ಸಿನಿಮಾ ಸುದ್ದಿ

ಮಚ್ಚು ಹಿಡಿದು ರೀಲ್ಸ್ ಪ್ರಕರಣ: ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ ರಜತ್

ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿಸಿದ್ದಾರೆ. ಹೌದು ಕೆಲ ಜೈಲಿನಲ್ಲಿ ಇದ್ದು ಹೊರಬಂದಿದ್ದ ರಜತ್ ಜಾಮೀನಿನ ಷರತ್ತುಗಳನ್ನು ಪೂರೈಸದ ಕಾರಣ...

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿಸಿದ್ದಾರೆ. ಹೌದು ಕೆಲ ಜೈಲಿನಲ್ಲಿ ಇದ್ದು ಹೊರಬಂದಿದ್ದ ರಜತ್ ಜಾಮೀನಿನ ಷರತ್ತುಗಳನ್ನು ಪೂರೈಸದ ಕಾರಣ ಇಂದು ಪೊಲೀಸರು ಮತ್ತೆ ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು.

ವಿಚಾರಣೆ ನಡೆಸಿದ ಕೋರ್ಟ್ ರಜತ್​ಗೆ ಏಪ್ರಿಲ್ 29ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಮಾಜಿ ಬಿಗ್​ಬಾಸ್ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಅವರು ಇತ್ತೀಚೆಗೆ ಮಚ್ಚು ಹಿಡಿದುಕೊಂಡು ರೀಲ್ಸ್ ಮಾಡಿದ್ದರು. ವಿಡಿಯೋ ವೈರಲ್ ಆಗಿದ್ದು ಸಾರ್ವಜನಿಕವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಯಿತು. ಹೀಗಾಗಿ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆ ಅಡಿ ದೂರು ದಾಖಲಿಸಿಕೊಂಡು ಇಬ್ಬರನ್ನೂ ಬಂಧಿಸಿದ್ದರು. ಕೆಲ ದಿನ ಜೈಲಿನಲ್ಲಿದ್ದ ವಿನಯ್ ಹಾಗೂ ರಜತ್, ಜಾಮೀನಿನ ಮೇಲೆ ಹೊರಬಂದಿದ್ದರು.

ಜಾಮೀನು ನೀಡಿದ್ದ ಕೋರ್ಟ್ ವಿಚಾರಣೆಗೆ ಖುದ್ದು ಹಾಜರಾತಿ ಸೇರಿದಂತೆ ಕೆಲ ಷರತ್ತುಗಳನ್ನು ವಿಧಿಸಿತ್ತು. ಆದರೆ ರಜತ್, ವಿಚಾರಣೆಗೆ ಹಾಜರಾಗದ ಕಾರಣ ಅವರನ್ನು ಪೊಲೀಸರು ಬಂಧಿಸಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯವು ಏಪ್ರಿಲ್ 29ರ ವರೆಗೆ ರಜತ್​ಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಮುಂದಿನ ಎಂಟು ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಬೇಕಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT