ಚಿತ್ರ ತಂಡದೊಂದಿಗೆ ದೇವೇಗೌಡ. 
ಸಿನಿಮಾ ಸುದ್ದಿ

ಲತಾಶ್ರೀ ಸಾರಥ್ಯದ 'ಹರ್ಷಿಣಿ ಸಿನಿಮಾಸ್' ಚಿತ್ರ ನಿರ್ಮಾಣ ಸಂಸ್ಥೆಗೆ ದೇವೇಗೌಡ ಚಾಲನೆ

ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುವ ಆಶಯ ಹೊಂದಿರುವ ಹರ್ಷಿಣಿ ಸಿನಿಮಾಸ್ ಸಂಸ್ಥೆಯು ಮೊದಲ ಚಿತ್ರವಾಗಿ “ಕಿರುನಗೆ” ಚಿತ್ರವನ್ನು ನಿರ್ಮಿಸುತ್ತಿದೆ.

ಮಾಜಿ ಶಾಸಕ ದೇವಾನಂದ್ ಪೂ ಚವ್ಹಾಣ ಅವರ ಪುತ್ರಿ ಲತಾಶ್ರೀ ಡಿ.ಸಿ ಅವರು ಹರ್ಷಿಣಿ ಸಿನಿಮಾಸ್ ಎಂಬ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ಈ ನೂತನ ನಿರ್ಮಾಣ ಸಂಸ್ಥೆಗೆ ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವೇಗೌಡ ಅವರು ಚಾಲನೆ ನೀಡಿ, ಶುಭ ಹಾರೈಸಿದರು,

ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುವ ಆಶಯ ಹೊಂದಿರುವ ಹರ್ಷಿಣಿ ಸಿನಿಮಾಸ್ ಸಂಸ್ಥೆಯು ಮೊದಲ ಚಿತ್ರವಾಗಿ “ಕಿರುನಗೆ” ಚಿತ್ರವನ್ನು ನಿರ್ಮಿಸುತ್ತಿದೆ.

“ಸತ್ಯಂ” ಸೇರಿದಂತೆ ಈಗಾಗಲೇ 4 ಚಿತ್ರಗಳನ್ನು ನಿರ್ದೇಶಿಸಿರುವ ಅಶೋಕ್ ಕಡಬ “ಕಿರುನಗೆ” ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಮಹಿಳಾ ಪ್ರಧಾನವಾದ ಈ ಚಿತ್ರಕ್ಕೆ ಲತಾಶ್ರೀ ಡಿ.ಸಿ ಅವರೇ ಕಥೆ ಬರೆದಿದ್ದಾರೆ. ಚಿತ್ರಕಥೆ ಅಶೋಕ್ ಕಡಬ ಅವರದು. ಖ್ಯಾತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ಅವರ ತಂಡದ ಸುಕೃತ್ “ಕಿರುನಗೆ” ಗೆ ಸಂಗೀತ ನೀಡಲಿದ್ದಾರೆ‌.

ಹಿಳಾ ಪ್ರಧಾನ ಚಿತ್ರವಾಗಿರುವುದರಿಂದ ಕನ್ನಡ ಖ್ಯಾತ ನಟಿಯೊಬ್ಬರು ಈ ಚಿತ್ರದಲ್ಲಿ ನಟಿಸಲಿದ್ದಾರೆ. ನಾಯಕಿ ಸೇರಿದಂತೆ ಉಳಿದ ತಾರಾಬಳಗದ ಬಗ್ಗೆ ಸದ್ಯದಲ್ಲೇ ಮಾಹಿತಿ ನೀಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT