ಪ್ರಕರಣ ತನಿಖಾ ಹಂತದಲ್ಲಿದೆ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ಪ್ರಕರಣ ತನಿಖಾ ಹಂತದಲ್ಲಿದೆ' ಸಿನಿಮಾ ಅಕ್ಟೋಬರ್ 18ಕ್ಕೆ ಬಿಡುಗಡೆ

ಚಿತ್ರಕ್ಕೆ ಚಿಂತನ್ ಕಂಬಣ್ಣ ಬಂಡವಾಳ ಹೂಡಿದ್ದು, ಕರದಾಯಾಮ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ಚಿತ್ರ ನಿರ್ಮಾಣ ಮಾಡಿರುವ ಚಿಂತನ್ ಅವರು ಸಿನಿಮಾದಲ್ಲಿ ಒಂದು ಪಾತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ.

ಶೀರ್ಷಿಕೆ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿರುವ ಪ್ರಕರಣ ತನಿಖಾ ಹಂತದಲ್ಲಿದೆ ಚಿತ್ರ ಆಕ್ಟೋಬರ್ 18ಕ್ಕೆ ಬಿಡುಗಡೆಯಾಗುತ್ತಿದೆ.

ಇತ್ತೀಚೆಗಷ್ಟೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಈ ಸಂದರ್ಭದಲ್ಲಿ ಚಿತ್ರ ತಂಡ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ.

ಚಿತ್ರ ಕುರಿತು ಮಾತನಾಡಿರುವ ನಿರ್ಮಾಪಕ ಚಿಂತನ್ ಕಂಬಣ್ಣ ಅವರು, ನೈಜ ಜೀವನ ಕಥೆಗೆ ಚಿತ್ರಕಥೆ ಹೊಂದಿಕೆಯಾಗುವಂತಿದೆ. ಕಥೆಯಲ್ಲಿ ಸಾಕಷ್ಟು ಟ್ವಿಸ್ಟ್ ಗಳಿದೆ. ನಮ್ಮ ತಂದ ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದು, ಆಧುನಿಕ ಯುಗದ ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ಕಥೆ ಹೆಣೆಯಲಾಗಿದೆ ಎಂದು ಹೇಳಿದ್ದಾರೆ.

ಚಿತ್ರಕ್ಕೆ ಚಿಂತನ್ ಕಂಬಣ್ಣ ಬಂಡವಾಳ ಹೂಡಿದ್ದು, ಕರದಾಯಾಮ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ಚಿತ್ರ ನಿರ್ಮಾಣ ಮಾಡಿರುವ ಚಿಂತನ್ ಅವರು ಸಿನಿಮಾದಲ್ಲಿ ಒಂದು ಪಾತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಅಲ್ಲದೆ, ಮಹೀನ್‌ ಕುಬೇರ್‌, ಮುತ್ತುರಾಜ್‌ ಟಿ, ಗಗನ್‌ ಪ್ರಮುಖ ಪಾತ್ರಗಳಲ್ಲಿದ್ದಾರೆ.

‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರಕ್ಕೆ ಮೋಹನ್ ಎಂ.ಎಸ್ ಮತ್ತು ಜಗದೀಶ್ ಆರ್ ಛಾಯಾಗ್ರಹಣ, ನಾನಿ ಕೃಷ್ಣ ಸಂಕಲನ ಮತ್ತು ಶಿವೋಂ ಸಂಗೀತವಿದೆ. ವಿ.ಎಫ್.ಎಕ್ಸ್ ಜವಾಬ್ದಾರಿಯನ್ನು ಲಕ್ಷ್ಮೀಪತಿ ಎಂ.ಕೆ ಹೊತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾಲೋಪ: ನಕಲಿ PMO ಅಧಿಕಾರಿ, ಗನ್ ಹೊಂದಿದ್ದ ಇಬ್ಬರ ಬಂಧನ!

ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್: 59ನೇ ಸಿಹೆಚ್ ಹೆಚ್ ಕೋರ್ಟ್ ಆದೇಶ ರದ್ದು!

ಕೊನೆಗೂ ಬಳ್ಳಾರಿಯಲ್ಲಿ ಬಿಜೆಪಿ ಸಮಾವೇಶಕ್ಕೆ ಅನುಮತಿ ಕೊಟ್ಟ ಡಿಕೆಶಿ ಸರ್ಕಾರ!

'ಮಣಿಪುರದ ಹೆಮ್ಮೆಯ ಪುತ್ರ'.. 'ನಮ್ಮವರ ಮೇಲೆ ಕೈ ಹಾಕಿದ್ರೆ ಯುದ್ಧವೇ ನಡೆಯಲಿದೆ': Binalakshmi Nepram ಎಚ್ಚರಿಕೆ

ಪರಪ್ಪನ ಅಗ್ರಹಾರ ನಂತರ ಮಂಗಳೂರು ಜೈಲಿನ ಮೇಲೆ ಪೊಲೀಸ್ ದಾಳಿ; 9 ಕೈದಿಗಳಿಂದ 10 ಮೊಬೈಲ್ ವಶ!