ಸಾಯಿನಂದ ನಟನೆಯ ಮುಜುಗರ ಸಿನಿಮಾಗೆ ಚಾಲನೆ 
ಸಿನಿಮಾ ಸುದ್ದಿ

ದಿ. ನಟ 'ಕಲಾತಪಸ್ವಿ' ರಾಜೇಶ್ ಮೊಮ್ಮಗ ಚಿತ್ರರಂಗಕ್ಕೆ ಎಂಟ್ರಿ: 'ಮುಜುಗರ' ಸಿನಿಮಾಗೆ ಚಾಲನೆ

ನನ್ನ ತಾತ ರಾಜೇಶ್ ಯಾವಾಗಲೂ ನನಗೆ ಸ್ಫೂರ್ತಿ. ಅವರು ಇಂದು ಬದುಕಿದ್ದಿದ್ದರೇ ತುಂಬಾ ಹೆಮ್ಮೆಪಡುತ್ತಿದ್ದರು. ನಾನು ನಾಗತಿಹಳ್ಳಿ ಚಂದ್ರಶೇಖರ್ ಅವರ ಟೆಂಟ್ ಶಾಲೆಯಲ್ಲಿ ನಟನಾ ಕೋರ್ಸ್ ಪೂರ್ಣಗೊಳಿಸಿದ್ದೇನೆ, ನಾಯಕನಾಗಿ ಇದು ನನ್ನ ಮೊದಲ ಚಿತ್ರ.

ಕನ್ನಡ ಚಿತ್ರರಂಗವು ಪ್ರಸಿದ್ಧ ಕುಟುಂಬದಿಂದ ಬಂದ ಹೊಸ ಪ್ರತಿಭೆಯನ್ನು ಸ್ವಾಗತಿಸಲು ಸಜ್ಜಾಗಿದೆ. ನಟ ಅರ್ಜುನ್ ಸರ್ಜಾ ಅವರ ಮಾವ ರಾಜೇಶ್ ಅವರ ಮೊಮ್ಮಗ ಸಾಯಿನಂದ್ ಸಿನಿಮಾ ರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ರಾಜೇಶ್ ಅವರ ಮೊಮ್ಮಗ ಸಾಯಿನಂದ್ ಅಭಿನಯದ ‘ಮುಜುಗರ’ ಚಿತ್ರವು ಇತ್ತೀಚೆಗೆ ಪ್ರಾರಂಭವಾಯಿತು, ಶಾಂತ ಶ್ರೀನಿವಾಸ್ ನಿರ್ಮಿಸುತ್ತಿರುವ ಈ ಚಿತ್ರವನ್ನು ತರುಣ್ ಎನ್ (ಜ್ಯೋತಿಪ್ರಿಯ) ನಿರ್ದೇಶಿಸುತ್ತಿದ್ದಾರೆ. ಚಿತ್ರದ ಮೊದಲ ಸನ್ನಿವೇಶಕ್ಕೆ ಪ್ರಮೋದ್ ಶೆಟ್ಟಿ ಆರಂಭ ಫಲಕ ತೋರಿದರು. ನಿರ್ಮಾಪಕಿ ಶಾಂತ ಶ್ರೀನಿವಾಸ್ ಕ್ಯಾಮೆರಾ ಚಾಲನೆ ಮಾಡಿದರು.

ನನ್ನ ತಾತ ರಾಜೇಶ್ ಯಾವಾಗಲೂ ನನಗೆ ಸ್ಫೂರ್ತಿ. ಅವರು ಇಂದು ಬದುಕಿದ್ದಿದ್ದರೇ ತುಂಬಾ ಹೆಮ್ಮೆಪಡುತ್ತಿದ್ದರು. ನಾನು ನಾಗತಿಹಳ್ಳಿ ಚಂದ್ರಶೇಖರ್ ಅವರ ಟೆಂಟ್ ಶಾಲೆಯಲ್ಲಿ ನಟನಾ ಕೋರ್ಸ್ ಪೂರ್ಣಗೊಳಿಸಿದ್ದೇನೆ, ನಾಯಕನಾಗಿ ಇದು ನನ್ನ ಮೊದಲ ಚಿತ್ರ. ಈ ಅವಕಾಶಕ್ಕಾಗಿ ನಿರ್ಮಾಪಕ ಮತ್ತು ನಿರ್ದೇಶಕರಿಗೆ ನಾನು ಕೃತಜ್ಞನಾಗಿದ್ದೇನೆ ಎಂದು ಸಾಯಿ ನಂದ್ ಹೇಳಿದ್ದಾರೆ.

ನನಗೆ ಚಲನಚಿತ್ರೋದ್ಯಮದೊಂದಿಗೆ 20 ವರ್ಷಗಳ ಒಡನಾಟವಿದೆ, ನಾಗಾಭರಣ, ಅನಂತರಾಜು, ಅಮರ್ ಮತ್ತು 'ಕಾಂತಿ' ಭರತ್ ಅವರಂತಹ ದಿಗ್ಗಜರ ನಿರ್ದೇಶನದಲ್ಲಿ ಕೆಲಸ ಮಾಡಿದ್ದೇನೆ. ಮುಜುಗುರ ನನ್ನ ಮೊದಲ ಸ್ವತಂತ್ರ ನಿರ್ದೇಶನದ ಪ್ರಾಜೆಕ್ಟ್ ಆಗಿದೆ. ಈ ಕಥೆ ಕಾಫಿ ಎಸ್ಟೇಟ್ ಸುತ್ತ ನಡೆಯುವ ಪ್ರೇಮಕಥೆಯಾಗಿದೆ" ಎಂದು ನಿರ್ದೇಶಕ ತರುಣ್ ಎನ್ ತಿಳಿಸಿದ್ದಾರೆ.

ನಮ್ಮ ಸಂಸ್ಥೆಯು ಈ ಹಿಂದೆ 'ಎಲ್ಲಿ ಆಡೋದು ನಾವೆಲ್ಲಾ ಎಲ್ಲಿ ಆಡೋದು' ಎಂಬ ಮಕ್ಕಳ ಚಿತ್ರ ನಿರ್ಮಿಸಿತ್ತು, ಇದು ರಾಜ್ಯ ಪ್ರಶಸ್ತಿಯನ್ನು ಗೆದ್ದಿತು. ಇದು ನಮ್ಮ ಎರಡನೇ ಸಾಹಸ. ನಿರ್ದೇಶಕರು ಹೇಳಿದ ಕಥೆಯಿಂದ ನಾವು ಆಕರ್ಷಿತರಾಗಿ ಅದನ್ನು ಬೆಂಬಲಿಸಲು ನಿರ್ಧರಿಸಿದೆವು ಎಂದು ನಿರ್ಮಾಪಕಿ ಶಾಂತ ಶ್ರೀನಿವಾಸ್ ಹೇಳಿದರು.

ಸಾಯಿನಂದ್ ಗೆ ನಿಮಿಷ್ಕಾ ಮತ್ತು ತನು ನಾಯಕಿಯರಾಗಿ ನಟಿಸಿದ್ದಾರೆ. ಸುಭಾಷ್ ಎರಡನೇ ನಾಯಕ, ಮತ್ತು ಪ್ರಮೋದ್ ಶೆಟ್ಟಿ ಖಳನಾಯಕನಾಗಿ ನಟಿಸಿದ್ದಾರೆ. ಡಿಸೆಂಬರ್ 15 ರಂದು ಸಕಲೇಶಪುರ, ಚಿಕ್ಕಮಗಳೂರು, ಹೊರನಾಡು, ಕಳಸ, ಮಡಿಕೇರಿ ಮತ್ತು ಹತ್ತಿರದ ಪ್ರದೇಶಗಳಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಜೈ ಆನಂದ್ ಛಾಯಾಗ್ರಾಹಕರಾಗದ್ದು , ಶ್ರೀಧರ್ ವಿ ಸಂಭ್ರಮ್ ಸಂಗೀತ ಸಂಯೋಜಿಸುತ್ತಿದ್ದಾರೆ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Imran Khan ಸಾವಿನ ಊಹಾಪೋಹ ನಡುವೆ ಜೈಲಿನಲ್ಲಿ ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ!

'ನಮ್ ಜೊತೆ ಯುದ್ಧ ಬೇಕು ಅಂದ್ರೆ.. ನಾವು ಸಿದ್ಧ': ಯೂರೋಪ್ ಗೆ Vladimir Putin ಬಹಿರಂಗ ಎಚ್ಚರಿಕೆ

Video: 'ಅಯೋಧ್ಯೆ ಮಾತ್ರವಲ್ಲ.. ಮುಸ್ಲಿಮರು ಇನ್ನೂ 2 ಐತಿಹಾಸಿಕ ಸ್ಥಳಗಳ ಬಿಟ್ಟುಕೊಡಿ, ಭಾರತ ಜಾತ್ಯಾತೀತವಾಗಿರಲು ಹಿಂದೂಗಳೇ ಕಾರಣ': Muhammad

ಲೋಕಸಭೆಯಲ್ಲಿ ಡಿಸೆಂಬರ್ 9 ರಂದು SIR ಕುರಿತು ಚರ್ಚೆ; ಚರ್ಚೆಗೆ 10 ಗಂಟೆ ಸಮಯ ನಿಗದಿ

SCROLL FOR NEXT