ದರ್ಶನ್-ರಾಜುಗೌಡ-ಸುದೀಪ್ 
ಸಿನಿಮಾ ಸುದ್ದಿ

ಸುದೀಪ್ ಮುಂದೆ ಮಾಜಿ ಶಾಸಕ ರಾಜುಗೌಡ ನೀಡಿದ್ದ 'ಕಾಂಜಿ, ಪೀಂಜಿ' ಹೇಳಿಕೆಗೆ ದರ್ಶನ್ ಅಭಿಮಾನಿಗಳ ತಿರುಗೇಟು!

ಹುಬ್ಬಳ್ಳಿಯಲ್ಲಿ ನಡೆದ ಮಾರ್ಕ್‌ ಚಿತ್ರದ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ನೀಡಿದ್ದ 'ಯುದ್ಧಕ್ಕೆ ಒಂದು ಪಡೆ ಸಿದ್ಧವಾಗಿದೆ' ಎಂಬ ಹೇಳಿಕೆ ಈಗ ಕನ್ನಡ ಚಿತ್ರರಂಗದಲ್ಲಿ ವಿವಾದ ಭುಗಿಲೇಳಲು ಕಾರಣವಾಗಿದೆ. ಈ ಹೇಳಿಕೆಗೆ ಒಬ್ಬೊಬ್ಬರು ಒಂದೊಂದು ರೀತಿ ಅರ್ಥ ಕೊಡುತ್ತಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಮಾರ್ಕ್‌ ಚಿತ್ರದ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ನೀಡಿದ್ದ 'ಯುದ್ಧಕ್ಕೆ ಒಂದು ಪಡೆ ಸಿದ್ಧವಾಗಿದೆ' ಎಂಬ ಹೇಳಿಕೆ ಈಗ ಕನ್ನಡ ಚಿತ್ರರಂಗದಲ್ಲಿ ವಿವಾದ ಭುಗಿಲೇಳಲು ಕಾರಣವಾಗಿದೆ. ಈ ಹೇಳಿಕೆಗೆ ಒಬ್ಬೊಬ್ಬರು ಒಂದೊಂದು ರೀತಿ ಅರ್ಥ ಕೊಡುತ್ತಿದ್ದು ತಮ್ಮ ನಾಯಕನನ್ನು ದರ್ಶನ್ ಅಭಿಮಾನಿಗಳು ಸಮರ್ಥಿಸಿಕೊಂಡಿದ್ದಾರೆ.

'ಯುದ್ಧ ಹೇಳಿಕೆ'ಗೆ ನಟ ಕಿಚ್ಚ ಸುದೀಪ್ ಸ್ಪಷ್ಟನೆ ಕೊಟ್ಟಿದ್ದು ಯಾರಿಗಾದರೂ ವಾರ್ನಿಂಗ್ ಕೊಡಬೇಕಿದ್ದರೆ ವೇದಿಕೆ ಬೇಕಿಲ್ಲ. ಭಾಷಣದಲ್ಲಿ ಪೈರಸಿ ಎಂದು ಹೇಳುವ ಅವಶ್ಯಕತೆ ಇರಲಿಲ್ಲ. ಹೀಗಾಗಿ ಪೈರಸಿ ಬಗ್ಗೆ ವಾರ್ನ್​ ಮಾಡಿದ್ದು ತಪ್ಪಾ ಎಂದು ಪ್ರಶ್ನಿಸಿದರು. ಈ ಮಧ್ಯೆ ದರ್ಶನ್ ಅಭಿಮಾನಿಗಳು ಮಾಜಿ ಬಿಜೆಪಿ ಶಾಸಕ ರಾಜುಗೌಡ ವಿರುದ್ಧ ಕಿಡಿಕಾರಿದ್ದಾರೆ.

ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ರಾಜುಗೌಡ ಮಾತನಾಡಿ, ಸುದೀಪ್ ಸರ್ ಗೆ ಕಾಂಜಿ, ಪೀಂಜಿ ಅಭಿಮಾನಿಗಳಿಲ್ಲ ಎಂದು ಹೇಳಿದ್ದು ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ರಾಬರ್ಟ್ ಚಿತ್ರ ಬಿಡುಗಡೆ ವೇಳೆ ರಾಜುಗೌಡ ದರ್ಶನ್ ಜೊತೆಗಿದ್ದ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ತಿರುಗೇಟು ನೀಡಿದ್ದಾರೆ. ಅಂದು ದರ್ಶನ್ ಜೊತೆಗಿದ್ದ ರಾಜುಗೌಡ ಇದೀಗ ಸುದೀಪ್ ಜೊತೆ ಸೇರಿಕೊಂಡಿದ್ದಾರೆ ಎಂದು ಲೇವಡಿ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಸಂಸದ ನೋಟಿಸ್; ಕಾರಣ ಏನು ಗೊತ್ತಾ?

ಕೂಡಲೇ ಭಾರತಕ್ಕೆ ವಾಪಸ್ಸಾಗಿ: ಇಲ್ಲವಾದ್ರೆ! ವಿಜಯ್ ಮಲ್ಯಗೆ ಕೊನೆಯ ಅವಕಾಶ ನೀಡಿದ ನ್ಯಾಯಾಲಯ

ಹೆಬ್ಬಾಳ–ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರದ ಬ್ರೇಕ್!

ದೂರದರ್ಶನದ ಖ್ಯಾತ 'ನ್ಯೂಸ್ ಆಂಕರ್' ಸರಳ ಮಹೇಶ್ವರಿ ನಿಧನ!

ರಾಹುಲ್ ವಿರುದ್ಧ ಸರ್ಕಾರ ಹಕ್ಕುಚ್ಯುತಿ ಮಂಡಿಸುವ ಸಾಧ್ಯತೆ ಇಲ್ಲ, ಆದರೆ...

SCROLL FOR NEXT