ಪವನ್ ಒಡೆಯರ್, ಪ್ರಜ್ವಲ್ ಮತ್ತು ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

ಪವನ್ ಒಡೆಯರ್-ಶಿವಣ್ಣ ಕಾಂಬಿನೇಷನ್ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್?

ಮತ್ತೊಂದು ಪ್ರಮುಖ ಪಾತ್ರಕ್ಕಾಗಿ ಪ್ರಜ್ವಲ್ ದೇವರಾಜ್ ಅವರೊಂದಿಗೆ ನಿರ್ಮಾಪಕರು ಮಾತುಕತೆ ನಡೆಸುತ್ತಿದ್ದಾರೆ ಎಂದು ಸಿನಿಮಾ ಎಕ್ಸ್‌ಪ್ರೆಸ್‌ಗೆ ಮೂಲಗಳು ತಿಳಿಸಿವೆ.

ಶಿವರಾಜ್‌ಕುಮಾರ್ ಸದ್ಯ ವಿವಿಧ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾಕೆ. ನಿರ್ದೇಶಕ ಪವನ್ ಒಡೆಯರ್ ಜೊತೆಗಿನ ಮುಂದಿನ ಸಿನಿಮಾ ಚಿತ್ರೀಕರಣವನ್ನು ಪ್ರಾರಂಭಿಸಲು ಸಜ್ಜಾಗುತ್ತಿದ್ದಾರೆ, ಈ ಪ್ರಾಜೆಕ್ಟ್ ಶೀಘ್ರದಲ್ಲೇ ಚಿತ್ರೀಕರಣ ಪ್ರಾರಂಭವಾಗುವ ನಿರೀಕ್ಷೆಯಿದೆ.

ಈ ಚಿತ್ರವನ್ನು ಅಪೇಕ್ಷಾ ಪವನ್ ಒಡೆಯರ್ ಮತ್ತು ಪವನ್ ಒಡೆಯರ್ ತಮ್ಮ ಒಡೆಯರ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಆರ್ನಾ ಕ್ರಿಯೇಟಿವ್ಸ್ ಸಹಯೋಗದೊಂದಿಗೆ ನಿರ್ಮಿಸುತ್ತಿದ್ದಾರೆ. ಶಿವರಾಜ್‌ಕುಮಾರ್ ಹೊರತುಪಡಿಸಿ, ಉಳಿದ ಪಾತ್ರವರ್ಗದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.

ಆದರೆ ಮತ್ತೊಂದು ಪ್ರಮುಖ ಪಾತ್ರಕ್ಕಾಗಿ ಪ್ರಜ್ವಲ್ ದೇವರಾಜ್ ಅವರೊಂದಿಗೆ ನಿರ್ಮಾಪಕರು ಮಾತುಕತೆ ನಡೆಸುತ್ತಿದ್ದಾರೆ ಎಂದು ಸಿನಿಮಾ ಎಕ್ಸ್‌ಪ್ರೆಸ್‌ಗೆ ಮೂಲಗಳು ತಿಳಿಸಿವೆ. ನಟ ಮತ್ತು ನಿರ್ದೇಶಕರು ಈಗಾಗಲೇ ಭೇಟಿಯಾಗಿ ಆರಂಭಿಕ ಚರ್ಚೆ ನಡೆಸಿದ್ದಾರೆ. ಮಾತುಕತೆಗಳು ಈಗ ಅಂತಿಮ ಹಂತಕ್ಕೆ ಸಾಗುತ್ತಿವೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಎಲ್ಲವೂ ಅಂದುಕೊಂಡಂತೆ ನಡೆದರೆ, ಪ್ರಜ್ವಲ್ ಹ್ಯಾಟ್ರಿಕ್ ಹೀರೋ ಜೊತೆ ಮೊದಲ ಬಾರಿಗೆ ಪರದೆ ಹಂಚಿಕೊಳ್ಳುತ್ತಾರೆ.

ಪ್ರಸ್ತುತ ಕರಾವಳಿ ಹಾಗೂ ಗುರುದತ್ತ ಗಾಣಿಗ ನಿರ್ದೇಶನದ ಸಿನಿಮಾ ಹಾಗೂ ಚೀತಾ ಚಿತ್ರದಲ್ಲಿ ಪ್ರಜ್ವಲ್ ನಟಿಸುತ್ತಿದ್ದಾರೆ. ಪವನ್ ಒಡೆಯರ್ ನಿರ್ದೇಶನದ ಶಿವರಾಜ್‌ಕುಮಾರ್ ಅವರೊಂದಿಗೆ ಮತ್ತೊಂದು ಸೇರ್ಪಡೆಯಾಗಬಹುದು. ಆದರೆ ಶಿವರಾಜ್‌ಕುಮಾರ್ ಚಿತ್ರ ತಡವಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. 45 ಮತ್ತು ಸರ್ವೈವರ್ ಬಿಡುಗಡೆಗಾಗಿ ಶಿವಣ್ಣ ಕಾಯುತ್ತಿದ್ದಾರೆ. ಪ್ರಸ್ತುತ ರಾಮ್ ಚರಣ್ ಜೊತೆ ತೆಲುಗಿನ ಪೆದ್ದಿ ಚಿತ್ರೀಕರಣದಲ್ಲಿದ್ದಾರೆ. ಶಿವಣ್ಣ ಶೀಘ್ರದಲ್ಲೇ ಪವನ್ ಒಡೆಯರ್ ಸಿನಿಮಾ ಚಿತ್ರೀಕರಣ ಪ್ರಾರಂಭಿಸಲಿದ್ದಾರೆ, ನಂತರ ಶ್ರೀನಿ ಅವರ ಎ ಫಾರ್ ಆನಂದ್ ಮತ್ತು ಇತರ ಪ್ರಾಜೆಕ್ಟ್ ಕಡೆ ಗಮನ ಹರಸಿಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿನಲ್ಲಿ ಹಗಲು ದರೋಡೆ: 7 ಕೋಟಿ ಕದ್ದ ಖದೀಮರು; 4 ಶಂಕಿತರ ಫೋಟೋ, ಡಿಜಿ-ಐಜಿಪಿಗೆ ಪರಮೇಶ್ವರ್ ತಾಕೀತು!

ದಾಖಲೆಯ 10ನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ನಾಳೆ ಪ್ರಮಾಣವಚನ: BJPಯ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ DCM!

ದೆಹಲಿಯ JNU ಗೆ ಶೃಂಗೇರಿ ಶ್ರೀಗಳ ಭೇಟಿ: ಕ್ಯಾಂಪಸ್ ನಲ್ಲಿ ವಿದ್ಯಾರಣ್ಯ ಮೂರ್ತಿಗೆ ಮಾಲಾರ್ಪಣೆ, VIKAS ಕುರಿತು ಉಪನ್ಯಾಸ; Video

ರೈತರು ಶಾಲು ಬೀಸಿದ್ದನ್ನು ನೋಡಿದರೆ ಬಿಹಾರದ ಗಾಳಿ ತಮಿಳುನಾಡಿಗೆ ಬಂದಂತೆ ಭಾಸವಾಯಿತು: ಪ್ರಧಾನಿ ಮೋದಿ

ಶಬರಿಮಲೆಯಲ್ಲಿ ಜನದಟ್ಟಣೆ: ಅಯ್ಯಪ್ಪ ಭಕ್ತರ ಸುರಕ್ಷಿತ, ಸುಗಮ ಸಂಚಾರಕ್ಕಾಗಿ ಕೇರಳಕ್ಕೆ ಕರ್ನಾಟಕ ಸರ್ಕಾರ ಮನವಿ!

SCROLL FOR NEXT