ಕೌಂತೇಯ ಸಿನಿಮಾ ಸ್ಟಿಲ್  
ಸಿನಿಮಾ ಸುದ್ದಿ

ಮರ್ಡರ್ ಮಿಸ್ಟ್ರಿ 'ಕೌಂತೇಯ' ಸಿನಿಮಾದಲ್ಲಿ ನೆಗೆಟಿವ್ ಪಾತ್ರದಲ್ಲಿ ಮನೋರಂಜನ್‌ ರವಿಚಂದ್ರನ್‌!

ಶರಣ್ಯ ಶೆಟ್ಟಿ ಚಿತ್ರದ ನಾಯಕಿ. ಅಚ್ಯುತ್ ಕುಮಾರ್ ಮಗಳ ಪಾತ್ರದಲ್ಲಿ ಶರಣ್ಯ ಕಾಣಿಸಿಕೊಂಡಿದ್ದಾರೆ. ಮನೋರಂಜನ್‌ಗೆ ಜೋಡಿಯಾಗಿ ಅನನ್ಯ ರಾಜಶೇಖರ್ ನಟಿಸುತ್ತಿದ್ದಾರೆ. ಎಸಿಪಿಯಾಗಿ ಪ್ರಿಯಾಂಕಾ ತಿಮ್ಮೇಶ್ ಕಾಣಿಸಿಕೊಂಡಿದ್ದಾರೆ.

ಕೌಂತೇಯ ಚಿತ್ರದಲ್ಲಿ ಮನೋರಂಜನ್‌ ರವಿಚಂದ್ರನ್‌ ಖಳನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಬಿ.ಕೆ.ಚಂದ್ರಹಾಸ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿರುವ ಚಿತ್ರದ ಶೇಕಡ 70ರಷ್ಟು ಚಿತ್ರೀಕರಣ ಮುಕ್ತಾಯಗೊಂಡಿದೆ ಎಂದು ಚಿತ್ರತಂಡ ಹೇಳಿದೆ.

ಅಚ್ಯುತ್‌ ಕುಮಾರ್‌ ಪ್ರಮುಖ ಪಾತ್ರದಲ್ಲಿರುವ ಚಿತ್ರ ಮೈಸೂರಿನ ಸುತ್ತಮುತ್ತ ಚಿತ್ರೀಕರಣಗೊಳ್ಳುತ್ತಿದೆ. ಈ ಸಿನಿಮಾದಲ್ಲಿ ಅಚ್ಯುತ್ ಕುಮಾರ್‌ ಸಕಾರಾತ್ಮಕ ಪಾತ್ರದಲ್ಲಿ ಕಾಣಿಸಿಕೊಂಡರೆ, ಇದೇ ಮೊದಲ ಬಾರಿಗೆ ಮನೋರಂಜನ್‌ ಖಳನಾಯಕನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಶರಣ್ಯ ಶೆಟ್ಟಿ ಚಿತ್ರದ ನಾಯಕಿ. ಅಚ್ಯುತ್ ಕುಮಾರ್ ಮಗಳ ಪಾತ್ರದಲ್ಲಿ ಶರಣ್ಯ ಕಾಣಿಸಿಕೊಂಡಿದ್ದಾರೆ. ಮನೋರಂಜನ್‌ಗೆ ಜೋಡಿಯಾಗಿ ಅನನ್ಯ ರಾಜಶೇಖರ್ ನಟಿಸುತ್ತಿದ್ದಾರೆ. ಎಸಿಪಿಯಾಗಿ ಪ್ರಿಯಾಂಕಾ ತಿಮ್ಮೇಶ್ ಕಾಣಿಸಿಕೊಂಡಿದ್ದಾರೆ.

ಸುರೇಶ್ ಕುಮಾರ್ ಬಂಡವಾಳ ಹೂಡಿದ್ದಾರೆ. ಹರಿ. ಪಿ.ಎಲ್.ರವಿ ಛಾಯಾಚಿತ್ರಗ್ರಹಣ ಈ ಚಿತ್ರಕ್ಕಿದೆ. ಕೌಂತೇಯ ಅಂದರೆ ಕುಂತಿಪುತ್ರ ಎಂದರ್ಥ. ಈ ಚಿತ್ರದಲ್ಲಿ ಕೌಂತೇಯ ಯಾರು ಎಂಬುದೇ ಕುತೂಹಲದ ಸಂಗತಿ. ಮರ್ಡರ್ ಮಿಸ್ಟ್ರಿ ಕಥೆಯನ್ನು ಕೌತುಕವಾಗಿ ತೆಗೆದುಕೊಂಡು ಹೋಗಿದ್ದೇವೆ. ನಿರೂಪಣೆಯಲ್ಲೂ ಭಿನ್ನತೆ ಇದೆ ಎಂದಿದೆ ಚಿತ್ರತಂಡ. ಮನೋರಂಜನ್ ಅವರ ಅಭಿನಯವು ಚಿತ್ರದ ಅತ್ಯಂತ ಚರ್ಚೆಯ ಅಂಶವಾಗಲಿದೆ ಎಂದು ಅವರು ಭರವಸೆ ನೀಡುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ'; ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas Pai ಪತ್ರ! Video

U19 World Cup: ಪಾಕಿಸ್ತಾನವನ್ನು ಬಗ್ಗು ಬಡಿದು ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತ, ಸೆಮಿಸ್‌ನಲ್ಲಿ ಅಫ್ಘಾನ್ ಜೊತೆ ಗುದ್ದಾಟ!

ಕೇಂದ್ರ ಬಜೆಟ್ 2026: ಷೇರುಮಾರುಕಟ್ಟೆ 'ರಕ್ತಪಾತ', ಹೂಡಿಕೆದಾರರ 9.40 ಲಕ್ಷ ಕೋಟಿ ರೂ ನಷ್ಟ! ಕುಸಿತಕ್ಕೆ ಕಾರಣವೇನು?

ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾ ವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!

News headlines 01-02-2026| ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯ- ಸಿಎಂ; IT ದಾಳಿ ವಿರುದ್ಧ ಸಿಡಿದೆದ್ದ ಉದ್ಯಮಿ ಪೈ; ಪ್ರಧಾನಿ, ವಿತ್ತ ಸಚಿವೆಗೆ ಪತ್ರ; ದ್ವೇಷ ಭಾಷಣ ತಡೆ ಮಸೂದೆ ಅಂಕಿತಕ್ಕೆ ರಾಜ್ಯಪಾಲ ನಕಾರ

SCROLL FOR NEXT