ಶ್ರೀನಿವಾಸನ್  
ಸಿನಿಮಾ ಸುದ್ದಿ

ಕೇರಳ: ಹಿರಿಯ ಹಾಸ್ಯನಟ, ಮಲಯಾಳಂ ಚಿತ್ರ ನಿರ್ಮಾಪಕ ಶ್ರೀನಿವಾಸನ್ ನಿಧನ

1977ರಲ್ಲಿ ಪಿ.ಎ. ಬ್ಯಾಕರ್ ನಿರ್ದೇಶನದ ಮಣಿಮುಳಕ್ಕಂ ಚಿತ್ರದ ಮೂಲಕ ಶ್ರೀನಿವಾಸನ್ ಮಳಯಾಳ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಈ ಸಿನಿಮಾ ಶ್ರೀನಿವಾಸನ್‌ಗೆ ಹೆಚ್ಚು ಖ್ಯಾತಿ ತಂದುಕೊಟ್ಟಿತ್ತು.

ತಿರುವನಂತಪುರ: ಮಲಯಾಳ ಚಿತ್ರರಂಗದ ಹಿರಿಯ ನಟ, ಬರಹಗಾರ, ನಿರ್ಮಾಪಕ ಶ್ರೀನಿವಾಸನ್ (69) ಅವರು ಶನಿವಾರ ನಿಧನರಾಗಿದ್ದಾರೆ.

ಶ್ರೀನಿವಾಸನ್ ಅವರು ಎರ್ನಾಕುಲಂ ತಾಲೂಕು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರನ್ನು ಡಯಾಲಿಸಿಸ್‌ಗಾಗಿ ಅಮೃತ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಅವರ ಪರಿಸ್ಥಿತಿ ತೀರಾ ಹದಗೆಟ್ಟಿತು. ಅವರನ್ನು ತ್ರಿಪುನಿತುರ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಕೊನೆಯುಸಿರೆಳೆದರು.

1977ರಲ್ಲಿ ಪಿ.ಎ. ಬ್ಯಾಕರ್ ನಿರ್ದೇಶನದ ಮಣಿಮುಳಕ್ಕಂ ಚಿತ್ರದ ಮೂಲಕ ಶ್ರೀನಿವಾಸನ್ ಮಳಯಾಳ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಈ ಸಿನಿಮಾ ಶ್ರೀನಿವಾಸನ್‌ಗೆ ಹೆಚ್ಚು ಖ್ಯಾತಿ ತಂದುಕೊಟ್ಟಿತ್ತು.

1984ರಲ್ಲಿ ‘ಒಡರುತ್ತು ಅಮ್ಮಾವ ಆಲಾರಿಯಂ’ ಚಿತ್ರದ ಮೂಲಕ ಉತ್ತಮ ಬರಹಗಾರರಾಗಿ ಶ್ರೀನಿವಾಸನ್‌ ಗುರುತಿಸಿಕೊಂಡಿದ್ದರು. ಶ್ರೀನಿವಾಸನ್ ಅವರು ತೀಕ್ಷ್ಣವಾದ ಸಾಮಾಜಿಕ ವ್ಯಾಖ್ಯಾನವನ್ನು ಸುಲಭವಾಗಿ ಅರ್ಥೈಸಬಹುದಾದ ನಿಟ್ಟಿನಲ್ಲಿ ಹಾಸ್ಯಮಯವಾಗಿ ಕಥೆಗಳನ್ನು ಹೆಣೆಯುವ ಮೂಲಕ ಮಲಯಾಳ ಚಿತ್ರರಂಗದಲ್ಲಿ ಗಮನ ಸೆಳೆದಿದ್ದರು.

ಹಾಸ್ಯ, ವಿಡಂಬನೆ ಮತ್ತು ದೈನಂದಿನ ವಾಸ್ತವಗಳ ತೀವ್ರ ಅರಿವಿನಿಂದ ಗುರುತಿಸಲ್ಪಟ್ಟ ಅವರ ಚಿತ್ರಕಥೆಗಳು ಪ್ರೇಕ್ಷಕರಿಗೆ ಹಾಸ್ಯದ ಹೊಸ ಭಾಷೆಯನ್ನು ನೀಡಿದ್ದವು. ಹಾಸ್ಯ ಮತ್ತು ವಿಮರ್ಶೆಯ ಮಿಶ್ರಣದ ಮೂಲಕ ಶ್ರೀನಿವಾಸನ್ ಅವರು ಅಳಿಸಲಾಗದ ಛಾಪು ಮೂಡಿಸಿದ್ದಾರೆ.

ಸುಮಾರು 48 ವರ್ಷಗಳ ವೃತ್ತಿಜೀವನದಲ್ಲಿ, ಅವರು ಉದ್ಯಮದಲ್ಲಿ ಅತ್ಯಂತ ಪ್ರಭಾವಶಾಲಿ ಸೃಜನಶೀಲ ನಟರಾಗಿ ಹೊರಹೊಮ್ಮಿದರು, ತೀಕ್ಷ್ಣವಾದ ವಿಡಂಬನೆ, ಮಾನವೀಯ ಕಥೆ ಹೇಳುವಿಕೆ ಮತ್ತು ಸಾಮಾಜಿಕವಾಗಿ ಬೇರೂರಿರುವ ಹಾಸ್ಯದ ಮೂಲಕ ಜನಪ್ರಿಯ ಸಿನಿಮಾವನ್ನು ರೂಪಿಸಿದರು.

ಏಪ್ರಿಲ್ 6, 1956 ರಂದು ಕಣ್ಣೂರು ಜಿಲ್ಲೆಯ ತಲಶ್ಶೇರಿ ಬಳಿಯ ಪಟ್ಯಂನಲ್ಲಿ ಜನಿಸಿದ ಶ್ರೀನಿವಾಸನ್ ಸಾಧಾರಣ ಕುಟುಂಬದಲ್ಲಿ ಬೆಳೆದರು. ಅವರ ತಂದೆ ಶಾಲಾ ಶಿಕ್ಷಕರಾಗಿದ್ದರು. ಅವರ ತಾಯಿ ಗೃಹಿಣಿಯಾಗಿದ್ದರು. ಕುತ್ತುಪರಂಬ ಮತ್ತು ಕದಿರೂರಿನಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ, ಅವರು ಮಟ್ಟನೂರಿನ ಪಿಆರ್‌ಎನ್‌ಎಸ್‌ಎಸ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಪದವಿ ಪಡೆದರು, ನಂತರ ಚೆನ್ನೈನ ತಮಿಳುನಾಡಿನ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಔಪಚಾರಿಕ ಚಲನಚಿತ್ರ ಶಿಕ್ಷಣವನ್ನು ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ