ಮಹಾವತಾರ ನರಸಿಂಹ 
ಸಿನಿಮಾ ಸುದ್ದಿ

Mahavatar Narsimha ಬಾಕ್ಸ್ ಆಫಿಸ್ ಅಬ್ಬರ; ಹಿಂದಿಯಲ್ಲೇ 100 ಕೋಟಿ ಗಳಿಕೆಯತ್ತ ದಾಪುಗಾಲು!

ಭಾರತೀಯ ಸಿನಿಮಾ ಬಾಕ್ಸಾಫಿಸ್ ಗಳಿಕೆಯಲ್ಲಿ ಮಹಾವತಾರ ನರಸಿಂಹ ಚಿತ್ರದ ಅಬ್ಬರ ಮುಂದುವರೆದಿದ್ದು. ಹಿಂದಿ ಭಾಷೆಯೊಂದರಲ್ಲೇ ಚಿತ್ರದ ಗಳಿಕೆ 80 ಕೋಟಿ ರೂ ದಾಟಿದ್ದು, ಚಿತ್ರ 100 ಕೋಟಿ ರೂಗಳಿಕೆಯತ್ತ ದಾಪುಗಾಲಿರಿಸಿದೆ.

ಬೆಂಗಳೂರು: ಕನ್ನಡದ ಆ್ಯನಿಮೇಷನ್ ಸಿನಿಮಾ ಮಹಾವತಾರ ನರಸಿಂಹ ಚಿತ್ರ ಬ್ಲಾಕ್ ಬಸ್ಟರ್ ಪಟ್ಟಿಗೆ ಸೇರ್ಪಡೆಯಾಗಿದ್ದು, ಹಿಂದಿ ಭಾಷೆಯೊಂದರಲ್ಲೇ ಚಿತ್ರ 100 ಕೋಟಿ ರೂಗಳಿಕೆಯತ್ತ ದಾಪುಗಾಲಿರಿಸಿದೆ.

ಹೌದು.. ಭಾರತೀಯ ಸಿನಿಮಾ ಬಾಕ್ಸಾಫಿಸ್ ಗಳಿಕೆಯಲ್ಲಿ ಮಹಾವತಾರ ನರಸಿಂಹ ಚಿತ್ರದ ಅಬ್ಬರ ಮುಂದುವರೆದಿದ್ದು. ಹಿಂದಿ ಭಾಷೆಯೊಂದರಲ್ಲೇ ಚಿತ್ರದ ಗಳಿಕೆ 80 ಕೋಟಿ ರೂ ದಾಟಿದ್ದು, ಚಿತ್ರ 100 ಕೋಟಿ ರೂಗಳಿಕೆಯತ್ತ ದಾಪುಗಾಲಿರಿಸಿದೆ.

ಈ ಬಗ್ಗೆ ಖ್ಯಾತ ಬಾಕ್ಸ್ ಆಫೀಸ್ ತಜ್ಞ ತರಣ್ ಆದರ್ಶ್ ಮಾಹಿತಿ ನೀಡಿದ್ದು, ಮಹಾವತಾರ ನರಸಿಂಹ ಇದೇ ಜುಲೈ 25 ಶುಕ್ರವಾರದಂದು ಬಿಡುಗಡೆಯಾಗಿತ್ತು. ಅಂದಿನಿಂದ ಇಂದಿನವರೆಗೂ ಚಿತ್ರ ತನ್ನ ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಅಬ್ಬರ ಆರ್ಭಟ ನಡೆಸುತ್ತಿದೆ.

ಈಗಾಗಲೇ ಚಿತ್ರ ಜಾಗತಿಕವಾಗಿ ನೂರು ಕೋಟಿ ಕ್ಲಬ್ ಸೇರಿದ್ದು, ಬ್ಲಾಕ್ ಬಸ್ಟರ್ ಪಟ್ಟಿಗೆ ಸೇರ್ಪಡೆಯಾಗಿದ್ದು ಮಾತ್ರವಲ್ಲದೇ ಹಿಂದಿಯಲ್ಲಿ 100 ಕೋಟಿ ರೂಗಳಿಕೆಯತ್ತ ಮುನ್ನುಗ್ಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಮಹಾವತಾರ ನರಸಿಂಹ ಚಿತ್ರ ಹಿಂದಿಯಲ್ಲಿ 2ನೇ ವಾರವೂ ಭರ್ಜರಿ ಗಳಿಕೆ ಮಾಡುತ್ತಿದ್ದು, ಮೊದಲ ವಾರಕ್ಕಿಂತ ಶೇ.57.28 ರಷ್ಟು ಹೆಚ್ಚು ಗಳಿಕೆ ಮಾಡಿದೆ. 2ನೇ ವಾರಾಂತ್ಯಕ್ಕೆ ಚಿತ್ರದ ಒಟ್ಟು ಗಳಿಕೆ 84.44 ಕೋಟಿ ರೂ ಏರಿಕೆಯಾಗಿದೆ. ಆ ಮೂಲಕ ಚಿತ್ರವು ಹಿಂದಿ ಭಾಷೆಯೊಂದರಲ್ಲೇ 100 ಕೋಟಿ ರೂಗಳತ್ತ ದಾಪುಗಾಲಿರಿಸಿದೆ.

ಯಾವುದೇ ಸ್ಟಾರ್​ ಕಲಾವಿದರು ಅಥವಾ ಬಹುದೊಡ್ಡ ಪಾತ್ರವರ್ಗವಿಲ್ಲದೆ ರಿಲೀಸ್ ಆದ ಈ ಚಿತ್ರವು ಇದೀಗ ಭಾರತೀಯ ಚಿತ್ರೋದ್ಯಮದಲ್ಲಿ ಹೊಸ ಮೈಲಿಗಲ್ಲು ತಲುಪಿದೆ. ಅಶ್ವಿನ್ ಕುಮಾರ್​ ನಿರ್ದೇಶನದ ಹಾಗೂ ಹೊಂಬಾಳೆ ಫಿಲ್ಮ್ಸ್ ಪ್ರಸ್ತುತಪಡಿಸಿದ ಕ್ಲೀಮ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಶಿಲ್ಪಾ ಧವನ್, ಕುಶಾಲ್ ದೇಸಾಯಿ, ಚೈತನ್ಯ ದೇಸಾಯಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ; BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT