ಕಾಂತಾರ ಚಾಪ್ಟರ್ 1 ಪೋಸ್ಟರ್  
ಸಿನಿಮಾ ಸುದ್ದಿ

'ಕಾಂತಾರ: ಚಾಪ್ಟರ್ 1' ಚಿತ್ರದ ನಾಯಕಿ ರಿವೀಲ್: ಕನಕವತಿ ಪೋಸ್ಟರ್ ರಿಲೀಸ್

ಇಂದು ವರಮಹಾಲಕ್ಷ್ಮಿಯ ಶುಭದಿನ ಕಾಂತಾರಾ ಚಾಪ್ಟರ್ 1 ಚಿತ್ರದ ನಾಯಕಿಯ ಪಾತ್ರ ಕನಕವತಿ ಎಂದು ಚಿತ್ರತಂಡ ಪೋಸ್ಟರ್ ರಿಲೀಸ್ ಮಾಡಿದೆ.

‘ಕಾಂತಾರ ಚಾಪ್ಟರ್ 1' ಚಿತ್ರ ಅಕ್ಟೋಬರ್ 2ಕ್ಕೆ ತೆರೆಕಾಣುವುದಕ್ಕೆ ಚಿತ್ರಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಕಾಂತಾರ ಚಿತ್ರಕ್ಕೆ ಸಪ್ತಮಿ ಗೌಡ ನಾಯಕಿ ಆಗಿದ್ದರು. ಇದೀಗ ಈ ಚಿತ್ರದ ಪ್ರೀಕ್ವೆಲ್ ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾ​ಗೆ ನಾಯಕಿ ಯಾರು ಎಂಬ ವಿಚಾರವನ್ನು ಚಿತ್ರತಂಡ ರಿವೀಲ್ ಮಾಡಿದೆ.

ಇಂದು ವರಮಹಾಲಕ್ಷ್ಮಿಯ ಶುಭದಿನ ಕಾಂತಾರಾ ಚಾಪ್ಟರ್ 1 ಚಿತ್ರದ ನಾಯಕಿಯ ಪಾತ್ರ ಕನಕವತಿ ಎಂದು ಚಿತ್ರತಂಡ ಪೋಸ್ಟರ್ ರಿಲೀಸ್ ಮಾಡಿದೆ.

‘ಕಾಂತಾರ: ಚಾಪ್ಟರ್ 1’ ಇನ್ನು ಒಂದೂವರೆ ತಿಂಗಳು ಬಾಕಿಯಿದೆ. ಹೀಗಾಗಿ, ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ಆರಂಭಿಸಲು ತಂಡ ಸಿದ್ದವಾಗಿದೆ. ಅದರ ಭಾಗವಾಗಿ ಸಿನಿಮಾದ ನಾಯಕಿ ಪಾತ್ರದ ಪರಿಚಯವನ್ನು ನೀಡಲಾಗಿದೆ. ರುಕ್ಮಿಣಿ ವಸಂತ್ ಈ ಚಿತ್ರದ ನಾಯಕಿ ಎಂಬ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿದೆ.

ರುಕ್ಮಿಣಿ ವಸಂತ್ ಅವರು ಚಿತ್ರದಲ್ಲಿ ಯುವರಾಣಿ ರೀತಿ ಕಾಣಿಸಿದ್ದಾರೆ. ಅವರ ಪಾತ್ರದ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ಪೋಸ್ಟರ್ ಹಿಂಭಾಗ ನೋಡಿದರೆ ಅದು ರಾಜರ ಆಸ್ಥಾನದ ರೀತಿಯೇ ಕಾಣಿಸುತ್ತದೆ. ಈ ಖುಷಿಯ ವಿಚಾರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಸಂಸ್ಥೆ ಸೇರಿದಂತೆ ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್ ಹಂಚಿಕೊಂಡಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಅರವಿಂದ್ ಎಸ್. ಕಶ್ಯಪ್ ಅವರ ಛಾಯಾಗ್ರಹಣ, ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಇದೆ. ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಿಷಬ್ ಅವರು ಈ ಚಿತ್ರದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ. ಅಕ್ಟೋಬರ್ 2ರಂದು ಈ ಸಿನಿಮಾ ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT