S/O ಮುತ್ತಣ್ಣ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'S/O ಮುತ್ತಣ್ಣ' ಮೂರು ಭಾಷೆಗಳಲ್ಲಿ ಏಕಕಾಲದಲ್ಲಿ ತೆರೆಗೆ; ಬಿಡುಗಡೆ ದಿನಾಂಕ ಮುಂದಕ್ಕೆ

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಚಿತ್ರವು ಆಗಸ್ಟ್ 22 ರಂದು ಬಿಡುಗಡೆಯಾಗಬೇಕಿತ್ತು, ಆದರೆ, ಚಿತ್ರತಂಡ ಇದೀಗ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಿದೆ.

ಡೈನಾಮಿಕ್ ಹೀರೋ ದೇವರಾಜ್ ಅವರ ಪುತ್ರ ಪ್ರಣಮ್ ದೇವರಾಜ್ 'S/O ಮುತ್ತಣ್ಣ' ಚಿತ್ರದ ಮೂಲಕ ಸುದೀರ್ಘ ವಿರಾಮದ ನಂತರ ಬೆಳ್ಳಿತೆರೆಗೆ ಬರುತ್ತಿದ್ದಾರೆ. ಪುರಾತನ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಕಾಂತ್ ಹುಣಸೂರು ನಿರ್ದೇಶಿಸಿದ ಈ ಕೌಟುಂಬಿಕ ಚಿತ್ರವು ತನ್ನ ಭಾವನಾತ್ಮಕ ಕಥಾಹಂದರದೊಂದಿಗೆ ಈಗಾಗಲೇ ತೀವ್ರ ಕುತೂಹಲ ಮೂಡಿಸಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಚಿತ್ರವು ಆಗಸ್ಟ್ 22 ರಂದು ಬಿಡುಗಡೆಯಾಗಬೇಕಿತ್ತು, ಆದರೆ, ಚಿತ್ರತಂಡ ಇದೀಗ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಿದೆ. ಸೆಪ್ಟೆಂಬರ್ 12 ರಂದು ಚಿತ್ರವು ಕನ್ನಡ, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ. ಚಿತ್ರಕ್ಕೆ ಈಗಾಗಲೇ ಕೇರಳದಲ್ಲಿ ಬೇಡಿಕೆ ಉಂಟಾಗಿದ್ದು, ಚಿತ್ರತಂಡ ಏಕಕಾಲದಲ್ಲಿ ಬಹುಭಾಷೆಗಳಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ.

ಚಿತ್ರದ ಟೀಸರ್ ಮತ್ತು ಹಾಡುಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಟ್ರೇಲರ್ ಆಗಸ್ಟ್ 22 ರಂದು ಬಿಡುಗಡೆಯಾಗಲಿದೆ.

ದಿಯಾ ಖ್ಯಾತಿಯ ಖುಷಿ ರವಿ ಪ್ರಣಮ್‌ಗೆ ಜೋಡಿಯಾಗಿ ನಟಿಸಿದ್ದಾರೆ. ರಂಗಾಯಣ ರಘು ತಂದೆಯ ಪಾತ್ರದಲ್ಲಿ ನಟಿಸುತ್ತಿದ್ದು, ಚಿತ್ರದ ಭಾವನಾತ್ಮಕ ಬಂಧವನ್ನು ಬಲಪಡಿಸುತ್ತಿದ್ದಾರೆ. ಇನ್ನುಳಿದಂತೆ ಸುಚೇಂದ್ರ ಪ್ರಸಾದ್, ಗಿರೀಶ್ ಶಿವಣ್ಣ, ತಬಲಾ ನಾನಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ ಮತ್ತು ಅರುಣ್ ಚಕ್ರವರ್ತಿ ಕೂಡ ಈ ಚಿತ್ರದಲ್ಲಿದ್ದಾರೆ.

ಚಿತ್ರಕ್ಕೆ ಸಚಿನ್ ಬಸ್ರೂರ್ ಅವರು ಸಂಗೀತ ಸಂಯೋಜಿಸಿದ್ದಾರೆ. ಯೋಗರಾಜ್ ಭಟ್ ಮತ್ತು ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಛಾಯಾಗ್ರಹಣವನ್ನು ಸ್ಕೇಟಿಂಗ್ ಕೃಷ್ಣ ನಿರ್ವಹಿಸಿದರೆ, ಸಂಕಲನವನ್ನು ಹರೀಶ್ ಕೊಮ್ಮೆ ನಿರ್ವಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel