ರಚಿತಾ ರಾಮ್, ಧ್ರುವ ಸರ್ಜಾ ಮತ್ತು ಐಶ್ವರ್ಯಾ ರಾಜೇಶ್ 
ಸಿನಿಮಾ ಸುದ್ದಿ

'ಕ್ರಿಮಿನಲ್' ಚಿತ್ರದಲ್ಲಿ ಧ್ರುವ ಸರ್ಜಾ- ರಚಿತಾ ರಾಮ್ ಜೊತೆಯಾದ ಬಹುಭಾಷಾ ನಟಿ ಐಶ್ವರ್ಯಾ ರಾಜೇಶ್!

ಕನ್ನಡದ ಜೊತೆಗೆ, 'ಕ್ರಿಮಿನಲ್' ಚಿತ್ರವು ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿಯೂ ಬಿಡುಗಡೆಯಾಗಲಿದೆ.

ಎಂಟು ವರ್ಷಗಳ ನಂತರ ರಚಿತಾ ರಾಮ್, ರಾಜ್‌ಗುರು ನಿರ್ದೇಶನದ ಚಿತ್ರಕ್ಕಾಗಿ ಧ್ರುವ ಸರ್ಜಾ ಜೊತೆ ಮತ್ತೆ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ. ಕಳೆದ ತಿಂಗಳು ನಡೆದ ಮುಹೂರ್ತದ ಸಮಯದಲ್ಲಿ ರಚಿತಾ ಸ್ವತಃ ಹಾಜರಿದ್ದರು. ಕ್ರಿಮಿನಲ್ ಎಂದು ಹೆಸರಿಸಲಾದ ಈ ಚಿತ್ರವನ್ನು ಗೋಲ್ಡ್‌ಮೈನ್ಸ್ ಟೆಲಿಫಿಲ್ಮ್ಸ್‌ನ ಮನೀಶ್ ಶಾ ನಿರ್ಮಿಸಿದ್ದಾರೆ. ಈ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭಿಸಲು ಚಿತ್ರತಂಡ ತಯಾರಿ ನಡೆಸುತ್ತಿದ್ದರೆ, ಇದೀಗ ದಕ್ಷಿಣ ಭಾರತದ ಖ್ಯಾತ ನಟಿ ಐಶ್ವರ್ಯಾ ರಾಜೇಶ್ ಚಿತ್ರದ ತಾರಾಗಣಕ್ಕೆ ಸೇರಿದ್ದಾರೆ.

ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರಗಳಲ್ಲಿ ನಟಿಸಿ ಹೆಸರುವಾಸಿಯಾಗಿರುವ ಐಶ್ವರ್ಯಾ, ಆರಂಭದಲ್ಲಿ ಧನಂಜಯ್ ಮತ್ತು ಶಿವರಾಜ್‌ಕುಮಾರ್ ನಟನೆಯ ರೋಹಿತ್ ಪದಕಿ ನಿರ್ದೇಶನದ ಉತ್ತರಾಖಂಡ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಾರೆಂದು ನಿರೀಕ್ಷಿಸಲಾಗಿತ್ತು. ಆದಾಗ್ಯೂ, ಆ ಯೋಜನೆ ಈಗ ವಿಳಂಬವಾಗಿದೆ. ಇದೀಗ ಕ್ರಿಮಿನಲ್ ಚಿತ್ರವೇ ಅವರ ಚೊಚ್ಚಲ ಕನ್ನಡ ಚಿತ್ರವಾಗಲಿದೆ ಎನ್ನಲಾಗಿದೆ.

ಗ್ರಾಮೀಣ ಹಿನ್ನೆಲೆಯಲ್ಲಿ ಹೆಣೆಯಲಾದ ಕ್ರಿಮಿನಲ್ ಚಿತ್ರವು ಡ್ರಾಮಾ ಮತ್ತು ಹೈ-ಆಕ್ಟೇನ್ ಆ್ಯಕ್ಷನ್ ಅನ್ನು ಸಂಯೋಜಿಸುತ್ತದೆ. ನೈಜ ಘಟನೆಗಳಿಂದ ಪ್ರೇರಿತವಾಗಿದೆ. ಇತ್ತೀಚೆಗಷ್ಟೇ ಶೀರ್ಷಿಕೆ ಟೀಸರ್ ಬಿಡುಗಡೆಯಾಗಿದೆ. ಕೆರೆಬೇಟೆ ಮೂಲಕ ನಿರ್ದೇಶನಕ್ಕೆ ಪದಾರ್ಪಣೆ ಮಾಡಿದ ರಾಜಗುರು, ತಮ್ಮ ಎರಡನೇ ಚಿತ್ರ ನಿರ್ದೇಶನಕ್ಕೆ ಮರಳಿದ್ದಾರೆ.

ಕನ್ನಡದ ಜೊತೆಗೆ, 'ಕ್ರಿಮಿನಲ್' ಚಿತ್ರವು ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿಯೂ ಬಿಡುಗಡೆಯಾಗಲಿದೆ. ಈ ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ, ರವಿವರ್ಮ ಛಾಯಾಗ್ರಹಣ ಮತ್ತು ವಿಕ್ರಮ್ ಮೋರ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಚಿತ್ರತಂಡ ಉಳಿದ ಪಾತ್ರವರ್ಗವನ್ನು ಕ್ರಮೇಣ ಬಹಿರಂಗಪಡಿಸುತ್ತಿದ್ದರೂ, ಐಶ್ವರ್ಯಾ ರಾಜೇಶ್ ಸೇರ್ಪಡೆಯ ಬಗ್ಗೆ ಅಧಿಕೃತ ಘೋಷಣೆ ಶೀಘ್ರದಲ್ಲೇ ಹೊರಬೀಳುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲಿಯಂ ಉತ್ಪನ್ನಗಳ ಮಿತಬಳಕೆ "ಈಗಿನ ಅಗತ್ಯ"-ಪ್ರಧಾನಿ ಮೋದಿ: ಮುಂದೆ ಕಾದಿದೆಯಾ ಸಂಕಷ್ಟದ ದಿನಗಳು?

IPL 2026: ಕೊನೆಯ ಎಸೆತದಲ್ಲಿ RCBಗೆ ರೋಚಕ ಜಯ; MI ವಿರುದ್ಧದ ಪಂದ್ಯ ಗೆಲ್ಲಿಸಿದ ಕೃನಾಲ್, ಭುವಿ; ಅಗ್ರಸ್ಥಾನಕ್ಕೇರಿದ ಆರ್‌ಸಿಬಿ!

1 ಮತದಿಂದ DMK ಅಭ್ಯರ್ಥಿ ಪೆರಿಯಕರುಪ್ಪನ್ ಸೋಲು; ಅಂಚೆ ಮತ ಗೊಂದಲದ ಬಗ್ಗೆ ECI ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿ!

S Keerthana: ವಿಜಯ್ ಕ್ಯಾಬಿನೆಟ್ ನಲ್ಲಿ ಪಂಚಭಾಷಾ ಪಾರಂಗತೆ; ಅತಿ ಕಿರಿಯ ಶಾಸಕಿ!

Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!

SCROLL FOR NEXT