ನಟ ಹರೀಶ್ ರಾಯ್ 
ಸಿನಿಮಾ ಸುದ್ದಿ

Thyroid Cancer: ಗುರುತೇ ಸಿಗಲಾರದಷ್ಟು ಬದಲಾದ ನಟ! 'ರಾಯ್' ಗೆ ಬೇಕಾಗಿದೆ ನೆರವು; Video

ಕ್ಯಾನ್ಸರ್ ಹೊಟ್ಟೆಗೆ ಪಸರಿಸಿ ಸಾವು-ಬದುಕಿನ ನಡುವೆ ಹೋರಾಡುವಂತಾಗಿದೆ. ದೇಹದ ತೂಕ ಕಡಿಮೆಯಾಗಿದ್ದು, ತೆಳಗಾಗಿದ್ದಾರೆ. ಆದರೆ ಹೊಟ್ಟೆಯಲ್ಲಿ ನೀರು ತುಂಬಿ ಊದಿಕೊಂಡಿದೆ.

ಉಪೇಂದ್ರ ನಿರ್ದೇಶನದ ಶಿವರಾಜ್ ಕುಮಾರ್ ಅಭಿನಯದ ಸೂಪರ್ ಹಿಟ್ 'ಓಂ' ಸಿನಿಮಾದ ಡಾನ್ 'ರಾಯ್ ಹಾಗೂ 'ಕೆಜಿಎಫ್ ನ ಚಾಚಾ' ಎಂದೇ ಖ್ಯಾತರಾದ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಗುರುತೇ ಸಿಗಲಾರದಷ್ಟು ಬದಲಾಗಿದ್ದಾರೆ.

ಕ್ಯಾನ್ಸರ್ ಹೊಟ್ಟೆಗೆ ಪಸರಿಸಿ ಸಾವು-ಬದುಕಿನ ನಡುವೆ ಹೋರಾಡುವಂತಾಗಿದೆ. ದೇಹದ ತೂಕ ಕಡಿಮೆಯಾಗಿದ್ದು, ತೆಳಗಾಗಿದ್ದಾರೆ. ಆದರೆ ಹೊಟ್ಟೆಯಲ್ಲಿ ನೀರು ತುಂಬಿ ಊದಿಕೊಂಡಿದೆ.

ಒಂದು ಕಾಲದಲ್ಲಿ ಖಡಕ್ ವಿಲನ್ ಆಗಿ ತೆರೆ ಮೇಲೆ ಮಿಂಚಿದ್ದ ನಟನನ್ನು ಈ ಸ್ಥಿತಿಯಲ್ಲಿ ನೋಡಿ ಅಭಿಮಾನಿಗಳು ಮರುಕುಪಡುತ್ತಿದ್ದು, ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಸೋಶಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಗೋಪಿ ಗೌಡ್ರು ಎಂಬುವರು ಹರೀಶ್ ರಾಯ್ ಅವರನ್ನು ಭೇಟಿಯಾಗಿದ್ದು, ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಚಿಕಿತ್ಸೆಗೆ ಆರ್ಥಿಕ ನೆರವು ಯಾಚಿಸಿರುವ ಹರೀಶ್ ರಾಯ್, ಗುಣವಾದರೆ ಮತ್ತೆ ಸಿನಿಮಾಗಳಲ್ಲಿ ನಟಿಸುತ್ತೇನೆ ಎಂದು ಹೇಳಿದ್ದಾರೆ.

ಹರೀಶ್ ರಾಯ್ ಓಂ, ಸಮರ, ಬೆಂಗಳೂರು ಅಂಡರ್​ ವರ್ಲ್ಡ್, ಜೋಡಿಹಕ್ಕಿ,ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ, ನಲ್ಲ, ಕೆಜಿಎಫ್​​ ಚಾಪ್ಟರ್ 1 ಹಾಗೂ ಕೆಜಿಎಫ್​​ ಚಾಪ್ಟರ್ 2 ಸೇರಿದಂತೆ ತಮಿಳು, ತೆಲುಗು ಚಿತ್ರಗಳಲ್ಲೂ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT