ಎಕ್ಕ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಯುವ ರಾಜ್‌ಕುಮಾರ್ ಹುಟ್ಟುಹಬ್ಬಕ್ಕೆ ಟೀಸರ್ ರಿಲೀಸ್; ಪುನೀತ್ ರಾಜ್‌ಕುಮಾರ್ ನಟನೆಯ 'ಜಾಕಿ' ಚಿತ್ರ ನೆನಪಿಸಿದ 'ಎಕ್ಕ'!

ಡಾಲಿ ಧನಂಜಯ್ ನಟನೆಯ 'ರತ್ನನ್ ಪ್ರಪಂಚ' ಸಿನಿಮಾ ನಿರ್ದೇಶಿಸಿದ್ದ ರೋಹಿತ್ ಪದಕಿ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಚಿತ್ರದಲ್ಲಿ ಸಂಪದ ಮತ್ತು ಸಂಜನಾ ಆನಂದ್ ನಾಯಕಿಯರಾಗಿ ನಟಿಸಿದ್ದಾರೆ.

ಜೂನ್ 6ರಂದು ಯುವ ರಾಜ್‌ಕುಮಾರ್ ಅಭಿನಯದ ಎಕ್ಕ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಏಪ್ರಿಲ್ 23ರಂದು ನಟ ಯುವ ರಾಜ್‌ಕುಮಾರ್ ಅವರು ಜನ್ಮದಿನ ಆಚರಿಸಿಕೊಂಡಿದ್ದು, ಏಪ್ರಿಲ್ 24ರಂದು ಡಾ. ರಾಜ್‌ಕುಮಾರ್ ಅವರ ಹುಟ್ಟುಹಬ್ಬದಂದು ಚಿತ್ರತಂಡ ಟೀಸರ್ ಬಿಡುಗಡೆ ಮಾಡಿದೆ.

ಮುಖಕ್ಕೆ ಬಣ್ಣ ಬಳಿದುಕೊಂಡು, ತಲೆಗೆ ಟೋಪಿ, ಒರಟಾದ ವೇಷಭೂಷಣದೊಂದಿಗೆ ಮಾಸ್ ಡೈಲಾಗ್ ಹೊಡೆಯುತ್ತಾ ಪೊರಕೆಯೊಳಗೆ ಗನ್ ಇಟ್ಟು ಶೂಟ್ ಮಾಡುವ ದೃಶ್ಯದಲ್ಲಿ ಯುವ ಕಾಣಿಸಿಕೊಂಡಿದ್ದಾರೆ. ಇದು ಒಂದು ಕ್ಷಣ ಪುನೀತ್ ರಾಜ್‌ಕುಮಾರ್ ಅವರ ಜಾಕಿ ಚಿತ್ರವನ್ನು ನೆನಪಿಸುತ್ತದೆ.

ಈ ಟೀಸರ್ ತನ್ನದೇ ಆದ ಹೊಸ ಪರಿಮಳವನ್ನು ತಂದಿದ್ದು, ಗಾಢವಾದ, ದಿಟ್ಟ ಮತ್ತು ಉದ್ವಿಗ್ನತೆಯಿಂದ ತುಂಬಿದೆ. ಯುವ ಕತ್ತಿಯನ್ನು ಹಿಡಿದು ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಡಾಲಿ ಧನಂಜಯ್ ನಟನೆಯ 'ರತ್ನನ್ ಪ್ರಪಂಚ' ಸಿನಿಮಾ ನಿರ್ದೇಶಿಸಿದ್ದ ರೋಹಿತ್ ಪದಕಿ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಚಿತ್ರದಲ್ಲಿ ಸಂಪದ ಮತ್ತು ಸಂಜನಾ ಆನಂದ್ ನಾಯಕಿಯರಾಗಿ ನಟಿಸಿದ್ದಾರೆ. ಜೊತೆಗೆ ಅತುಲ್ ಕುಲಕರ್ಣಿ ಮತ್ತು ಡೆಡ್ಲಿ ಆದಿತ್ಯ ಪ್ರಮುಖ ಪಾತ್ರಗಳಲ್ಲಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ, ಸತ್ಯ ಹೆಗ್ಡೆ ಛಾಯಾಗ್ರಹಣ ಮತ್ತು ದೀಪು ಎಸ್ ಕುಮಾರ್ ಅವರ ಸಂಕಲನವಿದೆ.

ಈ ಚಿತ್ರವನ್ನು ಕೆಆರ್‌ಜಿ ಸ್ಟುಡಿಯೋಸ್‌ನ ಕಾರ್ತಿಕ್ ಗೌಡ ಮತ್ತು ಯೋಗಿ ಜಿ. ರಾವ್, ಜಯಣ್ಣ ಫಿಲ್ಮ್ಸ್‌ನ ಜಯಣ್ಣ ಮತ್ತು ಭೋಗೇಂದ್ರ ಮತ್ತು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್ ಸಹಯೋಗದೊಂದಿಗೆ ನಿರ್ಮಿಸಲಾಗಿದೆ. ಎಕ್ಕ ಈಗ ಚಿತ್ರೀಕರಣದ ಅಂತಿಮ ಹಂತದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT