ಅನುರಾಗ್‌ ಕಶ್ಯಪ್‌ 
ಸಿನಿಮಾ ಸುದ್ದಿ

ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ? ನಿರ್ದೇಶಕ ಅನುರಾಗ್‌ ಕಶ್ಯಪ್‌ ಉದ್ಧಟತನ

ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ?'' ಎಂದು ಅವರು ಸೋಶೀಯಲ್‌ ಮೀಡಿಯಾದಲ್ಲಿ ಪ್ರಶ್ನಿಸುವ ಮೂಲಕ ಉದ್ಧಟತನ ಮೆರೆದಿದ್ದಾರೆ.

ಮುಂಬೈ: ಬಾಲಿವುಡ್‌ ನಿರ್ದೇಶಕ, ನಟ ಅನುರಾಗ್‌ ಕಶ್ಯಪ್‌ ಮತ್ತು ವಿವಾದಕ್ಕೆ ಬಿಟ್ಟಿರಲಾರದ ನಂಟು. ಆಗಾಗ ತಮ್ಮ ಹೇಳಿಕೆಯಿಂದ ವಿವಾದ ಸೃಷ್ಟಿಸುವ ಅವರು ಇದೀಗ ಮತ್ತೊಮ್ಮೆ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ?'' ಎಂದು ಅವರು ಸೋಶೀಯಲ್‌ ಮೀಡಿಯಾದಲ್ಲಿ ಪ್ರಶ್ನಿಸುವ ಮೂಲಕ ಉದ್ಧಟತನ ಮೆರೆದಿದ್ದಾರೆ. ಸದ್ಯ ಅವರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಸೋಶಿಯಲ್‌ ಮೀಡಿಯಾದಲ್ಲಿ ಅನುರಾಗ್‌ ಕಶ್ಯಪ್‌ನನ್ನು ಬಂಧಿಸಿ ಎನ್ನುವ ಕೂಗು ವ್ಯಾಪಕವಾಗಿ ಕೇಳಿ ಬಂದಿದೆ. ಜತೆಗೆ ದೂರೂ ದಾಖಲಾಗಿದೆ.

ಜಾತಿ ವ್ಯವಸ್ಥೆ ವಿರುದ್ದ ಹೋರಾಡಿದ ಮಹಾರಾಷ್ಟ್ರದ ಸಾಮಾಜಿಕ ಕಾರ್ಯಕರ್ತರಾದ ಜ್ಯೋತಿರಾವ್‌ ಫುಲೆ ಮತ್ತು ಸಾವಿತ್ರಿಭಾಯಿ ಫುಲೆ ಅವರ ಜೀವನವನ್ನಾಧರಿಸಿ ಹಿಂದಿಯಲ್ಲಿ 'ಫುಲೆ' ಚಿತ್ರ ನಿರ್ಮಾಣವಾಗಿದೆ. ರೋಹನ್‌ ಸಿಪ್ಪಿ ನಿರ್ದೇಶನದ ಈ ಚಿತ್ರದಲ್ಲಿನ ವಿವದಾತ್ಮಕ, ಜಾತಿ ವ್ಯವಸ್ಥೆಯನ್ನು ಸೂಚಿಸುವ ಭಾಗಗಳನ್ನು ತೆಗೆದು ಹಾಕುವಂತೆ ಸೆನ್ಸಾರ್‌ ಮಂಡಳಿ ಸೂಚಿಸಿತ್ತು.

ಇದರಿಂದ ಏ. 11ರಂದು ರಿಲೀಸ್‌ ಆಗಬೇಕಿದ್ದ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ. ಈ ಬಗ್ಗೆ ಕಿಡಿ ಕಾರಿದ ಅನುರಾಗ್‌ ಕಶ್ಯಪ್‌ ನಾಲಗೆ ಹರಿಯಬಿಟ್ಟಿದ್ದಾರೆ. ಈ ಸಂಬಂಧ ಅನುರಾಗ್ ಕಶ್ಯಪ್ ವಿರುದ್ಧ ದೂರು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT