ನಿರ್ದೇಶಕ ಸೂರಿ - ನಟ ಧ್ರುವ ಸರ್ಜಾ 
ಸಿನಿಮಾ ಸುದ್ದಿ

ಕೆಡಿ ಚಿತ್ರ ಬಿಡುಗಡೆಗೆ ಸಿದ್ಧತೆ ಬೆನ್ನಲ್ಲೇ ಸೂರಿ ನಿರ್ದೇಶನದ ಹೊಸ ಚಿತ್ರದಲ್ಲಿ ನಟ ಧ್ರುವ ಸರ್ಜಾ

ಕೆರೆಬೇಟೆ ನಿರ್ದೇಶಕ ರಾಜ್ ಗುರು ಜೊತೆಗೂ ಧ್ರುವ ಸರ್ಜಾ ಅವರು ಮಾತುಕತೆಯಲ್ಲಿ ತೊಡಗಿದ್ದಾರೆ ಎನ್ನುವ ಊಹಾಪೋಹಗಳು ಕೇಳಿಬಂದಿವೆ. ಆದರೆ, ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

ಪ್ರೇಮ್ ನಿರ್ದೇಶನದ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ಬೆಂಬಲದೊಂದಿಗೆ ಬಹು ನಿರೀಕ್ಷಿತ ಪ್ಯಾನ್-ಇಂಡಿಯಾ ಚಿತ್ರ 'ಕೆಡಿ' ಬಿಡುಗಡೆಗೆ ಎದುರು ನೋಡುತ್ತಿರುವ ನಟ ಧ್ರುವ ಸರ್ಜಾ ಇದೀಗ ಹೊಸ ಚಿತ್ರವೊಂದಕ್ಕೆ ಚರ್ಚೆಯಲ್ಲಿ ತೊಡಗಿದ್ದಾರೆ. ಹಲವು ನಿರ್ಮಾಣ ಸಂಸ್ಥೆಗಳೊಂದಿಗೆ ಚರ್ಚೆ ನಡೆಸುತ್ತಿರುವ ಧ್ರುವ ಸರ್ಜಾ, ಸರಿಯಾದ ಕಥೆಗಾಗಿ ಕಾಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಕೆರೆಬೇಟೆ ನಿರ್ದೇಶಕ ರಾಜ್ ಗುರು ಜೊತೆಗೂ ಧ್ರುವ ಸರ್ಜಾ ಅವರು ಮಾತುಕತೆಯಲ್ಲಿ ತೊಡಗಿದ್ದಾರೆ ಎನ್ನುವ ಊಹಾಪೋಹಗಳು ಕೇಳಿಬಂದಿವೆ. ಆದರೆ, ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಕುತೂಹಲಕಾರಿ ವಿಚಾರವೆಂದರೆ, ದುನಿಯಾ, ಅಣ್ಣಾ ಬಾಂಡ್ ಮತ್ತು ಟಗರು ಮುಂತಾದ ಹಿಟ್ ಚಿತ್ರಗಳ ಹಿಂದಿನ ನಿರ್ದೇಶಕ ಸೂರಿ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಸಿನಿಮಾ ಎಕ್ಸ್‌ಪ್ರೆಸ್‌ಗೆ ತಿಳಿದುಬಂದಿದೆ.

ನಾವು ಈ ಹಿಂದೆ ವರದಿ ಮಾಡಿದಂತೆ, ಸೂರಿ ಸದ್ಯಕ್ಕೆ ಪಿಆರ್‌ಕೆ ಪ್ರೊಡಕ್ಷನ್ಸ್, ಜಯಣ್ಣ ಫಿಲ್ಮ್ಸ್ ಮತ್ತು ಕೆಆರ್‌ಜಿ ಸ್ಟುಡಿಯೋಸ್ ಸಹಯೋಗದೊಂದಿಗೆ ಯುವರಾಜ್‌ಕುಮಾರ್ ಅವರೊಂದಿಗಿನ ತಮ್ಮ ದೀರ್ಘಕಾಲದ ಯೋಜಿತ ಸಹಯೋಗವನ್ನು ಪ್ರಾರಂಭಿಸಲು ತಯಾರಿ ನಡೆಸುತ್ತಿದ್ದರು. ಆದರೆ, ಸದ್ಯಕ್ಕೆ ಈ ಯೋಜನೆ ಸ್ಥಗಿತಗೊಂಡಿದೆ ಎಂದು ಮೂಲಗಳು ಹೇಳುತ್ತವೆ. ಇದರ ಪರಿಣಾಮವಾಗಿ, ನಿರ್ದೇಶಕರು ಸದ್ಯ ಧ್ರುವ ಸರ್ಜಾ ಅವರೊಂದಿಗೆ ಮುಂದಿನ ಚಿತ್ರಕ್ಕಾಗಿ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ವರದಿಗಳ ಪ್ರಕಾರ, ಮಾತುಕತೆ ಇನ್ನೂ ಆರಂಭಿಕ ಹಂತದಲ್ಲಿವೆ. ಇಬ್ಬರು ಭೇಟಿಯಾಗಿದ್ದಾರೆ, ಮಾತನಾಡಿದ್ದಾರೆ. ಆದರೆ, ಇನ್ನೂ ಸ್ಪಷ್ಟಪಡಿಸಿಲ್ಲ ಎಂದು ಮೂಲವೊಂದು ಹೇಳುತ್ತದೆ. ಧ್ರುವ ಸರ್ಜಾ ಮತ್ತು ಸೂರಿ ಚಿತ್ರದ ತೀವ್ರ ನಿರೀಕ್ಷೆ ಹುಟ್ಟುಹಾಕಿದ್ದು, ಅಧಿಕೃತ ಘೋಷಣೆ ಯಾವಾಗ ಬರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT