ಕಿಚ್ಚ ಸುದೀಪ್ - ನಿಶ್ವಿಕಾ ನಾಯ್ಡು 
ಸಿನಿಮಾ ಸುದ್ದಿ

ವಿಜಯ್ ಕಾರ್ತಿಕೇಯನ್ ನಿರ್ದೇಶನದ, ಕಿಚ್ಚ ಸುದೀಪ್ ನಟನೆಯ 'K47' ಚಿತ್ರತಂಡಕ್ಕೆ ನಿಶ್ವಿಕಾ ನಾಯ್ಡು ಸೇರ್ಪಡೆ?

ಪ್ರಭುದೇವ ಮತ್ತು ಶಿವರಾಜ್‌ಕುಮಾರ್ ನಟನೆಯ ಕರಟಕ ದಮನಕ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ನಿಶ್ವಿಕಾ, ಎಚ್ಚರಿಕೆಯಿಂದ ಪಾತ್ರಗಳನ್ನು ಆರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕಿಚ್ಚ ಸುದೀಪ್ ಅವರ 47ನೇ ಚಿತ್ರ 'K47' ಬಗ್ಗೆ ದಿನೇ ದಿನೇ ನಿರೀಕ್ಷೆಗಳು ಹೆಚ್ಚಾಗುತ್ತಿವೆ. 2025 ರಲ್ಲಿಯೇ ಈ ಚಿತ್ರವನ್ನು ಬಿಡುಗಡೆ ಮಾಡಲು ನಿರ್ಧರಿಸಿರುವುದರಿಂದ, ಈ ಚಿತ್ರದ ಚಿತ್ರೀಕರಣ ಚೆನ್ನೈನಲ್ಲಿ ನಡೆಯುತ್ತಿದೆ. ಜುಲೈ 9 ರಂದು ಈ ಚಿತ್ರ ಆರಂಭವಾಗಿದ್ದು, ವೇಗವಾಗಿ ಚಿತ್ರೀಕರಿಸಲಾಗುತ್ತಿದೆ. ಮ್ಯಾಕ್ಸ್ ಚಿತ್ರದ ನಿರ್ದೇಶಕ ವಿಜಯ್ ಕಾರ್ತಿಕೇಯನ್ ಈ ಚಿತ್ರಕ್ಕೂ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸತ್ಯ ಜ್ಯೋತಿ ಫಿಲ್ಮ್ಸ್ ನಿರ್ಮಿಸಿರುವ 'K47' ಚಿತ್ರವು ಈಗಾಗಲೇ ತೀವ್ರ ಕುತೂಹಲ ಮೂಡಿಸುತ್ತಿದೆ. ಚಿತ್ರದ ತಾರಾಗಣದ ಹೆಚ್ಚಿನ ವಿವರಗಳನ್ನು ಗೌಪ್ಯವಾಗಿಡಲಾಗಿದೆ.

ಇದೀಗ, ಜಂಟಲ್‌ಮನ್ ಮತ್ತು ಗುರು ಶಿಷ್ಯರು ಚಿತ್ರಗಳಲ್ಲಿನ ನಟನೆಗೆ ಹೆಸರುವಾಸಿಯಾದ ನಿಶ್ವಿಕಾ ನಾಯ್ಡು 'K47' ನಲ್ಲಿ ನಟಿಸಲು ಮಾತುಕತೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಪ್ರಭುದೇವ ಮತ್ತು ಶಿವರಾಜ್‌ಕುಮಾರ್ ನಟನೆಯ ಕರಟಕ ದಮನಕ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ನಿಶ್ವಿಕಾ, ಎಚ್ಚರಿಕೆಯಿಂದ ಪಾತ್ರಗಳನ್ನು ಆರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದು ನಿಜವಾಗಿದ್ದರೆ, ಕಿಚ್ಚ ಸುದೀಪ್ ಜೊತೆಗೆ ಮೊದಲ ಬಾರಿಗೆ ನಿಶ್ವಿಕಾ ನಾಯ್ಡು ತೆರೆಹಂಚಿಕೊಳ್ಳಲಿದ್ದಾರೆ.

ಮ್ಯಾಕ್ಸ್‌ನಂತೆ ಈ ಚಿತ್ರದಲ್ಲಿ ಸಾಂಪ್ರದಾಯಿಕ ನಾಯಕಿ ಪಾತ್ರವಿರುವುದಿಲ್ಲ. ಆದರೆ, ಬಲವಾದ ಮಹಿಳಾ ಪಾತ್ರಗಳನ್ನು ಒಳಗೊಂಡಿರುತ್ತದೆ ಎಂದು ಚಿತ್ರತಂಡ ಈ ಹಿಂದೆ ಹೇಳಿತ್ತು. ಅದರಂತೆ, ಮೈಕೆಲ್, ರವಿಕುಲ ರಘುರಾಮ ಮತ್ತು ಮಾರ್ಗನ್ ಚಿತ್ರಗಳಲ್ಲಿ ನಟಿಸಿದ ನಟಿ ದೀಪ್ಶಿಖಾ ಅವರನ್ನು ಪ್ರಮುಖ ಪಾತ್ರಗಳಲ್ಲಿ ಒಂದಕ್ಕೆ ಅಂತಿಮಗೊಳಿಸಲಾಗಿದೆ. ನವೀನ್ ಚಂದ್ರ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ, ನಿಶ್ವಿಕಾ ಕೂಡ ಚಿತ್ರತಂಡ ಸೇರಲಿದ್ದಾರೆ.

ಈ ಚಿತ್ರಕ್ಕೆ ಮ್ಯಾಕ್ಸ್ ಚಿತ್ರಕ್ಕಾಗಿ ಕೆಲಸ ಮಾಡಿದ್ದ ತಾಂತ್ರಿಕ ತಂಡವೇ ಕೆಲಸ ಮಾಡಿದ್ದು, ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ ಮತ್ತು ಶೇಖರ್ ಚಂದ್ರು ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಾತಿ ಗಣತಿ ಅವಧಿ ವಿಸ್ತರಣೆ; ರಾಜ್ಯಾದ್ಯಂತ ಶಾಲಾ ಸಮಯವೂ ಬದಲಾವಣೆ

'ಶೂ ಎಸೆತ': CJI ಬಿಆರ್ ಗವಾಯಿ ಜೊತೆ ಮಾತನಾಡಿದ ಪ್ರಧಾನಿ ಮೋದಿ; ಹೇಳಿದ್ದೇನು?

ಸಿಸಿಟಿವಿ ಡೇಟಾ ಹೈಕೋರ್ಟ್‌ಗಳೊಂದಿಗೆ ಮಾತ್ರ ಹಂಚಿಕೊಳ್ಳಬಹುದು: CEC ಜ್ಞಾನೇಶ್ ಕುಮಾರ್

ಕಾಂತಾರ: ಚಾಪ್ಟರ್ 1: ಕರ್ನಾಟಕದಲ್ಲಿ 4ನೇ ದಿನಕ್ಕೇ KGF 2 ಕಲೆಕ್ಷನ್‌ ಧೂಳಿಪಟ!

ನಟ ವಿಜಯ್ ದೇವರಕೊಂಡ ಕಾರು ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು!

SCROLL FOR NEXT