ಸು ಫ್ರಮ್ ಸೋ ಚಿತ್ರದ ಪೋಸ್ಟರ್‌ 
ಸಿನಿಮಾ ಸುದ್ದಿ

ಬಾಕ್ಸ್ ಆಫೀಸ್‌ನಲ್ಲಿ ತಗ್ಗದ 'ಸು ಫ್ರಮ್ ಸೋ' ಅಬ್ಬರ; ರಾಜ್ ಬಿ ಶೆಟ್ಟಿ ನಿರ್ಮಾಣದ ಚಿತ್ರ ಗಳಿಸಿದ್ದೆಷ್ಟು?

ನಿರ್ಮಾಣದ ಜೊತೆಗೆ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿಯೂ ನಟಿಸಿದ್ದು, ಜೆಪಿ ತುಮಿನಾಡ್, ಶನೀಲ್ ಗೌತಮ್, ಸಂಧ್ಯಾ ಅರಕೆರೆ, ಪ್ರಕಾಶ್ ತುಮಿನಾಡ್, ದೀಪಕ್ ರೈ ಪಣಾಜೆ, ಮೈಮ್ ಪ್ರಸಾದ್ ಮತ್ತು ಪುಷ್ಪರಾಜ್ ಬೋಳಾರ್ ಮುಂತಾದವರು ನಟಿಸಿದ್ದಾರೆ.

ಜುಲೈ 25 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ 'ಸು ಫ್ರಮ್ ಸೋ' ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಯಶಸ್ಸು ಕಾಣುತ್ತಾ ಸಾಗಿದೆ. ದಿನ ಕಳೆದಂತೆಯೂ ಪ್ರೇಕ್ಷಕರನ್ನು ಚಿತ್ರಮಂದಿರಗಳತ್ತ ಕರೆಸುವಲ್ಲಿ ಯಶಸ್ವಿಯಾಗಿದೆ. ಜೆಪಿ ತುಮಿನಾಡ್ ನಿರ್ದೇಶನದ ಈ ಚಿತ್ರವು ಕೆಲವೇ ಕನ್ನಡ ಚಿತ್ರಗಳು ಕಂಡ ದಾಖಲೆಯನ್ನು ಮುಟ್ಟಿದೆ. ಬಾಕ್ಸ್ ಆಫೀಸ್‌ನಲ್ಲಿ ಭಾರತದಲ್ಲಿ ₹ 100 ಕೋಟಿಗೂ ಹೆಚ್ಚು ಗಳಿಸಿರುವ ಸು ಫ್ರಮ್ ಸೋ ಚಿತ್ರವು ವಿದೇಶಿ ಪ್ರೇಕ್ಷಕರಿಗೂ ಮೆಚ್ಚುಗೆಯಾಗಿದೆ. ಚಿತ್ರ ವಿದೇಶಗಳಲ್ಲಿಯೂ ₹ 15 ಕೋಟಿ ಕಲೆಕ್ಷನ್ ಮಾಡಿದೆ.

₹5.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಈ ಚಿತ್ರವು ಇದೀಗ 4 ಮಿಲಿಯನ್‌ಗಿಂತಲೂ ಹೆಚ್ಚು ಜನರನ್ನು ಆಕರ್ಷಿಸಿದೆ. ಕರ್ನಾಟಕದಲ್ಲಿಯೇ ₹80 ಕೋಟಿಗೂ ಹೆಚ್ಚು ಗಳಿಕೆ ಕಂಡಿದೆ. ಸದ್ಯ ಈ ಚಿತ್ರವು ರಾಜ್ಯದಾದ್ಯಂತ 225ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತನ್ನ ಓಟವನ್ನು ಮುಂದುವರೆಸಿದೆ. ಕೂಲಿ ಮತ್ತು ವಾರ್ 2 ನಂತಹ ಬಿಗ್ ಬಜೆಟ್ ಚಿತ್ರಗಳು ತೆರೆಗೆ ಬಂದಾಗ 40 ಚಿತ್ರಮಂದಿರಗಳಲ್ಲಿ ಸು ಫ್ರಮ್ ಸೋ ಎತ್ತಂಗಡಿಯಾದರೂ, ಪ್ರೇಕ್ಷಕರ ಬೇಡಿಕೆಯು ಮತ್ತೆ 25 ಪರದೆಗಳಲ್ಲಿ ಪ್ರದರ್ಶನ ಕಾಣುವಂತೆ ಮಾಡಿದೆ.

ನಿರ್ಮಾಣದ ಜೊತೆಗೆ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿಯೂ ನಟಿಸಿದ್ದು, ಜೆಪಿ ತುಮಿನಾಡ್, ಶನೀಲ್ ಗೌತಮ್, ಸಂಧ್ಯಾ ಅರಕೆರೆ, ಪ್ರಕಾಶ್ ತುಮಿನಾಡ್, ದೀಪಕ್ ರೈ ಪಣಾಜೆ, ಮೈಮ್ ಪ್ರಸಾದ್ ಮತ್ತು ಪುಷ್ಪರಾಜ್ ಬೋಳಾರ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಸುಮೇಧ್ ಕೆ ಅವರ ಸಂಗೀತ ಸಂಯೋಜನೆ ಮತ್ತು ಎಸ್ ಚಂದ್ರಶೇಖರನ್ ಅವರ ಛಾಯಾಗ್ರಹಣವಿದೆ.

ಕರ್ನಾಟಕದಾಚೆಗೂ, ಸು ಫ್ರಮ್ ಸೋ ಚಿತ್ರಕ್ಕೆ ಬೇಡಿಕೆ ಕಂಡುಬಂದಿದ್ದು, ಗಂಗಾಧರ್ ವಿತರಿಸುತ್ತಿದ್ದಾರೆ. ಎಎ ಫಿಲ್ಮ್ಸ್ ಉತ್ತರ ಭಾರತದಲ್ಲಿ ಬಿಡುಗಡೆ ಮಾಡುತ್ತಿದ್ದರೆ, ದುಲ್ಕರ್ ಸಲ್ಮಾನ್ ಅವರ ವೇಫೇರರ್ ಫಿಲ್ಮ್ಸ್ ಮಲಯಾಳಂ ಆವೃತ್ತಿಯನ್ನು ಕೇರಳದಲ್ಲಿ ಬಿಡುಗಡೆ ಮಾಡಿದೆ. ಅಂತರರಾಷ್ಟ್ರೀಯವಾಗಿ, ಫಾರ್ಸ್ ಫಿಲ್ಮ್ಸ್ ಈ ಚಿತ್ರವನ್ನು ಬಹು ಮಾರುಕಟ್ಟೆಗಳಲ್ಲಿ ವಿತರಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಮ್ಮತ್ತ ಎಷ್ಟೇ ಬೆರಳು ತೋರಿದರೂ, ಅಲ್ಪಸಂಖ್ಯಾತರ ಮೇಲೆ ನಿಮ್ಮ ದೌರ್ಜನ್ಯ ಮುಚ್ಚಿಡಲು ಸಾಧ್ಯವಿಲ್ಲ- ಪಾಕ್ ಗೆ ಭಾರತದ ತಿರುಗೇಟು!

ಅನಧಿಕೃತ ಮನೆಗಳ ತೆರವು: ಕೋಗಿಲು ಲೇಔಟ್​​ಗೆ ಡಿ.ಕೆ ಶಿವಕುಮಾರ್ ಭೇಟಿ; ಡಿಸಿಎಂ ಹೇಳಿದ್ದೇನು? Video

ಬೆಂಗಳೂರು: ಕಿರುತೆರೆ ನಟಿ ನಂದಿನಿ ಆತ್ಮಹತ್ಯೆಗೆ ಶರಣು

ಮಾದಕ ವಸ್ತು ತಡೆ: ನಿರ್ಲಕ್ಷ್ಯಕ್ಕಾಗಿ ಮೂವರು ಇನ್ಸ್‌ಪೆಕ್ಟರ್‌ಗಳ ಅಮಾನತು

ಲಂಕಾ ಹನಿಮೂನ್ ನಲ್ಲಿ 'ಹಳೇ ಲವರ್' ವಿಚಾರಕ್ಕೆ ಜಗಳ! ನವದಂಪತಿ ಸೂಸೈಡ್ ಗೆ ಇದೇ ಕಾರಣನಾ? ಕಣ್ಣೀರಿನಲ್ಲಿ ಮುಳುಗಿದ ಕುಟುಂಬ!

SCROLL FOR NEXT