ಯೋಗರಾಜ್ ಭಟ್, ಅಜಿತ್ ಜಯರಾಜ್ 
ಸಿನಿಮಾ ಸುದ್ದಿ

ತೆರೆ ಮೇಲೆ ನನ್ನ ತಂದೆ ಜಯರಾಜ್ ಪಾತ್ರ ಮಾಡಲು ತುಂಬಾ ಖುಷಿಯಾಗಿದೆ: ಅಜಿತ್ ಜಯರಾಜ್

ಈ ಟ್ರ್ಯಾಕ್ ಅನ್ನು ಗೀತರಚನೆಕಾರ ಯೋಗರಾಜ್ ಭಟ್ ಮತ್ತು ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಅವರು ಬಿಡುಗಡೆ ಮಾಡಿದರು.

''ಜಾಂಟಿ ಸನ್ ಆಫ್ ಜಯರಾಜ್'' ಸಿನಿಮಾದ ತಾಯಿ ಸೆಂಟಿಮೆಂಟಿನ 'ಕ್ಷಮಿಸು ತಾಯೇ 'ಎಂಬ ಹಾಡನ್ನು ಇತ್ತೀಚಿಗೆ ಬಿಡುಗಡೆ ಮಾಡಲಾಯಿತು. ಈ ಹಾಡಿಗೆ ನಿರ್ದೇಶಕ ಪ್ರೇಮ್ ಧ್ವನಿ ನೀಡಿದ್ದಾರೆ.

ಈ ಟ್ರ್ಯಾಕ್ ಅನ್ನು ಗೀತರಚನೆಕಾರ ಯೋಗರಾಜ್ ಭಟ್ ಮತ್ತು ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಅವರು ಬಿಡುಗಡೆ ಮಾಡಿದರು. ಈ ಹಾಡು ಈಗಾಗಲೇ ಪ್ರೇಕ್ಷಕರಿಗೆ ಇಷ್ಟವಾಗಿದ್ದು, ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ.

ವಿಜೇತ್ ಮಂಜಯ್ಯ ಸಂಯೋಜಿಸಿದ ಟ್ಯೂನ್ ಕೇಳಿದಾಗ ಹಿಟ್ ಆಗುತ್ತದೆ ಎಂದು ನನಗೆ ಗೊತ್ತಾಗಿತ್ತು. ಜನರು ತಮ್ಮ ತಾಯಿಯನ್ನು ನೆನಪಿಸಿಕೊಳ್ಳಬೇಕು ಎಂದು ಈ ಹಾಡು ಬರೆದಿರುವುದಾಗಿ ನಿರ್ದೇಶಕ ಆನಂದ್ ರಾಜ್ ತಿಳಿಸಿದರು. ಅವರೇ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

ಇದು ಚಿತ್ರದ ಕ್ಲೈಮ್ಯಾಕ್ಸ್​ನಲ್ಲಿ ಬರುವ ಹಾಡು. ಬೇರೆ ಕಡೆಗಳಲ್ಲಿ ತಪ್ಪು ಮಾಡಿದರೆ ನಾವು ತಕ್ಷಣ ಕ್ಷಮೆ ಕೇಳುತ್ತೇವೆ. ಆದರೆ ಅಮ್ಮನ ಬಳಿ ಕ್ಷಮಿಸು ಅಂತ ಕೇಳುವುದಿಲ್ಲ. ನಮ್ಮ ಸಿನಿಮಾದ ಮೂಲಕ ಎಲ್ಲ ತಾಯಂದಿರಿಗೂ ಕ್ಷಮೆ ಕೇಳುತ್ತೇವೆ. ಅಂತಿಮವಾಗಿ ಅಮ್ಮನೇ ಸರ್ವಸ್ವ ವಾಗಿದ್ದು, ಕ್ಷಮೆ ಕೇಳುವ ದಾರಿಯಲ್ಲಿ ಈ ಸಾಂಗ್ ಬರುತ್ತದೆ ಎಂದು ನಿರ್ದೇಶಕರು ಈ ಹಾಡಿನ ಬಗ್ಗೆ ಮಾಹಿತಿ ನೀಡಿದರು.

ನಾಯಕನಾಗಿ ನಟಿಸುತ್ತಿರುವ ಬೆಂಗಳೂರಿನ ಭೂಗತ ಪಾತಕಿ ಎಂ.ಪಿ.ಜಯರಾಜ್ ಅವರ ಪುತ್ರ ಅಜಿತ್ ಜಯರಾಜ್ ಮಾತನಾಡಿ, ನಾನು ಎರಡು ಶೇಡ್‌ಗಳಲ್ಲಿ ನಟಿಸುತ್ತಿದ್ದೇನೆ. ನನ್ನ ತಂದೆ ಜಯರಾಜ್‌ನ ಪಾತ್ರವನ್ನು ತೆರೆಯ ಮೇಲೆ ಮಾಡಲು ನನಗೆ ಖುಷಿಯಾಗಿದೆ. ಚಾಪ್ಟರ್ 2 ಕೂಡಾ ಬರುತ್ತದೆ. ನಿರ್ಮಾಪಕ ಸೂಗುರು ಕುಮಾರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ರಾಜವಧರ್ನ್, ಶರತ್ ಲೋಹಿತಾಶ್ವ, ನಿವಿಷ್ಕಾ ಪಾಟೀಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅರ್ಜುನ್ ಅಕೋಟ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!