ಮಹಾವತಾರ ನರಸಿಂಹ 
ಸಿನಿಮಾ ಸುದ್ದಿ

Mahavatar Narsimha: ದ್ವಿಶತಕ ದಾಟಿದ ಜಾಗತಿಕ ಬಾಕ್ಸಾಫಿಸ್ ಗಳಿಕೆ!

ಅಶ್ವಿನ್ ಕುಮಾರ್ ನಿರ್ದೇಶನದ ಮಹಾವತಾರ ನರಸಿಂಹ ಚಿತ್ರ ಸತತ 3ನೇ ವಾರದ ಯಶಸ್ವಿ ಪ್ರದರ್ಶನದ ಬಳಿಕ 4ನೇ ವಾರದತ್ತ ದಾಪುಗಾಲಿರಿಸಿದ್ದು, ಚಿತ್ರದ ಹಿಂದಿ ಅವತರಣಿಕೆಯ ಗಳಿಕೆ 126.76 ಕೋಟಿ ರೂ ಗೆ ಏರಿಕೆಯಾಗಿದೆ.

ಬೆಂಗಳೂರು: ಕನ್ನಡದ ಆ್ಯನಿಮೇಷನ್ ಸಿನಿಮಾ ಮಹಾವತಾರ ನರಸಿಂಹ (Mahavatar Narsimha) ಚಿತ್ರದ ಜಾಗತಿಕ ಬಾಕ್ಸ್ ಆಫಿಸ್ ಗಳಿಕೆ 200 ಕೋಟಿ ರೂ ದಾಟಿದ್ದು, ಹಿಂದಿ ಭಾಷೆಯಲ್ಲೇ ಚಿತ್ರದ ಗಳಿಕೆ 126 ಕೋಟಿ ರೂಗಳಷ್ಟಿದೆ.

ಹೌದು... ಅಶ್ವಿನ್ ಕುಮಾರ್ ನಿರ್ದೇಶನದ ಮಹಾವತಾರ ನರಸಿಂಹ ಚಿತ್ರ ಸತತ 3ನೇ ವಾರದ ಯಶಸ್ವಿ ಪ್ರದರ್ಶನದ ಬಳಿಕ 4ನೇ ವಾರದತ್ತ ದಾಪುಗಾಲಿರಿಸಿದ್ದು, ಚಿತ್ರದ ಹಿಂದಿ ಅವತರಣಿಕೆಯ ಗಳಿಕೆ 126.76 ಕೋಟಿ ರೂ ಗೆ ಏರಿಕೆಯಾಗಿದೆ.

ಈ ಬಗ್ಗೆ ಖ್ಯಾತ ಬಾಕ್ಸ್ ಆಫೀಸ್ ತಜ್ಞ ತರಣ್ ಆದರ್ಶ್ ಮಾಹಿತಿ ನೀಡಿದ್ದು, ಮಹಾವತಾರ ನರಸಿಂಹ ಇದೇ ಜುಲೈ 25 ಶುಕ್ರವಾರದಂದು ಬಿಡುಗಡೆಯಾಗಿತ್ತು. ಅಂದಿನಿಂದ ಇಂದಿನವರೆಗೂ ಚಿತ್ರ ತನ್ನ ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಅಬ್ಬರ ಆರ್ಭಟ ನಡೆಸುತ್ತಿದೆ.

ಈಗಾಗಲೇ ಚಿತ್ರ ನೂರು ಕೋಟಿ ಕ್ಲಬ್ ಸೇರಿ, ಹಿಂದಿಯಲ್ಲಿ ಬ್ಲಾಕ್ ಬಸ್ಟರ್ ಪಟ್ಟಿಗೆ ಸೇರ್ಪಡೆಯಾಗಿದ್ದು ಚಿತ್ರ 100 ಕೋಟಿ ರೂ ಗಡಿದಾಟಿ ಇದೀಗ ತನ್ನ ಗಳಿಕೆಯನ್ನು 126.76 ಕೋಟಿ ರೂ ಗೆ ಏರಿಸಿಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.

200 ಕೋಟಿ ರೂ ದಾಟಿದ ಜಾಗತಿಕ ಗಳಿಕೆ

ಇನ್ನು ಚಿತ್ರದ ಜಾಗತಿಕ ಗಳಿಕೆ 200 ಕೋಟಿ ರೂ ಗಡಿ ದಾಟಿದ್ದು, ಈ ಬಗ್ಗೆ ಹೊಂಬಾಳೆ ಫಿಲಂಸ್ ಮಾಹಿತಿ ನೀಡಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಪ್ಯಾನ್ ಇಂಡಿಯಾ ತೆರೆಕಂಡಿದ್ದ ಮಹವಾತಾರ ನರಸಿಂಹ ಚಿತ್ರ ಜಗತ್ತಿನಾದ್ಯಂತ ಈ ವರೆಗೂ 210 ಕೋಟಿ ರೂ ಗಳಿಸಿದೆ ಎಂದು ಟ್ವೀಟ್ ಮಾಡಿದೆ.

'ಮಹಾವತಾರನರಸಿಂಹ ಚಿತ್ರ ಅದ್ಭುತ ಓಟವನ್ನು ಮುಂದುವರೆಸಿದ್ದು, ದಾಖಲೆಗಳನ್ನು ಪುಡಿಗಟ್ಟಿ ವಿಶ್ವಾದ್ಯಂತ ಲಕ್ಷಾಂತರ ಜನರ ಪ್ರೀತಿಯನ್ನು ಗೆದ್ದಿದೆ' ಎಂದು ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!