ಅನುರಾಗ್‌ ಕಶ್ಯಪ್‌ 
ಸಿನಿಮಾ ಸುದ್ದಿ

ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ? ನಿರ್ದೇಶಕ ಅನುರಾಗ್‌ ಕಶ್ಯಪ್‌ ಉದ್ಧಟತನ

ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ?'' ಎಂದು ಅವರು ಸೋಶೀಯಲ್‌ ಮೀಡಿಯಾದಲ್ಲಿ ಪ್ರಶ್ನಿಸುವ ಮೂಲಕ ಉದ್ಧಟತನ ಮೆರೆದಿದ್ದಾರೆ.

ಮುಂಬೈ: ಬಾಲಿವುಡ್‌ ನಿರ್ದೇಶಕ, ನಟ ಅನುರಾಗ್‌ ಕಶ್ಯಪ್‌ ಮತ್ತು ವಿವಾದಕ್ಕೆ ಬಿಟ್ಟಿರಲಾರದ ನಂಟು. ಆಗಾಗ ತಮ್ಮ ಹೇಳಿಕೆಯಿಂದ ವಿವಾದ ಸೃಷ್ಟಿಸುವ ಅವರು ಇದೀಗ ಮತ್ತೊಮ್ಮೆ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ?'' ಎಂದು ಅವರು ಸೋಶೀಯಲ್‌ ಮೀಡಿಯಾದಲ್ಲಿ ಪ್ರಶ್ನಿಸುವ ಮೂಲಕ ಉದ್ಧಟತನ ಮೆರೆದಿದ್ದಾರೆ. ಸದ್ಯ ಅವರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಸೋಶಿಯಲ್‌ ಮೀಡಿಯಾದಲ್ಲಿ ಅನುರಾಗ್‌ ಕಶ್ಯಪ್‌ನನ್ನು ಬಂಧಿಸಿ ಎನ್ನುವ ಕೂಗು ವ್ಯಾಪಕವಾಗಿ ಕೇಳಿ ಬಂದಿದೆ. ಜತೆಗೆ ದೂರೂ ದಾಖಲಾಗಿದೆ.

ಜಾತಿ ವ್ಯವಸ್ಥೆ ವಿರುದ್ದ ಹೋರಾಡಿದ ಮಹಾರಾಷ್ಟ್ರದ ಸಾಮಾಜಿಕ ಕಾರ್ಯಕರ್ತರಾದ ಜ್ಯೋತಿರಾವ್‌ ಫುಲೆ ಮತ್ತು ಸಾವಿತ್ರಿಭಾಯಿ ಫುಲೆ ಅವರ ಜೀವನವನ್ನಾಧರಿಸಿ ಹಿಂದಿಯಲ್ಲಿ 'ಫುಲೆ' ಚಿತ್ರ ನಿರ್ಮಾಣವಾಗಿದೆ. ರೋಹನ್‌ ಸಿಪ್ಪಿ ನಿರ್ದೇಶನದ ಈ ಚಿತ್ರದಲ್ಲಿನ ವಿವದಾತ್ಮಕ, ಜಾತಿ ವ್ಯವಸ್ಥೆಯನ್ನು ಸೂಚಿಸುವ ಭಾಗಗಳನ್ನು ತೆಗೆದು ಹಾಕುವಂತೆ ಸೆನ್ಸಾರ್‌ ಮಂಡಳಿ ಸೂಚಿಸಿತ್ತು.

ಇದರಿಂದ ಏ. 11ರಂದು ರಿಲೀಸ್‌ ಆಗಬೇಕಿದ್ದ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ. ಈ ಬಗ್ಗೆ ಕಿಡಿ ಕಾರಿದ ಅನುರಾಗ್‌ ಕಶ್ಯಪ್‌ ನಾಲಗೆ ಹರಿಯಬಿಟ್ಟಿದ್ದಾರೆ. ಈ ಸಂಬಂಧ ಅನುರಾಗ್ ಕಶ್ಯಪ್ ವಿರುದ್ಧ ದೂರು ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

IPL 2026: ವೈಭವ್ ಸೂರ್ಯವಂಶಿ ಆರ್ಭಟಕ್ಕೆ ಮಕಾಡೆ ಮಲಗಿದ LSG, ಗೆದ್ದ RR ಪ್ಲೇ ಆಫ್ ಕನಸು ಜೀವಂತ!

ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ

SCROLL FOR NEXT