ಹೊಸ ಚಿತ್ರ ಘೋಷಿಸಿದ ಓಂ ಪ್ರಕಾಶ್ ರಾವ್ 
ಸಿನಿಮಾ ಸುದ್ದಿ

ಓಂ ಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರ 'ಗೆರಿಲ್ಲಾ ವಾರ್' ಘೋಷಣೆ; ಪ್ರಮುಖ ಪಾತ್ರದಲ್ಲಿ ಲೋಕಿ

ಓಂ ಪ್ರಕಾಶ್ ರಾವ್ ಕಥೆ ಮತ್ತು ಚಿತ್ರಕಥೆ ಬರೆದಿದ್ದಾರೆ. ದೀಪು ಪಿಆರ್ ಸಂಭಾಷಣೆ, ರವಿ ಕುಮಾರ್ ಅವರ ಛಾಯಾಗ್ರಹಣ, ರವಿವರ್ಮ ಅವರ ಸಾಹಸ ಸನ್ನಿವೇಶಗಳ ನಿರ್ದೇಶನ ಮತ್ತು ಲಕ್ಷ್ಮಣ್ ರೆಡ್ಡಿ ಅವರ ಸಂಕಲನವಿದೆ.

ಎಕೆ 47, ಲಾಕಪ್ ಡೆತ್, ಹುಚ್ಚ ಮತ್ತು ಕಲಾಸಿಪಾಳ್ಯ ಮುಂತಾದ ಹಿಟ್ ಚಿತ್ರಗಳಿಗೆ ಹೆಸರುವಾಸಿಯಾದ ನಿರ್ದೇಶಕ ಓಂ ಪ್ರಕಾಶ್ ರಾವ್ ತಮ್ಮ 50ನೇ ಚಿತ್ರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಚಿತ್ರಕ್ಕೆ 'ಗೆರಿಲ್ಲಾ ವಾರ್' ಎಂದು ಶೀರ್ಷಿಕೆ ಇಡಲಾಗಿದೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ಈ ಸುದ್ದಿಯನ್ನು ಹಂಚಿಕೊಳ್ಳಲಾಗಿದ್ದು, ಇದು ಅವರ ವೃತ್ತಿಜೀವನದ ಮೈಲಿಗಲ್ಲಾಗಿದೆ. ಚಿತ್ರದಲ್ಲಿ ಲೋಕಿ ಎಂದೇ ಜನಪ್ರಿಯರಾಗಿರುವ ಲೋಕೇಶ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಚೊಚ್ಚಲ ಚಿತ್ರ 'ಮಂಡ್ಯ ಸ್ಟಾರ್' ನಂತರ, ಓಂ ಪ್ರಕಾಶ್ ರಾವ್ ನಿರ್ದೇಶನದ ಚಿತ್ರದಲ್ಲಿ ಲೋಕಿ ಮಹತ್ವದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಗಂಗಮ್ಮ ಎಂಟರ್‌ಪ್ರೈಸಸ್ ಬ್ಯಾನರ್ ಅಡಿಯಲ್ಲಿ ರಮೇಶ್ ಅಬ್ಬನಕುಪ್ಪೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸಿ ಮಾದೇಶ್ ಈ ಯೋಜನೆಯನ್ನು ಪ್ರಸ್ತುತಪಡಿಸುತ್ತಿದ್ದಾರೆ.

ಓಂ ಪ್ರಕಾಶ್ ರಾವ್ ಕಥೆ ಮತ್ತು ಚಿತ್ರಕಥೆ ಬರೆದಿದ್ದಾರೆ. ದೀಪು ಪಿಆರ್ ಸಂಭಾಷಣೆ, ರವಿ ಕುಮಾರ್ ಅವರ ಛಾಯಾಗ್ರಹಣ, ರವಿವರ್ಮ ಅವರ ಸಾಹಸ ಸನ್ನಿವೇಶಗಳ ನಿರ್ದೇಶನ ಮತ್ತು ಲಕ್ಷ್ಮಣ್ ರೆಡ್ಡಿ ಅವರ ಸಂಕಲನವಿದೆ.

'ಗೆರಿಲ್ಲಾ ವಾರ್' ದೊಡ್ಡ ಶತ್ರುವಿನ ವಿರುದ್ಧ ಹೋರಾಡಲು ಸಣ್ಣ ಗುಂಪು ಬಳಸುವ ಅಸಾಂಪ್ರದಾಯಿಕ ಯುದ್ಧ ತಂತ್ರಗಳ ಸುತ್ತ ಸುತ್ತುವ ರೋಮಾಂಚಕಾರಿ ನಿರೂಪಣೆಯಾಗಿದೆ. ಈ ಕಥೆಯು ಗೆರಿಲ್ಲಾ ಯುದ್ಧದಿಂದ ಸ್ಫೂರ್ತಿ ಪಡೆದಿದ್ದರೂ, ಇದು ಐತಿಹಾಸಿಕ ನಾಟಕವಲ್ಲ. ಬದಲಾಗಿ, ಈ ಚಿತ್ರವು ಸಮಾಜದಲ್ಲಿ ಮಹಿಳೆಯರು ಎದುರಿಸುತ್ತಿರುವ ಆಧುನಿಕ ಹೋರಾಟಗಳ ಕುರಿತು ಹೇಳುತ್ತದೆ.

ಚಿತ್ರದ ಇತರ ತಾರಾಗಣದಲ್ಲಿ ಅಚ್ಯುತ್ ಕುಮಾರ್, ರಂಗಾಯಣ ರಘು, ಸ್ವಸ್ತಿಕ್ ಶಂಕರ್, ಸುಧಾ ಬೆಳವಾಡಿ, ಚಿತ್ರಾ ಶೆಣೈ ಮತ್ತು ಪೂಜಾ ಗೌಡ ಇದ್ದಾರೆ. ಗೆರಿಲ್ಲಾ ವಾರ್ ಚಿತ್ರೀಕರಣ ಜೂನ್‌ನಲ್ಲಿ ಪ್ರಾರಂಭವಾಗಲಿದ್ದು, ಶೀಘ್ರದಲ್ಲೇ ನಾಯಕಿ ಆಯ್ಕೆ ಅಂತಿಮಗೊಳ್ಳಲಿದೆ.

ಗೆರಿಲ್ಲಾ ವಾರ್ ಜೊತೆಗೆ, ಓಂ ಪ್ರಕಾಶ್ ರಾವ್ ಉಪೇಂದ್ರ ನಟಿಸಿರುವ 'ತ್ರಿಶೂಲಂ' ಮತ್ತು ನಿಮಿಕಾ ರತ್ನಾಕರ್, ಜಗದೀಶ್ ಮತ್ತು ಭಾಸ್ಕರ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ 'ಫೀನಿಕ್ಸ್' ಸೇರಿದಂತೆ ಇತರ ಯೋಜನೆಗಳಲ್ಲಿಯೂ ಕೆಲಸ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT