ನಟ ಸುದೀಪ್ 
ಸಿನಿಮಾ ಸುದ್ದಿ

Bigg Boss Kannada Season 11: ನಿರೂಪಣೆ ಮಾಡೋದು ಬೇಡ ಎಂದು ಯೋಚಿಸಿದ್ದು ನಿಜ- ನಟ ಸುದೀಪ್

ನಾವು ತಂಡ ಮಾಡದೇ ಇದ್ದರೂ ಅವರು ಒಳಗಡೆ ಹೋದ ನಂತರ ತಮ್ಮ ತಂಡ ಮಾಡಿಕೊಳ್ಳುತ್ತಾರೆ. ಹೀಗಾಗಿ ಈ ಬಾರಿ ನಾವೇ ಸ್ವರ್ಗ ಮತ್ತು ನರಕ ಎಂದು ಎರಡು ತಂಡ ಮಾಡಿ ಅವರನ್ನು ಮನೆಯೊಳಗೆ ಕಳುಹಿಸುತ್ತಿದ್ದೇವೆ.

ಕನ್ನಡದ ‘ಬಿಗ್ ಬಾಸ್ ಸೀಸನ್ 11’ರ ಶುರುವಾಗುತ್ತಿದ್ದಂತೆ ಈ ಬಾರಿ ಸುದೀಪ್ ನಿರೂಪಣೆ ಮಾಡುತ್ತಾರಾ? ಇಲ್ವಾ? ಹೀಗೆ ಹಲವು ವಿಚಾರಗಳು ಚರ್ಚೆಗೆ ಗ್ರಾಸವಾಗಿತ್ತು. ಆ ನಂತರ ಬಿಗ್ ಬಾಸ್ ಪ್ರೋಮೋ ಮೂಲಕ ಎಲ್ಲಾ ವದಂತಿಗಳಿಗೂ ಉತ್ತರ ಸಿಕ್ಕಿತ್ತು. ಆದರೆತ ಅಸಲಿಗೆ ಏನಾಗಿತ್ತು ಎಂಬುದನ್ನು ನಟ ಸುದೀಪ್‌ ಅವರು ವಿವರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸೀಸನ್ ನಿರೂಪಣೆ ಮಾಡೋದು ಬೇಡ ಎಂದು ಯೋಚನೆ ಮಾಡಿದ್ದು ನಿಜ, ಕಳೆದ 10 ವರ್ಷಗಳಿಂದ 'ಬಿಗ್ ಬಾಸ್' ಶೋ ನಿರೂಪಣೆ ಮಾಡುತ್ತಲೇ ಬಂದಿದ್ದೇನೆ. ಈ ಬಾರಿ ಬೇರೆಯವರು ನಿರೂಪಣೆ ಮಾಡಲಿ ಎಂದೇ ನಿರ್ಧರಿಸಿದ್ದೆ, ಹಾಗಂತ ವಾಹಿನಿಯ ಜೊತೆ ಒಡನಾಟ ಚೆನ್ನಾಗಿರಲಿಲ್ಲ ಎಂದಲ್ಲ. ತಂಡ ನನ್ನನ್ನು ತಂಬಾ ಚೆನ್ನಾಗಿ ನೋಡಿಕೊಂಡಿದೆ. ಪ್ರತಿ ಬಾರಿ ಬಿಗ್ ಬಾಸ್ ಶುರು ಆಗ್ತಿದ್ದಂತೆ ನನ್ನ ಲೈಫ್ ಮ್ಯೂಟ್ ಆಗುತ್ತದೆ. 4 ದಿನ ಹೊರಗೆ ಹೋಗಬಹುದು ಅಷ್ಟೇ, ಮತ್ತೆ ಶುಕ್ರವಾರ ಬರಬೇಕಾಗುತ್ತದೆ. ಹಾಗಾಗಿ 10 ವರ್ಷ ಆಯ್ತು ಬೇರೆಯವರು ಮಾಡಲಿ ಎಂದೆನಿಸಿತ್ತು. ಬಳಿಕ ನನ್ನ ಒಪ್ಪಿಸೋಕೆ ವಾಹಿನಿ ತಂಡ ಮನೆಗೆ ಬಂದಿತ್ತು. ಬಿಗ್ ಬಾಸ್ ಅನ್ನೋದು ಬ್ಯೂಟಿಫುಲ್ ವೇದಿಕೆ, ಹಾಗಾಗಿ ಆ ನಂತರ ನಿರೂಪಣೆ ಮಾಡಲು ಒಪ್ಪಿಕೊಂಡೆ ಎಂದು ಹೇಳಿದರು.

ಇನ್ನು ಕುರಿತು ಮಾಹಿತಿ ನೀಡಿದ ಸುದೀಪ್ ಅವರು, ಈ ಬಾರಿ ಸ್ವರ್ಗ ನರಕದ ಕಥೆ ಬಿಗ್ ಬಾಸ್‌ನಲ್ಲಿದೆ, ನಾವು ತಂಡ ಮಾಡದೇ ಇದ್ದರೂ ಅವರು ಒಳಗಡೆ ಹೋದ ನಂತರ ತಮ್ಮ ತಂಡ ಮಾಡಿಕೊಳ್ಳುತ್ತಾರೆ. ಹೀಗಾಗಿ ಈ ಬಾರಿ ನಾವೇ ಸ್ವರ್ಗ ಮತ್ತು ನರಕ ಎಂದು ಎರಡು ತಂಡ ಮಾಡಿ ಅವರನ್ನು ಮನೆಯೊಳಗೆ ಕಳುಹಿಸುತ್ತಿದ್ದೇವೆ.

ಉಳಿದಂತೆ ಈ ಬಾರಿಯ ಬಿಗ್ ಬಾಸ್ ಈ ಸೆಪ್ಟೆಂಬರ್ 29ರಿಂದ ಶುರುವಾಗಲಿದೆ. ಪ್ರತಿ ದಿನ ರಾತ್ರಿ 09-30ರಿಂದ ನೀವು ಈ ಕಾರ್ಯಕ್ರಮವನ್ನು ನೋಡಬಹುದು. ಇನ್ನೂ ಮನೆಯ ಒಳಗೆ ಈ ಬಾರಿ ಯಾರೆಲ್ಲ ಬರಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಅವತ್ತೇ ಸಿಗಲಿದೆಯಾದರೂ ಸೆಪ್ಟೆಂಬರ್ 28 ರಂದು ರಾಜಾ ರಾಣಿ ರಿಲೋಡೆಡ್ ಫಿನಾಲೆ ಸಂಚಿಕೆಯಲ್ಲಿ ಮಾಹಿತಿಗಳು ಬಹಿರಂಗಗೊಳ್ಳಲಿದೆ ಎನ್ನಲಾಗಿದೆ.

ಈ ಬಾರಿಯ ಸೀಸನ್ ನಲ್ಲಿ ಯಾರು ನರಕಕ್ಕೆ ಹಾಗೂ ಯಾರೂ ಸ್ವರ್ಗಕ್ಕೆ ಹೋಗಬೇಕೆಂಬ ನಿರ್ಧಾರವನ್ನು ವೀಕ್ಷಕರ ಕೈಗೆ ನೀಡಲಾಗುತ್ತಿದ್ದು, ಆನ್'ಲೈನ್ ಮತದ ಮೂಲಕ ನಿರ್ಧಾರವಾಗಲಿದೆ. ಈ ಬಾರಿಯ ಕಾರ್ಯಕ್ರಮದಲ್ಲಿ ಪ್ರೇಕ್ಷಕರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆಂದು ಸುದೀಪ್ ಅವರು ತಿಳಿಸಿದ್ದಾರೆ,

ವಯೋಕಾಮ್ ಎಂಟರ್‌ಟೈನ್‌ಮೆಂಟ್​​ನ ಪ್ರೆಸಿಡೆಂಟ್ ಅಲೋಕ್ ಜೈನ್ ಅವರು ಮಾತನಾಡಿ, ನಟ ಸುದೀಪ್ ಅವರ ವಿವಿಧ ಪ್ರದೇಶಗಳ ಪ್ರೇಕ್ಷಕರ ಸಂಪರ್ಕ ಸಾಧಿಸುವ ಸಾಮರ್ಥ್ಯವನ್ನು ಶ್ಲಾಘಿಸಿದರು. ಈ ಬಾರಿ ಸ್ವರ್ಗ ಮತ್ತು ನರಕ ಥೀಮ್ ಇರಲಿದ್ದು, ವೀಕ್ಷಕರಿಗೆ ಮನರಂಜನೆ ನೀಡಲಿದೆ ಎಂದು ಹೇಳಿದರು.

ಬನಿಜಯ್ ಏಷ್ಯಾದ ಸಂಸ್ಥಾಪಕರಾದ ದೀಪಕ್ ಧರ್ ಮಾತನಾಡಿ, ಭಾರತ, ಕರ್ನಾಟಕ, ಭಾರತ ಮತ್ತು ಅದರಾಚೆಗಿನ ವೀಕ್ಷಕರಿಗೂ ಮನರಂಜನೆ ನೀಡಲು ಬದ್ಧರಾಗಿದ್ದೇವೆ. ಈ ಸೀಸನ್ ನಮ್ಮ ಪ್ರೇಕ್ಷಕರನ್ನು ರೋಮಾಂಚನಗೊಳಿಸುವ ವಿಶ್ವಾಸವಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಳಗಾವಿ ಅಧಿವೇಶನ: ಶಾಮನೂರು ಶಿವಶಂಕರಪ್ಪಗೆ ಸಂತಾಪ; ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ನಿತಿನ್ ನಬಿನ್ ನೇರವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷರ ಹುದ್ದೆಗೆ ನೇಮಕ ಆಗಲಿಲ್ಲ ಏಕೆ?: ಕಾರ್ಯಾಧ್ಯಕ್ಷರ ಪಾತ್ರವೇನು?

Video: Messi ಕಾರ್ಯಕ್ರಮದಲ್ಲಿ 'ಮಹಾ' ಸಿಎಂಗೆ ಪ್ರೇಕ್ಷಕರಿಂದ boo, boo... ಮುಜುಗರ ತಪ್ಪಿಸಿದ ಫಡ್ನವಿಸ್ ಚಾಣಾಕ್ಷತನ!

ಉದ್ಧವ್‌ ಠಾಕ್ರೆಗೆ ಭಾರೀ ಹಿನ್ನಡೆ; ಬಿಜೆಪಿ ಸೇರಿದ ತೇಜಸ್ವಿ ಘೋಸಲ್ಕರ್

ಕಾಂಗ್ರೆಸ್ 'ವೋಟ್ ಚೋರಿ' ವಿವಾದ: ಇದಕ್ಕೂ 'ಇಂಡಿಯಾ ಬಣ'ಕ್ಕೂ ಯಾವುದೇ ಸಂಬಂಧ ಇಲ್ಲ- ಸಿಎಂ ಒಮರ್ ಅಬ್ದುಲ್ಲಾ

SCROLL FOR NEXT