ಮಹಾಕಾಳೇಶ್ವರನ ಸನ್ನಿಧಿಯಲ್ಲಿ ಯಶ್ ಪೂಜೆ! 
ಸಿನಿಮಾ ಸುದ್ದಿ

ನಾನು ಶಿವನ ಭಕ್ತ, ಅದಕ್ಕಾಗಿಯೇ ಇಲ್ಲಿ ಬಂದೆ: 'ರಾವಣ' ಶೂಟಿಂಗ್ ಗೂ ಮುನ್ನ ಮಹಾಕಾಳೇಶ್ವರನ ಸನ್ನಿಧಿಯಲ್ಲಿ ಯಶ್ ಪೂಜೆ!

ಯಶ್ ಅವರು ಶಿವನ ಭಕ್ತರು. ಅವರ ಮನೆಯ ಕುಲದೇವರು ಕೂಡ ಶಿವನೇ. ಈ ಕಾರಣಕ್ಕೆ ಶಿವನ ದರ್ಶನ ಪಡೆಯಲು ಅವರು ಮಹಾ ಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ನಿತೇಶ್ ತಿವಾರಿ ರಾಮಾಯಣದ ಬಗ್ಗೆ ಬಾಲಿವುಡ್‌ನ ಕಾರಿಡಾರ್‌ಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಚಿತ್ರದಲ್ಲಿ ಇಡೀ ತಾರೆಯರ ಗುಂಪೇ ಕಾಣಿಸಿಕೊಳ್ಳಲಿದೆ. ಈ ಚಿತ್ರದಲ್ಲಿ ದಕ್ಷಿಣ ಭಾರತದ ಸೂಪರ್‌ಸ್ಟಾರ್ ಯಶ್ 'ರಾವಣ' ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಅವರು ತಮ್ಮ ಪಾತ್ರದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ.

ಶೂಟಿಂಗ್ ಆರಂಭಕ್ಕೂ ಮುನ್ನ ಯಶ್ ಮಧ್ಯ ಪ್ರದೇಶದ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಯಶ್ ಅವರು ಶಿವನ ಭಕ್ತರು. ಅವರ ಮನೆಯ ಕುಲದೇವರು ಕೂಡ ಶಿವನೇ. ಈ ಕಾರಣಕ್ಕೆ ಶಿವನ ದರ್ಶನ ಪಡೆಯಲು ಅವರು ಮಹಾ ಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಯಶ್ ಅವರು ‘ರಾಮಾಯಣ’ ಚಿತ್ರದಲ್ಲಿ ರಾವಣನ ಪಾತ್ರ ಮಾಡುತ್ತಿದ್ದಾರೆ. ಮಂಗಳವಾರದಿಂದ (ಏಪ್ರಿಲ್ 22) ಅವರು ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರೆ. ಅದಕ್ಕೂ ಮೊದಲು ಅವರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ವಿಶೇಷ ಎಂದರೆ ರಾವಣ ಕೂಡ ಶಿವನ ದೊಡ್ಡ ಭಕ್ತ.

ನಿತೇಶ್ ತಿವಾರಿ ತಮ್ಮ ಮುಂಬರುವ ಚಿತ್ರದಲ್ಲಿ ಯಶ್, ರಣಬೀರ್ ಕಪೂರ್, ಸನ್ನಿ ಡಿಯೋಲ್, ರವಿ ದುಬೆ ಮತ್ತು ಸಾಯಿ ಪಲ್ಲವಿ ಅವರಂತಹ ಶ್ರೇಷ್ಠ ನಟರನ್ನು ಆಯ್ಕೆ ಮಾಡಿದ್ದಾರೆ. ರಾಮಾಯಣದ ಪ್ರಮುಖ ಭಾಗವಾಗಿರುವುದರ ಜೊತೆಗೆ, ನಟ ಈ ಚಿತ್ರದ ಸಹ-ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಈ ವಾರದಿಂದ ಅವರು ಮುಂಬೈನಲ್ಲಿ ತಮ್ಮ ಏಕವ್ಯಕ್ತಿ ದೃಶ್ಯಗಳ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ. ಹೊಸ ಆರಂಭಕ್ಕೂ ಮುನ್ನ ದೇವರ ಆಶೀರ್ವಾದ ಪಡೆದರು.

ದೇವರ ದರ್ಶನ ಮಾಡಿ ಮಾತನಾಡಿದ ನಟ ತಾನು ಚಿಕ್ಕಂದಿನಿಂದಲೇ ಶಿವನ ಭಕ್ತ, ದೇವಸ್ಥಾನಕ್ಕೆ ಭೇಟಿ ನೀಡಿ ಖುಷಿಯಾಯಿತು. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದೆ ಎಂದು ಹೇಳಿದ್ದಾರೆ. 'ರಾಮಾಯಣ' ಎರಡು ಭಾಗಗಳಲ್ಲಿ ಬರಲಿದೆ. ನಿತೇಶ್ ತಿವಾರಿ ಅವರ ಈ ಬಹುನಿರೀಕ್ಷಿತ ಚಿತ್ರ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಮೊದಲ ಭಾಗವು 2026 ರ ದೀಪಾವಳಿಯಂದು ಬಿಡುಗಡೆಯಾಗಲಿದ್ದು, ಎರಡನೇ ಭಾಗವು 2027 ರ ದೀಪಾವಳಿಯಂದು ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

SCROLL FOR NEXT