆ ನಟಿ ಸಮೀಕ್ಷಾ ಜೋಡಿಯಾಗಿದ್ದಾರೆ.

ಆದಿತ್ಯ ಶಶಿಕುಮಾರ್ ಅವರ ಹುಟ್ಟುಹಬ್ಬದ ದಿನವೇ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡುವ ಮೂಲಕ ನಾಯಕನಿಗೆ ಚಿತ್ರತಂಡ ವಿಶೇಷ ಉಡುಗೊರೆ ನೀಡಿದೆ.

ಚಿತ್ರದ ಕುರಿತು ಮಾತನಾಡಿರುವ ಆದಿತ್ಯ ಶಶಿಕುಮಾರ್ ಅವರು, ಇದು ನಾನು ನಾಯಕನಾಗಿ ನಟಿಸುತ್ತಿರುವ ಮೂರನೇ ಚಿತ್ರ‌, ಈ ಚಿತ್ರದ ಕಥೆ ಬಹಳ ಚೆನ್ನಾಗಿದೆ. ನನ್ನ ಹುಟ್ಟುಹಬ್ಬದ ದಿನ ಈ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು ಖುಷಿಯಾಗಿದೆ. ಇಷ್ಟು ದಿನ ಅಕ್ಷಿತ್ ಶಶಿಕುಮಾರ್ ಆಗಿದ್ದ ನಾನು, ಈಗ ಆದಿತ್ಯ ಶಶಿಕುಮಾರ್ ಎಂದು ಹೆಸರು ಬದಲಿಸಿಕೊಂಡಿದ್ದೇನೆ. ಇನ್ನು ಮುಂದೆ ಎಲ್ಲರೂ ಆದಿತ್ಯ ಶಶಿಕುಮಾರ್ ಎಂದೇ ಕರೆಯಬೇಕೆಂದು ವಿನಂತಿಸುತ್ತೇನೆ ಎಂದು ಹೇಳಿದರು.

ಮಂತ್ರಾಲಯದಲ್ಲಿ ರಾಯರ ದರ್ಶನ ಮುಗಿಸಿಕೊಂಡು ಬರುವಾಗ ನಿರ್ಮಾಪಕ ಅಖಿಲೇಶ್ ಅವರು ನನ್ನನ್ನು ಕರೆದು ಈ ಚಿತ್ರವನ್ನು ನಿರ್ದೇಶಿಸಬೇಕೆಂದರು. ಅಖಿಲೇಶ್ ಅವರೆ ಈ ಚಿತ್ರದ ಕಥೆ ಬರೆದಿದ್ದಾರೆ. ನಾನು ಚಿತ್ರಕಥೆ, ಬರೆದು, ಗೀತರಚನೆ ಮಾಡಿ, ಸಂಗೀತ ನಿರ್ದೇಶನದೊಂದಿಗೆ ನಿರ್ದೇಶನನ್ನು ಮಾಡುತ್ತಿದ್ದೇನೆ. “ಟ್ರಿಗರ್” ಚಿತ್ರದ ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರವಿದು. ಈ ಚಿತ್ರಕ್ಕೆ ಅಭಿನಂದನ್ ದೇಶಪ್ರಿಯ ಸಂಭಾಷಣೆ, ನವೀನ್ ಸೂರ್ಯ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ‌, ಮಂಜು ಮಹದೇವ್ ಹಿನ್ನೆಲೆ ಸಂಗೀತ ಹಾಗೂ ಬಂಡೆ ಚಂದ್ರು ಅವರ ಸಾಹಸ ನಿರ್ದೇಶನವಿದೆ. ಇತ್ತೀಚಿಗೆ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆದಿದೆ. ಈ ಪ್ರೇಮ ಕಥಾನಕಕ್ಕೆ ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ವಿಜಯ್ ಪಾಳೇಗಾರ್ ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT