ಅರ್ಜುನ್ ಸರ್ಜಾ 2ನೇ ಪುತ್ರಿ ಅಂಜನಾ 
ಸಿನಿಮಾ ಸುದ್ದಿ

Arjun Sarja 2ನೇ ಪುತ್ರಿಗೆ 'ಕಂಕಣಭಾಗ್ಯ'; 13 ವರ್ಷಗಳ ಪ್ರೀತಿ, ಹುಡುಗ ಯಾರು ಗೊತ್ತಾ?

ಇಟಲಿಯಲ್ಲಿ ಗೆಳೆಯನ ಜೊತೆ ಅಂಜನಾ ರೊಮ್ಯಾಂಟಿಕ್ ಆಗಿ ಫೋಟೋಶೂಟ್ ಮಾಡಿಸಿದ್ದು, ಅಂಜನಾ ಫೋಟೋಶೂಟ್‌ನಲ್ಲಿ ಅರ್ಜುನ್ ಸರ್ಜಾ ದಂಪತಿ, ಸಹೋದರಿ ಐಶ್ವರ್ಯಾ ದಂಪತಿ ಕೂಡ ಪೋಸ್ ನೀಡಿದ್ದಾರೆ.

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟ ಹಾಗೂ ಕನ್ನಡಿಗ ಅರ್ಜುನ್ ಸರ್ಜಾ ಅವರ 2ನೇ ಪುತ್ರಿ ಅಂಜನಾ (Anjana)ಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, 6 ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗನನ್ನು ವರಿಸುತ್ತಿದ್ದಾರೆ.

ಬಹುಭಾಷಾ ನಟ ಅರ್ಜುನ್ ಸರ್ಜಾ ಮತ್ತು ನಟಿ ನಿವೇದಿತಾ ದಂಪತಿಯ 2ನೇ ಪುತ್ರಿ ಅಂಜನಾ ಅವರ ವಿವಾಹಕ್ಕೆ ಭರ್ಜರಿ ಸಿದ್ಧ ನಡೆಯುತ್ತಿದ್ದು, ಅಂಜನಾ (Anjana Sarja) ಬಹುಕಾಲದ ಗೆಳೆಯನ ಜೊತೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಜೋಡಿ ಪರಸ್ಪರರ ಕೈಗೆ ಉಂಗುರ ಬದಲಿಸಿಕೊಳ್ಳುವ ಮೂಲಕ ಮದುವೆಗೆ ಅಧಿಕೃತ ಮುದ್ರೆ ಒತ್ತಿದ್ದಾರೆ.

ಇಟಲಿಯಲ್ಲಿ ಗೆಳೆಯನ ಜೊತೆ ಅಂಜನಾ ರೊಮ್ಯಾಂಟಿಕ್ ಆಗಿ ಫೋಟೋಶೂಟ್ ಮಾಡಿಸಿದ್ದು, ಅಂಜನಾ ಫೋಟೋಶೂಟ್‌ನಲ್ಲಿ ಅರ್ಜುನ್ ಸರ್ಜಾ ದಂಪತಿ, ಸಹೋದರಿ ಐಶ್ವರ್ಯಾ ದಂಪತಿ ಕೂಡ ಪೋಸ್ ನೀಡಿದ್ದಾರೆ. ಇಟಲಿಯ ಲೇಕ್ ಕೊಮೊದಲ್ಲಿ ಉಂಗುರ ಬದಲಿಸುವ ಕಾರ್ಯಕ್ರಮ ನಡೆದಿದೆ.

ಪೋಸ್ಟ್ ಹಂಚಿಕೊಂಡ ಅಂಜನಾ

ಅಂಜನಾ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ಗೆಳೆಯನ ಪ್ರೇಮ ನಿವೇದನೆಗೆ ‘ಯೆಸ್‌ ಎನ್ನದೇ ಹೇಗಿರಲಿ’ ಎಂದು ಬರೆದುಕೊಂಡಿದ್ದಾರೆ. ಅದಕ್ಕೆ ಅರ್ಜುನ್ ಸರ್ಜಾ, ನಾನು ಮೊದಲೇ ಊಹಿಸಿದ್ದೆ, ಅವನು ನಿನ್ನ ಪಾರ್ಟ್ನರ್ ಆಗುತ್ತಾನೆಂದು ಅಂತ ಕಾಮೆಂಟ್ ಮಾಡಿದ್ದಾರೆ.

ಯಾರು ಹುಡುಗ?

ಅಂಜನಾ ವರಿಸುತ್ತಿರುವ ಹುಡುಗ ವಿದೇಶಿಗನಾಗಿದ್ದು, ಇವರಿಬ್ಬರದೂ 13 ವರ್ಷಗಳ ಸ್ನೇಹ ಮತ್ತು ಪ್ರೀತಿಯಂತೆ. ಫಾರಿನ್‌ ಹುಡುಗ 'ಐಸೆ'ಯ ಜೊತೆ ಅಂಜನಾ ಎಂಗೇಜ್ ಆಗಿದ್ದು, ಅವರ ಮದುವೆಯ ಬಗ್ಗೆ ಇನ್ನಷ್ಟೇ ತಿಳಿಯಬೇಕಿದೆ. ಅಂಜನಾ ವರಿಸುತ್ತಿರುವ ಹುಡುಗನ ಹೆಸರನ್ನು ಹೊರತುಪಡಿಸಿ ಅವರು ಎಲ್ಲಿಯವರು, ಏನು ಮಾಡಿಕೊಂಡಿದ್ದಾರೆ ಎಂಬಿತ್ಯಾದಿ ವಿವರಗಳು ಇನ್ನೂ ಲಭ್ಯವಾಗಿಲ್ಲ.

ಅಂದಹಾಗೆ ಅರ್ಜುನ್ ಸರ್ಜಾ ಮೊದಲ ಪುತ್ರಿ ಐಶ್ವರ್ಯಾ ಅರ್ಜುನ್‌ ಕಳೆದ ವರ್ಷ ಜೂನ್ 10 ರಂದು ಉಮಾಪತಿ ರಾಮಯ್ಯ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT