ಪ್ರಕರಣ ತನಿಖಾ ಹಂತದಲ್ಲಿದೆ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ಪ್ರಕರಣ ತನಿಖಾ ಹಂತದಲ್ಲಿದೆ' ಸಿನಿಮಾ ಅಕ್ಟೋಬರ್ 18ಕ್ಕೆ ಬಿಡುಗಡೆ

ಚಿತ್ರಕ್ಕೆ ಚಿಂತನ್ ಕಂಬಣ್ಣ ಬಂಡವಾಳ ಹೂಡಿದ್ದು, ಕರದಾಯಾಮ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ಚಿತ್ರ ನಿರ್ಮಾಣ ಮಾಡಿರುವ ಚಿಂತನ್ ಅವರು ಸಿನಿಮಾದಲ್ಲಿ ಒಂದು ಪಾತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ.

ಶೀರ್ಷಿಕೆ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿರುವ ಪ್ರಕರಣ ತನಿಖಾ ಹಂತದಲ್ಲಿದೆ ಚಿತ್ರ ಆಕ್ಟೋಬರ್ 18ಕ್ಕೆ ಬಿಡುಗಡೆಯಾಗುತ್ತಿದೆ.

ಇತ್ತೀಚೆಗಷ್ಟೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಈ ಸಂದರ್ಭದಲ್ಲಿ ಚಿತ್ರ ತಂಡ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ.

ಚಿತ್ರ ಕುರಿತು ಮಾತನಾಡಿರುವ ನಿರ್ಮಾಪಕ ಚಿಂತನ್ ಕಂಬಣ್ಣ ಅವರು, ನೈಜ ಜೀವನ ಕಥೆಗೆ ಚಿತ್ರಕಥೆ ಹೊಂದಿಕೆಯಾಗುವಂತಿದೆ. ಕಥೆಯಲ್ಲಿ ಸಾಕಷ್ಟು ಟ್ವಿಸ್ಟ್ ಗಳಿದೆ. ನಮ್ಮ ತಂದ ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದು, ಆಧುನಿಕ ಯುಗದ ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ಕಥೆ ಹೆಣೆಯಲಾಗಿದೆ ಎಂದು ಹೇಳಿದ್ದಾರೆ.

ಚಿತ್ರಕ್ಕೆ ಚಿಂತನ್ ಕಂಬಣ್ಣ ಬಂಡವಾಳ ಹೂಡಿದ್ದು, ಕರದಾಯಾಮ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ಚಿತ್ರ ನಿರ್ಮಾಣ ಮಾಡಿರುವ ಚಿಂತನ್ ಅವರು ಸಿನಿಮಾದಲ್ಲಿ ಒಂದು ಪಾತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಅಲ್ಲದೆ, ಮಹೀನ್‌ ಕುಬೇರ್‌, ಮುತ್ತುರಾಜ್‌ ಟಿ, ಗಗನ್‌ ಪ್ರಮುಖ ಪಾತ್ರಗಳಲ್ಲಿದ್ದಾರೆ.

‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರಕ್ಕೆ ಮೋಹನ್ ಎಂ.ಎಸ್ ಮತ್ತು ಜಗದೀಶ್ ಆರ್ ಛಾಯಾಗ್ರಹಣ, ನಾನಿ ಕೃಷ್ಣ ಸಂಕಲನ ಮತ್ತು ಶಿವೋಂ ಸಂಗೀತವಿದೆ. ವಿ.ಎಫ್.ಎಕ್ಸ್ ಜವಾಬ್ದಾರಿಯನ್ನು ಲಕ್ಷ್ಮೀಪತಿ ಎಂ.ಕೆ ಹೊತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT