ಚಿತ್ರ ತಂಡದೊಂದಿಗೆ ದೇವೇಗೌಡ. 
ಸಿನಿಮಾ ಸುದ್ದಿ

ಲತಾಶ್ರೀ ಸಾರಥ್ಯದ 'ಹರ್ಷಿಣಿ ಸಿನಿಮಾಸ್' ಚಿತ್ರ ನಿರ್ಮಾಣ ಸಂಸ್ಥೆಗೆ ದೇವೇಗೌಡ ಚಾಲನೆ

ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುವ ಆಶಯ ಹೊಂದಿರುವ ಹರ್ಷಿಣಿ ಸಿನಿಮಾಸ್ ಸಂಸ್ಥೆಯು ಮೊದಲ ಚಿತ್ರವಾಗಿ “ಕಿರುನಗೆ” ಚಿತ್ರವನ್ನು ನಿರ್ಮಿಸುತ್ತಿದೆ.

ಮಾಜಿ ಶಾಸಕ ದೇವಾನಂದ್ ಪೂ ಚವ್ಹಾಣ ಅವರ ಪುತ್ರಿ ಲತಾಶ್ರೀ ಡಿ.ಸಿ ಅವರು ಹರ್ಷಿಣಿ ಸಿನಿಮಾಸ್ ಎಂಬ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ಈ ನೂತನ ನಿರ್ಮಾಣ ಸಂಸ್ಥೆಗೆ ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವೇಗೌಡ ಅವರು ಚಾಲನೆ ನೀಡಿ, ಶುಭ ಹಾರೈಸಿದರು,

ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುವ ಆಶಯ ಹೊಂದಿರುವ ಹರ್ಷಿಣಿ ಸಿನಿಮಾಸ್ ಸಂಸ್ಥೆಯು ಮೊದಲ ಚಿತ್ರವಾಗಿ “ಕಿರುನಗೆ” ಚಿತ್ರವನ್ನು ನಿರ್ಮಿಸುತ್ತಿದೆ.

“ಸತ್ಯಂ” ಸೇರಿದಂತೆ ಈಗಾಗಲೇ 4 ಚಿತ್ರಗಳನ್ನು ನಿರ್ದೇಶಿಸಿರುವ ಅಶೋಕ್ ಕಡಬ “ಕಿರುನಗೆ” ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಮಹಿಳಾ ಪ್ರಧಾನವಾದ ಈ ಚಿತ್ರಕ್ಕೆ ಲತಾಶ್ರೀ ಡಿ.ಸಿ ಅವರೇ ಕಥೆ ಬರೆದಿದ್ದಾರೆ. ಚಿತ್ರಕಥೆ ಅಶೋಕ್ ಕಡಬ ಅವರದು. ಖ್ಯಾತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ಅವರ ತಂಡದ ಸುಕೃತ್ “ಕಿರುನಗೆ” ಗೆ ಸಂಗೀತ ನೀಡಲಿದ್ದಾರೆ‌.

ಹಿಳಾ ಪ್ರಧಾನ ಚಿತ್ರವಾಗಿರುವುದರಿಂದ ಕನ್ನಡ ಖ್ಯಾತ ನಟಿಯೊಬ್ಬರು ಈ ಚಿತ್ರದಲ್ಲಿ ನಟಿಸಲಿದ್ದಾರೆ. ನಾಯಕಿ ಸೇರಿದಂತೆ ಉಳಿದ ತಾರಾಬಳಗದ ಬಗ್ಗೆ ಸದ್ಯದಲ್ಲೇ ಮಾಹಿತಿ ನೀಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ