ಧ್ರುವ ಸರ್ಜಾ ಮತ್ತು ದರ್ಶನ್ 
ಸಿನಿಮಾ ಸುದ್ದಿ

I Stand With Darshan Sir: ಭಾರೀ ಕುತೂಹಲಕ್ಕೆ ಕಾರಣವಾಯ್ತು ಧ್ರುವ ಸರ್ಜಾ ಹೇಳಿಕೆ!

ಇಬ್ಬರು ಸ್ಟಾರ್ ನಟರ ನಡುವಿನ ವೈಮನಸ್ಸು ಶಮನ ಆಗಿರುವ ಸೂಚನೆ ಕಂಡುಬಂದಿದೆ.

ಬೆಂಗಳೂರು: ದರ್ಶನ್ ಅಭಿಮಾನಿಗಳ ದುರ್ವರ್ತನೆ ವಿರುದ್ಧ ನಟ ಪ್ರಥಮ್ ಮತ್ತು ರಮ್ಯಾ ಅವರು ದೂರು ದಾಖಲಿಸಿದ್ದಾರೆ. ಪ್ರಥಮ್ ಅಂತೂ ತಾಳ್ಮೆ ಕಳೆದುಕೊಂಡು ದರ್ಶನ್ ವಿರುದ್ಧವೂ ಏಕವಚನದ ವಾಗ್ದಾಳಿ ಮಾಡುತ್ತಿದ್ದಾರೆ.

ಈ ನಡುವೆ ಸ್ಯಾಂಡಲ್ ವುಡ್ ಹೊಸ ಬದಲಾವಣೆಗೆ ಸಾಕ್ಷಿಯಾಗಿದೆ. ಇಬ್ಬರು ಸ್ಟಾರ್ ನಟರ ನಡುವಿನ ವೈಮನಸ್ಸು ಶಮನ ಆಗಿರುವ ಸೂಚನೆ ಕಂಡುಬಂದಿದೆ. I stand with Darshan sir ಎಂದು ಹೇಳುವ ಮೂಲಕ ದರ್ಶನ್ ಬೆಂಬಲಕ್ಕೆ ಧ್ರುವ ಸರ್ಜಾ ನಿಂತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. 'ಸು ಫ್ರಂ ಸೋ’ ಸಿನಿಮಾ ವೀಕ್ಷಿಸಿದ ಧ್ರುವ ಸರ್ಜಾ, ಈ ವಿಷಯದ ಬಗ್ಗೆಯೂ ಮಾತನಾಡಿ, ರಮ್ಯಾ ಪರವಾಗಿ ನಾನು ನಿಲ್ತೇನೆ ಅವರ ನಡೆ ಸರಿಯಿದೆ. ಆದರೆ ಪ್ರಥಮ್ ವಿಷಯದಲ್ಲಿ ದರ್ಶನ್ ಪರ ನಿಲ್ಲುತ್ತೇನೆ. ಪ್ರಥಮ್ ಮಾತುಗಳು ತುಸು ಅತಿಯಾದವು ಎಂದಿದ್ದಾರೆ.

ತಮ್ಮದೇ ಬಣದಲ್ಲಿ ಗುರುತಿಸಿಕೊಂಡಿದ್ದ ಪ್ರಥಮ್ ವಿರುದ್ಧವೇ ಧ್ರುವ ಮಾತನಾಡಿದ್ದಾರೆ. ಈ ಮೂಲಕ‌ ದರ್ಶನ್ ಪರ ಧ್ರುವ ಸರ್ಜಾ ಬ್ಯಾಟಿಂಗ್ ಮಾಡಿದ್ದಾರೆ. ದರ್ಶನ್ ಫ್ಯಾನ್ಸ್ ಎನ್ನಲಾದ ವ್ಯಕ್ತಿಗಳಿಂದ ಜೀವಬೆದರಿಕೆ ಇದೆ ಎಂದು ದೂರು ದಾಖಲಿಸಿರುವ ಪ್ರಥಮ್ ದರ್ಶನ್ ವಿರುದ್ಧ ಹರಿಹಾಯ್ದಿದ್ದರು. ಇದೀಗ ಪ್ರಥಮ್ ಹೇಳಿಕೆ ತಪ್ಪೆಂದು ಖಡಕ್ಕಾಗಿ ಹೇಳಿದ್ದಾರೆ ಧ್ರುವ ಸರ್ಜಾ.

ಈ ಮೊದಲು ಆಪ್ತರಾಗಿದ್ದ ದರ್ಶನ್, ಧ್ರುವ ನಡುವೆ ವೈಯಕ್ತಿಕ ವಿಚಾರಕ್ಕೆ ಮುನಿಸು ಉಂಟಾಗಿತ್ತು. ಈ ವಿಚಾರ ಅಧಿಕೃತವಾಗಿ ಗೋಚರಿಸಿತ್ತು. ಇದೇ ದರ್ಶನ್ ಕೊಲೆ ಆರೋಪದ ಮೇಲೆ ಜೈಲು ಸೇರಿದ್ದಾಗ ಧ್ರುವ ಕಟುವಾಗಿ ಮಾತನಾಡಿದ್ದರು. ಅದಕ್ಕೂ‌ ಮುನ್ನವೇ ದರ್ಶನ್ ವಿಚಾರವಾಗಿ ತಮ್ಮದೇ ಹುಟ್ಟುಹಬ್ಬದ ದಿನ‌ ನೇರವಾಗಿ ಆಕ್ರೋಶ ಹೊರಹಾಕಿದ್ದರು .

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

'ಶಾಂತಿಗಿಂತ ರಾಜಕೀಯವೇ ಹೆಚ್ಚಾಯಿತು': ನೊಬೆಲ್ ಸಮಿತಿ ವಿರುದ್ಧ ಶ್ವೇತಭವನ ಕೆಂಡಾಮಂಡಲ!

SCROLL FOR NEXT