ನಿರ್ದೇಶಕ ಸೂರಿ - ನಟ ಧ್ರುವ ಸರ್ಜಾ 
ಸಿನಿಮಾ ಸುದ್ದಿ

ಕೆಡಿ ಚಿತ್ರ ಬಿಡುಗಡೆಗೆ ಸಿದ್ಧತೆ ಬೆನ್ನಲ್ಲೇ ಸೂರಿ ನಿರ್ದೇಶನದ ಹೊಸ ಚಿತ್ರದಲ್ಲಿ ನಟ ಧ್ರುವ ಸರ್ಜಾ

ಕೆರೆಬೇಟೆ ನಿರ್ದೇಶಕ ರಾಜ್ ಗುರು ಜೊತೆಗೂ ಧ್ರುವ ಸರ್ಜಾ ಅವರು ಮಾತುಕತೆಯಲ್ಲಿ ತೊಡಗಿದ್ದಾರೆ ಎನ್ನುವ ಊಹಾಪೋಹಗಳು ಕೇಳಿಬಂದಿವೆ. ಆದರೆ, ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

ಪ್ರೇಮ್ ನಿರ್ದೇಶನದ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ಬೆಂಬಲದೊಂದಿಗೆ ಬಹು ನಿರೀಕ್ಷಿತ ಪ್ಯಾನ್-ಇಂಡಿಯಾ ಚಿತ್ರ 'ಕೆಡಿ' ಬಿಡುಗಡೆಗೆ ಎದುರು ನೋಡುತ್ತಿರುವ ನಟ ಧ್ರುವ ಸರ್ಜಾ ಇದೀಗ ಹೊಸ ಚಿತ್ರವೊಂದಕ್ಕೆ ಚರ್ಚೆಯಲ್ಲಿ ತೊಡಗಿದ್ದಾರೆ. ಹಲವು ನಿರ್ಮಾಣ ಸಂಸ್ಥೆಗಳೊಂದಿಗೆ ಚರ್ಚೆ ನಡೆಸುತ್ತಿರುವ ಧ್ರುವ ಸರ್ಜಾ, ಸರಿಯಾದ ಕಥೆಗಾಗಿ ಕಾಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಕೆರೆಬೇಟೆ ನಿರ್ದೇಶಕ ರಾಜ್ ಗುರು ಜೊತೆಗೂ ಧ್ರುವ ಸರ್ಜಾ ಅವರು ಮಾತುಕತೆಯಲ್ಲಿ ತೊಡಗಿದ್ದಾರೆ ಎನ್ನುವ ಊಹಾಪೋಹಗಳು ಕೇಳಿಬಂದಿವೆ. ಆದರೆ, ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಕುತೂಹಲಕಾರಿ ವಿಚಾರವೆಂದರೆ, ದುನಿಯಾ, ಅಣ್ಣಾ ಬಾಂಡ್ ಮತ್ತು ಟಗರು ಮುಂತಾದ ಹಿಟ್ ಚಿತ್ರಗಳ ಹಿಂದಿನ ನಿರ್ದೇಶಕ ಸೂರಿ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಸಿನಿಮಾ ಎಕ್ಸ್‌ಪ್ರೆಸ್‌ಗೆ ತಿಳಿದುಬಂದಿದೆ.

ನಾವು ಈ ಹಿಂದೆ ವರದಿ ಮಾಡಿದಂತೆ, ಸೂರಿ ಸದ್ಯಕ್ಕೆ ಪಿಆರ್‌ಕೆ ಪ್ರೊಡಕ್ಷನ್ಸ್, ಜಯಣ್ಣ ಫಿಲ್ಮ್ಸ್ ಮತ್ತು ಕೆಆರ್‌ಜಿ ಸ್ಟುಡಿಯೋಸ್ ಸಹಯೋಗದೊಂದಿಗೆ ಯುವರಾಜ್‌ಕುಮಾರ್ ಅವರೊಂದಿಗಿನ ತಮ್ಮ ದೀರ್ಘಕಾಲದ ಯೋಜಿತ ಸಹಯೋಗವನ್ನು ಪ್ರಾರಂಭಿಸಲು ತಯಾರಿ ನಡೆಸುತ್ತಿದ್ದರು. ಆದರೆ, ಸದ್ಯಕ್ಕೆ ಈ ಯೋಜನೆ ಸ್ಥಗಿತಗೊಂಡಿದೆ ಎಂದು ಮೂಲಗಳು ಹೇಳುತ್ತವೆ. ಇದರ ಪರಿಣಾಮವಾಗಿ, ನಿರ್ದೇಶಕರು ಸದ್ಯ ಧ್ರುವ ಸರ್ಜಾ ಅವರೊಂದಿಗೆ ಮುಂದಿನ ಚಿತ್ರಕ್ಕಾಗಿ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ವರದಿಗಳ ಪ್ರಕಾರ, ಮಾತುಕತೆ ಇನ್ನೂ ಆರಂಭಿಕ ಹಂತದಲ್ಲಿವೆ. ಇಬ್ಬರು ಭೇಟಿಯಾಗಿದ್ದಾರೆ, ಮಾತನಾಡಿದ್ದಾರೆ. ಆದರೆ, ಇನ್ನೂ ಸ್ಪಷ್ಟಪಡಿಸಿಲ್ಲ ಎಂದು ಮೂಲವೊಂದು ಹೇಳುತ್ತದೆ. ಧ್ರುವ ಸರ್ಜಾ ಮತ್ತು ಸೂರಿ ಚಿತ್ರದ ತೀವ್ರ ನಿರೀಕ್ಷೆ ಹುಟ್ಟುಹಾಕಿದ್ದು, ಅಧಿಕೃತ ಘೋಷಣೆ ಯಾವಾಗ ಬರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT