ಶಿವರಾಜ್‌ಕುಮಾರ್ ಅಭಿನಯದ ಕೆವಿಎನ್ ಪ್ರೊಡಕ್ಷನ್ಸ್‌ನ ಮುಂಬರುವ ಚಿತ್ರದ ಪಾತ್ರವರ್ಗ ಮತ್ತು ತಂಡ. 
ಸಿನಿಮಾ ಸುದ್ದಿ

ಶಿವರಾಜ್‌ಕುಮಾರ್‌ ಜೊತೆ ಸಂಜನಾ ಆನಂದ್; ಪವನ್ ಒಡೆಯರ್ ನಿರ್ದೇಶನದ ಚಿತ್ರಕ್ಕೆ ಕೆವಿಎನ್ ಪ್ರೊಡಕ್ಷನ್ ಸಾಥ್

ಈ ಚಿತ್ರಕ್ಕೆ ವೆಂಕಟ್ ನಾರಾಯಣ ಕೋಣಂಕಿ ನೇತೃತ್ವದ ಕೆವಿಎನ್ ಪ್ರೊಡಕ್ಷನ್ಸ್, ಒಡೆಯರ್ ಮೂವೀಸ್ ಸಹಯೋಗದೊಂದಿಗೆ ಬಂಡವಾಳ ಹೂಡಿದೆ.

ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಇದೀಗ ಮತ್ತೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದು, ಸೆಪ್ಟೆಂಬರ್ 3 ರಂದು ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರವನ್ನು ಪವನ್ ಒಡೆಯರ್ ನಿರ್ದೇಶಿಸಲಿದ್ದು, ಶಿವಣ್ಣ ಅವರೊಂದಿಗೆ ಮೊದಲ ಬಾರಿಗೆ ಕೆಲಸ ಮಾಡುತ್ತಿದ್ದಾರೆ. ಪವನ್ ಈ ಹಿಂದೆ ನಟ ಪುನೀತ್ ರಾಜ್‌ಕುಮಾರ್ ಜೊತೆಗೆ ಎರಡು ಹಿಟ್ ಚಿತ್ರಗಳನ್ನು ನಿರ್ದೇಶಿಸಿದ್ದರು. ಬೆಂಗಳೂರಿನ ಬಳಿಕ ಮಂಡ್ಯ, ಹಿಮಾಚಲ ಪ್ರದೇಶ, ಮುಂಬೈ ಮತ್ತು ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆಸಲು ಯೋಜಿಸಲಾಗಿದೆ.

ಈ ಚಿತ್ರಕ್ಕೆ ವೆಂಕಟ್ ನಾರಾಯಣ ಕೋಣಂಕಿ ನೇತೃತ್ವದ ಕೆವಿಎನ್ ಪ್ರೊಡಕ್ಷನ್ಸ್, ಒಡೆಯರ್ ಮೂವೀಸ್ ಸಹಯೋಗದೊಂದಿಗೆ ಬಂಡವಾಳ ಹೂಡಿದೆ. ಕೆವಿಎನ್ ಪ್ರೊಡಕ್ಷನ್ಸ್ ಸದ್ಯ ಪ್ರೇಮ್ ನಿರ್ದೇಶನದ ಕೆಡಿ, ಜನ ನಾಯಗನ್ ಮತ್ತು ಪ್ರಿಯದರ್ಶನ್ ನಿರ್ದೇಶನದ ಅಕ್ಷಯ್ ಕುಮಾರ್ ಮತ್ತು ಸೈಫ್ ಅಲಿ ಖಾನ್ ಅಭಿನಯದ ಹಿಂದಿ ಚಿತ್ರ, ನಿರ್ದೇಶಕ ಬಾಲನ್ ಅವರ ಮಲಯಾಳಂ ಚಿತ್ರ ಮತ್ತು ಮೆಗಾಸ್ಟಾರ್ ಚಿರಂಜೀವಿ ಅಭಿನಯದ ತೆಲುಗು ಚಿತ್ರ ಸೇರಿದಂತೆ ಹಲವಾರು ಬಹುಭಾಷಾ ಚಿತ್ರಗಳನ್ನು ನಿರ್ಮಿಸುತ್ತಿದೆ.

ಚಿತ್ರದಲ್ಲಿ ಜಯರಾಮ್, ಸಾಯಿ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ ಮತ್ತು ಪ್ರಕಾಶ್ ಬೆಳವಾಡಿಯಂತಹ ಹಿರಿಯ ನಟರು ನಟಿಸುತ್ತಿದ್ದಾರೆ. ಶಿವಣ್ಣನಿಗೆ ಜೋಡಿಯಾಗಿ ಸಂಜನಾ ಆನಂದ್ ನಟಿಸಲಿದ್ದು, ದಿಯಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಕೂಡ ಚಿತ್ರದಲ್ಲಿ ನಟಿಸಲಿದ್ದಾರೆ.

ದೊಡ್ಡ ಮಟ್ಟದಲ್ಲಿ ನಿರ್ಮಿಸಲಾಗುತ್ತಿರುವ ಚಿತ್ರವು ಆ್ಯಕ್ಷನ್, ಡ್ರಾಮಾ ಮತ್ತು ಭಾವನೆಗಳಿಂದ ತುಂಬಿದ ಕಮರ್ಷಿಯಲ್ ಎಂಟರ್‌ಟೈನರ್‌ ಆಗಿ ಮೂಡಿಬರಲಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದರೆ, ಶಶಾಂಕ್ ನಾರಾಯಣ್ ಸಂಕಲನವನ್ನು ನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾದ ರೋಬೋಟ್ ಡಾಗ್ ವಿವಾದ: AI Summit expoದಿಂದ ಗಾಲ್ಗೋಟಿಯಾಸ್ ವಿವಿಗೆ ಸ್ಟಾಲ್ ತೆರವುಗೊಳಿಸಲು ಸೂಚನೆ-Video

ಮುಸ್ಲಿಂರಿಗೆ ನೀಡಲಾಗಿದ್ದ ಶೇ.5 ರಷ್ಟು ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

T20 World Cup 2026: ಸೂಪರ್ 8 ಹಂತದ ಗ್ರೂಪ್ 1ರ ವೇಳಾಪಟ್ಟಿ ಪ್ರಕಟ; ಫೆಬ್ರುವರಿ 22ರಂದು ಭಾರತ- ದಕ್ಷಿಣ ಆಫ್ರಿಕಾ ಮುಖಾಮುಖಿ!

Rajya Sabha polls: ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ

KRS–ಕಬಿನಿಯಲ್ಲಿ 52 ಟಿಎಂಸಿ ಅಡಿ ನೀರಿದ್ದು, ಈ ಬೇಸಿಗೆಯಲ್ಲಿ ಬೆಂಗಳೂರಿಗೆ ನೀರಿನ ಕೊರತೆ ಇಲ್ಲ: BWSSB

SCROLL FOR NEXT