ಸಂತೋಷ್ ಬಾಲರಾಜ್  
ಸಿನಿಮಾ ಸುದ್ದಿ

'ಗಣಪ', 'ಕರಿಯ 2' ಸಿನಿಮಾದ ನಟ ಸಂತೋಷ್ ಬಾಲರಾಜ್ ಇನ್ನಿಲ್ಲ

ಕನ್ನಡದಲ್ಲಿ ಒಂದಿಷ್ಟು ಸಿನಿಮಾಗಳನ್ನು ನಿರ್ಮಿಸಿದ ಬಳಿಕ ಆನೇಕಲ್ ಬಾಲರಾಜ್ ತಮ್ಮ ಮಗ ಸಂತೋಷ್ ಬಾಲರಾಜ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದರು.

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಜನಪ್ರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ಜಾಂಡೀಸ್ ನಿಂದ ಬಳಲುತ್ತಿದ್ದ ಸಂತೋಷ್ ಬಾಲರಾಜ್ ಅವರು, ಕೋಮಾ ಸ್ಥಿತಿಗೆ ಜಾರಿದ್ದರು ಎಂದು ಹೇಳಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

34 ವರ್ಷ ನಟ ಸಂತೋಷ್ ಬಾಲರಾಜ್ ಕನ್ನಡದಲ್ಲಿ ಹಲವು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದಾರೆ. ಇವರ ತಂದೆ ಆನೇಕಲ್ ಬಾಲರಾಜ್ 'ಕರಿಯ' ಸಿನಿಮಾವನ್ನು ನಿರ್ಮಾಣ ಮಾಡಿದ್ದರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿದ್ದ ಈ ಸಿನಿಮಾವನ್ನು ಜೋಗಿ ಪ್ರೇಮ್ ನಿರ್ದೇಶಿಸಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ಕನ್ನಡದಲ್ಲಿ ಒಂದಿಷ್ಟು ಸಿನಿಮಾಗಳನ್ನು ನಿರ್ಮಿಸಿದ ಬಳಿಕ ಆನೇಕಲ್ ಬಾಲರಾಜ್ ತಮ್ಮ ಮಗ ಸಂತೋಷ್ ಬಾಲರಾಜ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದರು.

ಸಂತೋಷ್ ಬಾಲರಾಜ್ ಕನ್ನಡದಲ್ಲಿ 'ಕೆಂಪ', 'ಗಣಪ', 'ಬರ್ಕ್ಲಿ', 'ಕರಿಯ 2' ಅಂತಹ ಸಿನಿಮಾಗಳಲ್ಲಿ ನಟಿಸಿದ್ದಾರೆ. 'ಗಣಪ' ಹಾಗೂ 'ಕರಿಯ 2' ಸಿನಿಮಾಗಳು ಸಂತೋಷ್ ಬಾಲರಾಜ್‌ಗೆ ಸಣ್ಣ ಮಟ್ಟದ ಯಶಸ್ಸನ್ನು ನೀಡಿದ್ದವು.

ಬಹುತೇಕ ತಮ್ಮದೇ ಬ್ಯಾನರ್‌ನ ಸಿನಿಮಾಗಳಲ್ಲಿ ಸಂತೋಷ್ ನಟಿಸುತ್ತಿದ್ದರು. ಕೆಲವು ವರ್ಷಗಳ ಹಿಂದೆ ಸಂತೋಷ್ ಬಾಲರಾಜ್ ಅವರ ತಂದೆ ನಿರ್ಮಾಪಕ ಆನೇಕಲ್ ಬಾಲರಾಜ್ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಸಂತೋಷ್ ಬಾಲರಾಜ್ ಸಿನಿಮಾಗಳಿಂದ ಕೊಂಚ ದೂರ ಉಳಿದಿದ್ದರು. ಆದರೆ, ಗ್ರ್ಯಾಂಡ್ ಕಮ್ ಬ್ಯಾಕ್ ಮಾಡುವುದಕ್ಕೆ ಶತಪ್ರಯತ್ನ ಮಾಡುತ್ತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT