ಶಿವರಾಜ್‌ಕುಮಾರ್ ಅಭಿನಯದ ಕೆವಿಎನ್ ಪ್ರೊಡಕ್ಷನ್ಸ್‌ನ ಮುಂಬರುವ ಚಿತ್ರದ ಪಾತ್ರವರ್ಗ ಮತ್ತು ತಂಡ. 
ಸಿನಿಮಾ ಸುದ್ದಿ

ಶಿವರಾಜ್‌ಕುಮಾರ್‌ ಜೊತೆ ಸಂಜನಾ ಆನಂದ್; ಪವನ್ ಒಡೆಯರ್ ನಿರ್ದೇಶನದ ಚಿತ್ರಕ್ಕೆ ಕೆವಿಎನ್ ಪ್ರೊಡಕ್ಷನ್ ಸಾಥ್

ಈ ಚಿತ್ರಕ್ಕೆ ವೆಂಕಟ್ ನಾರಾಯಣ ಕೋಣಂಕಿ ನೇತೃತ್ವದ ಕೆವಿಎನ್ ಪ್ರೊಡಕ್ಷನ್ಸ್, ಒಡೆಯರ್ ಮೂವೀಸ್ ಸಹಯೋಗದೊಂದಿಗೆ ಬಂಡವಾಳ ಹೂಡಿದೆ.

ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಇದೀಗ ಮತ್ತೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದು, ಸೆಪ್ಟೆಂಬರ್ 3 ರಂದು ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರವನ್ನು ಪವನ್ ಒಡೆಯರ್ ನಿರ್ದೇಶಿಸಲಿದ್ದು, ಶಿವಣ್ಣ ಅವರೊಂದಿಗೆ ಮೊದಲ ಬಾರಿಗೆ ಕೆಲಸ ಮಾಡುತ್ತಿದ್ದಾರೆ. ಪವನ್ ಈ ಹಿಂದೆ ನಟ ಪುನೀತ್ ರಾಜ್‌ಕುಮಾರ್ ಜೊತೆಗೆ ಎರಡು ಹಿಟ್ ಚಿತ್ರಗಳನ್ನು ನಿರ್ದೇಶಿಸಿದ್ದರು. ಬೆಂಗಳೂರಿನ ಬಳಿಕ ಮಂಡ್ಯ, ಹಿಮಾಚಲ ಪ್ರದೇಶ, ಮುಂಬೈ ಮತ್ತು ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆಸಲು ಯೋಜಿಸಲಾಗಿದೆ.

ಈ ಚಿತ್ರಕ್ಕೆ ವೆಂಕಟ್ ನಾರಾಯಣ ಕೋಣಂಕಿ ನೇತೃತ್ವದ ಕೆವಿಎನ್ ಪ್ರೊಡಕ್ಷನ್ಸ್, ಒಡೆಯರ್ ಮೂವೀಸ್ ಸಹಯೋಗದೊಂದಿಗೆ ಬಂಡವಾಳ ಹೂಡಿದೆ. ಕೆವಿಎನ್ ಪ್ರೊಡಕ್ಷನ್ಸ್ ಸದ್ಯ ಪ್ರೇಮ್ ನಿರ್ದೇಶನದ ಕೆಡಿ, ಜನ ನಾಯಗನ್ ಮತ್ತು ಪ್ರಿಯದರ್ಶನ್ ನಿರ್ದೇಶನದ ಅಕ್ಷಯ್ ಕುಮಾರ್ ಮತ್ತು ಸೈಫ್ ಅಲಿ ಖಾನ್ ಅಭಿನಯದ ಹಿಂದಿ ಚಿತ್ರ, ನಿರ್ದೇಶಕ ಬಾಲನ್ ಅವರ ಮಲಯಾಳಂ ಚಿತ್ರ ಮತ್ತು ಮೆಗಾಸ್ಟಾರ್ ಚಿರಂಜೀವಿ ಅಭಿನಯದ ತೆಲುಗು ಚಿತ್ರ ಸೇರಿದಂತೆ ಹಲವಾರು ಬಹುಭಾಷಾ ಚಿತ್ರಗಳನ್ನು ನಿರ್ಮಿಸುತ್ತಿದೆ.

ಚಿತ್ರದಲ್ಲಿ ಜಯರಾಮ್, ಸಾಯಿ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ ಮತ್ತು ಪ್ರಕಾಶ್ ಬೆಳವಾಡಿಯಂತಹ ಹಿರಿಯ ನಟರು ನಟಿಸುತ್ತಿದ್ದಾರೆ. ಶಿವಣ್ಣನಿಗೆ ಜೋಡಿಯಾಗಿ ಸಂಜನಾ ಆನಂದ್ ನಟಿಸಲಿದ್ದು, ದಿಯಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಕೂಡ ಚಿತ್ರದಲ್ಲಿ ನಟಿಸಲಿದ್ದಾರೆ.

ದೊಡ್ಡ ಮಟ್ಟದಲ್ಲಿ ನಿರ್ಮಿಸಲಾಗುತ್ತಿರುವ ಚಿತ್ರವು ಆ್ಯಕ್ಷನ್, ಡ್ರಾಮಾ ಮತ್ತು ಭಾವನೆಗಳಿಂದ ತುಂಬಿದ ಕಮರ್ಷಿಯಲ್ ಎಂಟರ್‌ಟೈನರ್‌ ಆಗಿ ಮೂಡಿಬರಲಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದರೆ, ಶಶಾಂಕ್ ನಾರಾಯಣ್ ಸಂಕಲನವನ್ನು ನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Women World Cup 2025: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 4 ರನ್‌ಗಳ ವಿರೋಚಿತ ಸೋಲು; ಸೆಮಿಸ್‌ಗಾಗಿ ಕಿವೀಸ್ ಜೊತೆ ಸೆಣೆಸಾಟ!

ಮುಸ್ಲಿಂ ಯುವಕರನ್ನು ಮದುವೆಯಾದರೆ ಅಂತಹ ಮಗಳ ಕಾಲು ಮುರಿಯಿರಿ: ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್

ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಅವಹೇಳನ: ರಮೇಶ್ ಕತ್ತಿಗೆ ಸಂಕಷ್ಟ; ಅಟ್ರಾಸಿಟಿ ಪ್ರಕರಣ ದಾಖಲು!

Flood Relief: ಕರ್ನಾಟಕ, ಮಹಾರಾಷ್ಟ್ರಕ್ಕೆ 1,950 ಕೋಟಿ ರೂ ಬಿಡುಗಡೆಗೆ ಕೇಂದ್ರ ಸರ್ಕಾರ ಅನುಮೋದನೆ!

News headlines 19-10-2025 | ಖರ್ಗೆ ತವರಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ; ಮತಗಟ್ಟೆ ಬಳಿ ಜಾರಕಿಹೊಳಿ- ಸವದಿ ಬಣಗಳ ನಡುವೆ ಹೊಡೆದಾಟ; DK Shivakumar- Kiran Majumdar ನಡುವೆ ನಿಲ್ಲದ ವಾಕ್ಸಮರ

SCROLL FOR NEXT