ನಟಿ ದೀಪಿಕಾ ದಾಸ್ ಮತ್ತು ಯಶ್ ತಾಯಿ ಪುಷ್ಪ 
ಸಿನಿಮಾ ಸುದ್ದಿ

'ನಮ್ಮ ಹತ್ರ ಯಾರೂ ಬರೋ ಅವಶ್ಯಕತೆ ಇಲ್ಲ': ನಟಿ Deepika das ಮತ್ತೆ ಕಿಡಿ?

ತಮ್ಮ ಹಿಂದಿನ ಹೇಳಿಕೆಗೆ ನಟಿ ದೀಪಿಕಾದಾಸ್ ಸಾಮಾಜಿಕ ಪೋಸ್ಟ್ ಕುರಿತು ಯಶ್ ಅವರ ತಾಯಿ ನೀಡಿದ್ದ ಪ್ರತಿಕ್ರಿಯೆಯಾಗಿ ನಟಿ ದೀಪಿಕಾದಾಸ್ ಪೋಸ್ಟ್ ಹಾಕಿದ್ದು, ಪೋಸ್ಟ್ ನಲ್ಲಿ 'ನಮ್ಮ ಹತ್ರ ಯಾರೂ ಬರೋ ಅವಶ್ಯಕತೆ ಇಲ್ಲ' ಎಂದು ಖಾರವಾಗಿ ಹೇಳಿದ್ದಾರೆ.

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಮ್ಮ ಮತ್ತು ನಟಿ ದೀಪಿಕಾ ದಾಸ್ (Deepika das) ನಡುವಿನ ಸಂಘರ್ಷ ಮುಂದುವರೆದಿದ್ದು, ಮತ್ತೆ ಸಾಮಾಜಿಕ ಜಾಲತಾಣದಲ್ಲಿ ನಟಿ ದೀಪಿಕಾದಾಸ್ ಕಿಡಿಕಾರಿದ್ದಾರೆ.

ತಮ್ಮ ಹಿಂದಿನ ಹೇಳಿಕೆಗೆ ನಟಿ ದೀಪಿಕಾದಾಸ್ ಸಾಮಾಜಿಕ ಪೋಸ್ಟ್ ಕುರಿತು ಯಶ್ ಅವರ ತಾಯಿ ನೀಡಿದ್ದ ಪ್ರತಿಕ್ರಿಯೆಯಾಗಿ ನಟಿ ದೀಪಿಕಾದಾಸ್ ಪೋಸ್ಟ್ ಹಾಕಿದ್ದು, ಪೋಸ್ಟ್ ನಲ್ಲಿ 'ನಮ್ಮ ಹತ್ರ ಯಾರೂ ಬರೋ ಅವಶ್ಯಕತೆ ಇಲ್ಲ' ಎಂದು ಖಾರವಾಗಿ ಹೇಳಿದ್ದಾರೆ. ಈ ಬಾರಿ ನಟಿ ದೀಪಿಕಾದಾಸ್ ಯಾರ ಹೆಸರೂ ಉಲ್ಲೇಖಿಸದೇ ಟಾಂಗ್ ಕೊಟ್ಟಿದ್ದಾರೆ.

ತಮ್ಮ ಹೇಳಿಕೆಗೆ ನಟಿ ದೀಪಿಕಾದಾಸ್ ಆಕ್ರೋಶ ವ್ಯಕ್ತಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪುಷ್ಪಮ್ಮ ಪ್ರತಿಕ್ರಿಯಿ ನೀಡಿದ್ದು, 'ದೀಪಿಕಾ ದಾಸ್‌ರನ್ನು ಮೀಟ್ ಮಾಡಿ ಮಾತನಾಡುತ್ತೀನಿ ಎಂದಿದ್ದರು. ಪುಷ್ಪ ಅವರು ಮಾತನಾಡಿರೋ ಆಡಿಯೋ ವೈರಲ್ ಆದ ಬೆನ್ನಲ್ಲೇ ದೀಪಿಕಾ ದಾಸ್ ಮತ್ತೆ ಒಂದಷ್ಟು ವಿಚಾರವನ್ನ ಹಂಚಿಕೊಂಡಿದ್ದಾರೆ.

ಪೋಸ್ಟ್ ನಲ್ಲೇನಿದೆ?

ಸತ್ಯವನ್ನು ತಲೆ ಮೇಲೆ ಹೊಡೆದ ಹಾಗೆ ಹೇಳುವಂಥಹ ಬುದ್ಧಿ? ಯಾರೂ ಎಲ್ಲೂ ಹೋಗಿಲ್ಲ, ಯಾರೂ ನಮ್ಮ ಹತ್ರ ಬರುವ ಅವಶ್ಯಕತೆನೂ ಇಲ್ಲ. ಅನಾವಶ್ಯಕವಾಗಿ ಇಲ್ಲದ್ದನ್ನು ಮಾತನಾಡಿ ನನ್ನ ಹಾಗೂ ನನ್ನ ಕುಟುಂಬವನ್ನು ತರಬೇಡಿ. ದೊಡ್ಡವರ ಅತಿರೇಕದ ಸಣ್ಣತನ ಇನ್ನಾದರೂ ಬೇಡ. ಇನ್ನು ಇದರ ಮೇಲೆ ನಾನು ಮಾತಾಡೋಕೆ ಇಷ್ಟಪಡಲ್ಲ ಎಂದು ಪೋಸ್ಟ್ ಮಾಡಿದ್ದಾರೆ.

ಏನಾಗಿತ್ತು?

ಈ ಹಿಂದೆ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ್ದ ಯಶ್ ಅವರ ತಾಯಿ ಪುಷ್ಪಲತಾಗೆ ಸಂದರ್ಶಕಿ, ‘ನಿಮ್ಮ ಮುಂದಿನ ಸಿನಿಮಾಕ್ಕೆ ದೀಪಿಕಾ ದಾಸ್ ನಾಯಕಿಯಂತೆ?’ ಎಂಬ ಪ್ರಶ್ನೆ ಕೇಳಿದ್ದಾರೆ. ಪ್ರಶ್ನೆಯಿಂದ ಸಿಟ್ಟಾದ ಪುಷ್ಪಲತಾ, ‘ದೀಪಿಕಾ ದಾಸ್‌ಗೂ ನಮಗೂ ಆಗಲ್ಲ. ಅವಳು ಯಾವ ದೊಡ್ಡ ಹೀರೊಯಿನ್ನು?, ಯಾವ ಸಾಧನೆ ಮಾಡಿದ್ದಾಳೆ? ಎಂದು ಪ್ರಶ್ನೆ ಮಾಡಿದ್ದಾರೆ.

ಮುಂದುವರೆದು, ‘ನಮ್ಮ ಸಂಬಂಧವೇ ಆದರೂ ಅವರನ್ನು ದೂರ ಇಟ್ಟಿದ್ದೀವಿ. ಅವರ ಬಗ್ಗೆ ಯಾಕೆ ಕೇಳ್ತೀರಾ? ನನ್ನ ಮಗ ಬೈಯಲ್ವಾ? ಇನ್ನು ಬಹಳ ಹೀರೊಯಿನ್ ಇದ್ದಾರೆ, ಅವರ ಬಗ್ಗೆ ಬೇಕಾದರೆ ಕೇಳಿ. ದೀಪಿಕಾ ದಾಸ್ ಏನು ರಮ್ಯಾನಾ? ರಕ್ಷಿತಾನಾ? ಒಂದು ವೇಳೆ ದೊಡ್ಡದಾಗಿ ಸಾಧನೆ ಮಾಡಿದ್ದರೆ ಅವರ ಬಗ್ಗೆ ಕೇಳಿ ಅದು ಬಿಟ್ಟು ದೀಪಿಕಾ ದಾಸ್ ಕಥೆ ಯಾಕೆ?’ ಎಂದು ಹೇಳಿದ್ದರು.

ಈ ಹೇಳಿಕೆ ವೈರಲ್ ಆಗುತ್ತಿದ್ದಂತೆಯೇ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದ ನಟಿ ದೀಪಿಕಾ ದಾಸ್, 'ಸತ್ಯವನ್ನು ತಲೆ ಮೇಲೆ ಹೊಡೆದ ಹಾಗೆ ಹೇಳುವಂಥಹ ಬುದ್ಧಿ? ಯಾರೂ ಎಲ್ಲೂ ಹೋಗಿಲ್ಲ, ಯಾರೂ ನಮ್ಮ ಹತ್ರ ಬರುವ ಅವಶ್ಯಕತೆನೂ ಇಲ್ಲ. ಅನಾವಶ್ಯಕವಾಗಿ ಇಲ್ಲದ್ದನ್ನು ಮಾತನಾಡಿ ನನ್ನ ಹಾಗೂ ನನ್ನ ಕುಟುಂಬವನ್ನು ತರಬೇಡಿ. ದೊಡ್ಡವರ ಅತಿರೇಕದ ಸಣ್ಣತನ ಇನ್ನಾದರೂ ಬೇಡ. ಇನ್ನು ಇದರ ಮೇಲೆ ನಾನು ಮಾತಾಡೋಕೆ ಇಷ್ಟಪಡಲ್ಲ' ಎಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT