ಹೊಸ ಚಿತ್ರದಲ್ಲಿ ನಟ ಶಿವರಾಜ್‌ಕುಮಾರ್ 
ಸಿನಿಮಾ ಸುದ್ದಿ

ಸಾಲು ಸಾಲು ಚಿತ್ರಗಳಲ್ಲಿ ಶಿವರಾಜ್‌ಕುಮಾರ್ ಬ್ಯುಸಿ; ಹೊಸ ಚಿತ್ರಕ್ಕೆ ಬಾಲಾಜಿ ಮಾಧವನ್ ಆ್ಯಕ್ಷನ್ ಕಟ್!

ಇದು ಶ್ರಿತಿಕ್ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಾಗಿದ್ದು, ಖ್ಯಾತ ಚಲನಚಿತ್ರ ನಿರ್ಮಾಪಕ ಪಿ ವಾಸು ಅವರ ಸೋದರಳಿಯ ಬಾಲಾಜಿ ಮಾಧವನ್ ಅವರು ಮೊಟ್ಟ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಡಲಿದ್ದಾರೆ.

ನಟ ಶಿವರಾಜ್‌ಕುಮಾರ್ ಇದೀಗ ಹಲವು ವಿಭಿನ್ನ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸದ್ಯ ಅವರು ತಮ್ಮ 131ನೇ ಚಿತ್ರವಾದ ತೆಲುಗಿನ ನಟ ರಾಮ್ ಚರಣ್ ಅವರೊಂದಿಗೆ ಪ್ಯಾನ್-ಇಂಡಿಯಾ ಯೋಜನೆ, ರಜನಿಕಾಂತ್ ನಟಿಸಿರುವ ಬಹು ನಿರೀಕ್ಷಿತ ಜೈಲರ್ 2 ಮತ್ತು ನಿರ್ದೇಶಕ ಪವನ್ ಒಡೆಯರ್ ಅವರೊಂದಿಗೆ ಮುಂಬರುವ ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ, ಡಾ. ರಾಜ್‌ಕುಮಾರ್ ಅವರ ಹುಟ್ಟುಹಬ್ಬದ (ಏಪ್ರಿಲ್ 24) ವಾರ್ಷಿಕೋತ್ಸವದಂದು, ಹೊಸ ಚಿತ್ರವನ್ನು ಘೋಷಿಸಲಾಗಿದೆ.

ಇದು ಶ್ರಿತಿಕ್ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಾಗಿದ್ದು, ಖ್ಯಾತ ಚಲನಚಿತ್ರ ನಿರ್ಮಾಪಕ ಪಿ ವಾಸು ಅವರ ಸೋದರಳಿಯ ಬಾಲಾಜಿ ಮಾಧವನ್ ಅವರು ಮೊಟ್ಟ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಡಲಿದ್ದಾರೆ. ಚಿತ್ರವನ್ನು ಸಾಗರ್, ಕೃಷ್ಣಕುಮಾರ್ ಮತ್ತು ಸೂರಜ್ ಶರ್ಮಾ ನಿರ್ಮಿಸುತ್ತಿದ್ದಾರೆ.

ನಿರ್ಮಾಪಕರೊಂದಿಗೆ ಇತ್ತೀಚೆಗೆ ಶಿವರಾಜ್‌ಕುಮಾರ್ ಅವರನ್ನು ಭೇಟಿಯಾಗಿ ಬಾಲಾಜಿ ಮಾಧವನ್ ಕಥೆಯನ್ನು ವಿವರಿಸಿದ್ದಾರೆ. ಕಥೆಯನ್ನು ಕೇಳಿದ ನಟ ಸಂತೋಷ ವ್ಯಕ್ತಪಡಿಸಿದರು ಎಂದು ವರದಿಯಾಗಿದೆ. ತಂಡವು ವಿಶಿಷ್ಟ ಕಥಾಹಂದರದ ಬಗ್ಗೆ ಸುಳಿವು ನೀಡಿದ್ದು, ಶೀಘ್ರದಲ್ಲೇ ಶೀರ್ಷಿಕೆಯನ್ನು ಅನಾವರಣಗೊಳಿಸಲು ಯೋಜಿಸುತ್ತಿದೆ. ಮುಂಬರುವ ವಾರಗಳಲ್ಲಿ ಚಿತ್ರದ ಪಾತ್ರವರ್ಗ ಮತ್ತು ಸಿಬ್ಬಂದಿ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT