ಲ್ಯಾಂಡ್ ಲಾರ್ಡ್ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

‘Landlord' ಆಡಿಯೋ ರೈಟ್ಸ್ ದಾಖಲೆ ಮೊತ್ತಕ್ಕೆ ಮಾರಾಟ

ಸೆಟ್ಟೇರಿದಾಗ್ಲೇ ಭಾರಿ ಸದ್ದು ಮಾಡಿದ್ದ ಈ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗಿದೆ.

ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದ ಆಡಿಯೋ ರೈಟ್ಸ್ ಆನಂದ್ ಆಡಿಯೋ ಪಾಲಾಗಿದೆ. ದಾಖಲೆ ಮೊತ್ತಕ್ಕೆ ಚಿತ್ರದ ಆಡಿಯೋ ರೈಟ್ಸ್ ಮಾರಾಟವಾಗಿದೆ.

ಸಾರಥಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಹೇಮಂತ್ ಗೌಡ ಕೆ.ಎಸ್ ಮತ್ತು ಕೆ.ವಿ. ಸತ್ಯಪ್ರಕಾಶ್ ನಿರ್ಮಿಸಿರುವ ಈ ಚಿತ್ರವನ್ನು ಜಡೇಶಾ ಕೆ. ಹಂಪಿ ನಿರ್ದೇಶಿಸಿದ್ದಾರೆ.

ಸೆಟ್ಟೇರಿದಾಗ್ಲೇ ಭಾರಿ ಸದ್ದು ಮಾಡಿದ್ದ ಈ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗಿದೆ.

ಈ ನಡುವೆ ಚಿತ್ರತಂಡ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸಂತಸದ ಸುದ್ದಿಯೊಂದನ್ನ ಹಂಚಿಕೊಂಡಿದೆ. ಆನಂದ್ ಆಡಿಯೋ ಕಂಪನಿ ಲ್ಯಾಂಡ್ ಲಾರ್ಡ್ ಚಿತ್ರದ ಆಡಿಯೋ ಹಕ್ಕುಗಳನ್ನ ದಾಖಲೆಯ ಬೆಲೆಗೆ ಖರೀದಿಸಿದೆ ಎಂದು ತಿಳಿಸಿದೆ. ಆ ವಿಚಾರವನ್ನ ಚಿತ್ರತಂಡ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ವಿಶೇಷವಾಗಿ ಹಂಚಿಕೊಂಡಿದೆ.

ಆನಂದ್ ಆಡಿಯೋ ಪಾಲಿಗಿದು ಲಕ್ಕಿ ಮತ್ತು ಹಿಟ್ ಕಾಂಬಿನೇಷಶನ್ ಆಗಿದೆ. ದುನಿಯಾ ವಿಜಯ್ ಅವರ ಸಾಲು ಸಾಲು ಸಿನಿಮಾಗಳು ಆನಂದ್ ಆಡಿಯೋ ಕಂಪನಿಗೆ ಒಳ್ಳೆಯ ವ್ಯಾಪಾರವನ್ನ ಮಾಡಿಕೊಟ್ಟಿವೆ. ಅಜನೀಶ್ ಲೋಕನಾಥ್ ಹಾಗೂ ಜಡೇಶ ಕೆ. ಹಂಪಿ ಅವ್ರ ಕಾಂಬಿನೇಶನ್ ಸಿನಿಮಾಗಳು ಆನಂದ್ ಆಡಿಯೋ ಆಯ್ಕೆಯ ಸಕ್ಸಸ್ ಫುಲ್ ಸಿನಿಮಾಗಳಾಗಿವೆ. ಇದರಂತೆ ಆನಂದ್ ಆಡಿಯೋ ಕಂಪನಿ ಲ್ಯಾಂಡ್ ಲಾರ್ಡ್ ಆಡಿಯೋ ಹಕ್ಕನ್ನ ದೊಡ್ಡ ಮೊತ್ತ ಕೊಟ್ಟು ಖರೀದಿಸಿದೆ.

ಈ ಆಲ್ಬಂ ತುಂಬಾ ವಿಶೇಷತೆಗಳಿಂದ ಕೂಡಿದ್ದು, ಹಿನ್ನೆಲೆ ಸಂಗೀತ ಚಿತ್ರದ ಹೈಲೈಟ್ ಗಳಲ್ಲಿ ಒಂದಾಗಿರಲಿದೆಯಂತೆ. ಲ್ಯಾಂಡಲ್ ಲಾರ್ಡ್ ಚಿತ್ರದಲ್ಲಿ ವಿಜಯ್ ಹಿರಿಯ ಮಗಳು ರಿತನ್ಯ ವಿಜಯ್ ಅಭಿನಯಿಸಿರುವುದು ವಿಶೇಷ. ರಚಿತಾರಾಮ್ ಈ ಚಿತ್ರದಲ್ಲಿ ವಿಜಯ್ ಅವರಿಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇತರ ಪ್ರಮುಖ ಪಾತ್ರವರ್ಗ ಕುರಿತ ಮಾಹಿತಿಗಳನ್ನು ಚಿತ್ರ ತಂಡ ಬಹಿರಂಗಪಡಿಸಿಲ್ಲ, ಆದರೆ, ಶೀಘ್ರದಲ್ಲೇ ಚಿತ್ರ ಬಿಡುಗಡೆ ಮಾಡುವ ಸುಳಿವನ್ನು ಚಿತ್ರತಂಡ ನೀಡಿದೆ. ಅಂದುಕೊಂಡಂತೆ ಆದರೆ, ದಸರಾ ಅಥವಾ ದೀಪಾವಳಿ ಹಬ್ಬಕ್ಕೆ ಚಿತ್ರ ಪ್ರೇಕ್ಷಕರೆದುರಿಗೆ ಬರುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಬಿ-ಜಿ ರಾಮ್ ಜಿ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಪ್ರಧಾನಿ ಮೋದಿ ವಿರುದ್ಧ 'ಅವಹೇಳನಕಾರಿ' ಹೇಳಿಕೆ: ವಿಧಾನ ಪರಿಷತ್‌ನಲ್ಲಿ ಕೋಲಾಹಲ, ಕಾಂಗ್ರೆಸ್ ಎಂಎಲ್‌ಸಿ ವಿರುದ್ಧ ಬಿಜೆಪಿ ಕಿಡಿ!

ಉತ್ತರ ಕನ್ನಡ: ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ: ದೂರ ನೀಡಿದ್ದ ಹತ್ಯೆ; ಜೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ

ಬೆಳಗಾವಿ: ತಾಯಿ ಜತೆ ಓಡಿ ಹೋಗಿದ್ದವನನ್ನು ಇರಿದು ಕೊಂದ ಮಗ; ಶವದ ಮೇಲೆ ಕಾಲಿಟ್ಟು ಪೊಲೀಸರಿಗೆ ಕರೆ!

US ಜೊತೆಗೆ ವ್ಯಾಪಾರ ಒಪ್ಪಂದ: ಚೀನಾ, ಪಾಕಿಸ್ತಾನ, ಬಾಂಗ್ಲಾಗಿಂತಲೂ ಭಾರತಕ್ಕೆ ಹೆಚ್ಚಿನ ಲಾಭ! ರಷ್ಯಾದ ಮುಂದಿನ ನಡೆ ಏನು?

SCROLL FOR NEXT