ತಮನ್ನಾ ಮತ್ತು ವಿಜಯ್ ವರ್ಮಾ 
ಸಿನಿಮಾ ಸುದ್ದಿ

ಸಂಬಂಧಗಳು ಐಸ್ ​​​ಕ್ರೀಮ್​ನಂತೆ, ಆಸ್ವಾದಿಸಿ ಮುಂದೆ ಸಾಗಬೇಕು: ತಮನ್ನಾ ಜೊತೆಗಿನ ಬ್ರೇಕಪ್ ಬಳಿಕ ವಿಜಯ್ ವರ್ಮ ಮಾತು

ನೀವು ಸಂಬಂಧಗಳ ಬಗ್ಗೆ ಮಾತನಾಡುತ್ತಿದ್ದೀರಿ, ಸರಿಯೇ? ನೀವು ಐಸ್ ಕ್ರೀಮ್ ತಿನ್ನುವಂತೆ ಸಂಬಂಧಗಳನ್ನು ಆನಂದಿಸಿದರೆ, ನೀವು ಸಂತೋಷವಾಗಿರುತ್ತೀರಿ ಎಂದು ನಾನು ಭಾವಿಸುತ್ತೇನೆ. ನೀವು ಪಡೆಯುವ ಐಸ್ ಕ್ರೀಂನ ತಿಂದು ಮುಂದುವರಿಯಬೇಕು’.

ಮುಂಬಯಿ: ಬಾಲಿವುಡ್ ನಟ ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ ನಡುವೆ ಬ್ರೇಕಪ್ ಆಗಿರೋದ್ಯಾಕೆ ಎಂಬುದಕ್ಕೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಈ ಬೆನ್ನಲ್ಲೇ ಸಂಬಂಧವನ್ನು ಐಸ್‌ಕ್ರೀಮ್‌ನಂತೆ ಆಸ್ವಾದಿಸಬೇಕು ಎಂದು ವಿಜಯ್ ವರ್ಮಾ ಹೇಳಿರುವ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದೆ.

ಸಂದರ್ಶನವೊಂದರಲ್ಲಿ ಮಾತನಾಡಿದ ವಿಜಯ್ ವರ್ಮಾ ಅವರು ಸಂಬಂಧವನ್ನು ಐಸ್‌ಕ್ರೀಮ್‌ಗೆ ಹೋಲಿಸಿದ್ದಾರೆ. ‘ನೀವು ಸಂಬಂಧಗಳ ಬಗ್ಗೆ ಮಾತನಾಡುತ್ತಿದ್ದೀರಿ, ಸರಿಯೇ? ನೀವು ಐಸ್ ಕ್ರೀಮ್ ತಿನ್ನುವಂತೆ ಸಂಬಂಧಗಳನ್ನು ಆನಂದಿಸಿದರೆ, ನೀವು ಸಂತೋಷವಾಗಿರುತ್ತೀರಿ ಎಂದು ನಾನು ಭಾವಿಸುತ್ತೇನೆ. ನೀವು ಪಡೆಯುವ ಐಸ್ ಕ್ರೀಂನ ತಿಂದು ಮುಂದುವರಿಯಬೇಕು’ ಎಂದು ಅವರು ಹೇಳಿದರು.

ಇತ್ತೀಚೆಗೆ ವಿಜಯ್ ಹಾಗೂ ತಮನ್ನಾ ಬ್ರೇಕಪ್ ಮಾಡಿಕೊಂಡಿದ್ದಾರೆ. ಇದುವರೆಗೂ ಇಬ್ಬರೂ ಬ್ರೇಕಪ್ ಬಗ್ಗೆ ಅಧಿಕೃತವಾಗಿ ಮಾತನಾಡಿಲ್ಲ. ಬ್ರೇಕಪ್‌ಗೆ ಕಾರಣವೇನು ಎಂಬುದನ್ನು ತಿಳಿಸಿಲ್ಲ. ಮುಂದಿನ ದಿನಗಳಲ್ಲಿ ಬ್ರೇಕಪ್‌ ಬಗ್ಗೆ ಅಸಲಿ ಕಾರಣ ಬಿಚ್ಚಿಡುತ್ತಾರಾ? ಎಂಬುದನ್ನು ಕಾದುನೋಡಬೇಕಿದೆ.

ಈ ಹಿಂದೆ, ತಮನ್ನಾ ಸಂದರ್ಶನವೊಂದರಲ್ಲಿ, ‘ನನ್ನ ಜೀವನದಲ್ಲಿ ನಾನು ಆಯ್ಕೆ ಮಾಡಿಕೊಂಡಿರುವ ಯಾವುದೇ ವಿಷಯದಲ್ಲಿ ನಾನು ಸಂತೋಷವಾಗಿದ್ದೇನೆ. ನನಗೆ ಹೊಸ ಜನರನ್ನು ಭೇಟಿಯಾಗುವುದು ಇಷ್ಟ ಮತ್ತು ಅನಿರೀಕ್ಷಿತ ಸಂದರ್ಭಗಳು ನನ್ನ ಮೇಲೆ ಹೆಚ್ಚು ಪರಿಣಾಮ ಬೀರುವುದಿಲ್ಲ. ನನಗೆ ಖುಷಿ ಕೊಡುವ ವಿಷಯಗಳನ್ನು ಮಾತ್ರ ನಾನು ಜನರಿಗೆ ಹೇಳಬಲ್ಲೆ. ಇದು ನನ್ನ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳಲು ಸಹಾಯ ಮಾಡುತ್ತದೆ’ ಎಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!