ಅಕ್ಷಯ್ ಖನ್ನಾ 
ಸಿನಿಮಾ ಸುದ್ದಿ

ಧುರಂಧರ್ ಸಕ್ಸಸ್: ದೃಶ್ಯ- 3 ಸಿನಿಮಾದಿಂದ ಹೊರ ನಡೆದ ನಟ ಅಕ್ಷಯ್ ಖನ್ನಾ?

‘ದೃಶ್ಯಂ 3’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರು ಒಂದು ಪಾತ್ರ ಮಾಡಬೇಕಿತ್ತು. ಆದರೆ ಈಗ ಅವರು ದೊಡ್ಡ ಮೊತ್ತದ ಸಂಭಾವನೆ ಕೇಳುತ್ತಿರುವುದರಿಂದ ನಿರ್ಮಾಪಕರಿಗೆ ಚಿಂತೆ ಶುರುವಾಗಿದೆ.

ಧುರಂಧರ್ ಚಿತ್ರದ ಭಾರಿ ಯಶಸ್ಸಿನಿಂದಾಗಿ ಅಕ್ಷಯ್ ಖನ್ನಾ ಇನ್ನು ಮುಂದೆ ದೃಶ್ಯಂ 3 ನಲ್ಲಿ ಕೆಲಸ ಮಾಡಲ್ಲ ಎಂದು ವರದಿಯಾಗಿದೆ.

ಧುರಂಧರ್’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ರೆಹಮಾನ್ ಡಕಾಯಿತ್ ಎಂಬ ಪಾತ್ರ ಮಾಡಿದ್ದಾರೆ. ಇದು ವಿಲನ್ ಪಾತ್ರ. ಈ ಪಾತ್ರಕ್ಕಾಗಿ ಅವರು 2.5 ಕೋಟಿಯಿಂದ 3 ಕೋಟಿ ರೂಪಾಯಿ ತನಕ ಸಂಭಾವನೆ ಪಡೆದಿದ್ದರು ಎಂಬ ಮಾಹಿತಿ ಹರಿದಾಡುತ್ತಿದೆ. ‘ಧುರಂಧರ್’ ಸೂಪರ್ ಹಿಟ್ ಆಗಿದ್ದೇ ತಡ, ಅಕ್ಷಯ್ ಖನ್ನಾ ಅವರು ಏಕಾಏಕಿ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗಿದೆ.

‘ದೃಶ್ಯಂ 3’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರು ಒಂದು ಪಾತ್ರ ಮಾಡಬೇಕಿತ್ತು. ಆದರೆ ಈಗ ಅವರು ದೊಡ್ಡ ಮೊತ್ತದ ಸಂಭಾವನೆ ಕೇಳುತ್ತಿರುವುದರಿಂದ ನಿರ್ಮಾಪಕರಿಗೆ ಚಿಂತೆ ಶುರುವಾಗಿದೆ. ಅಲ್ಲದೇ, ಅಕ್ಷಯ್ ಖನ್ನಾ ಅವರು ತಮ್ಮ ಪಾತ್ರದ ಲುಕ್ ಕೂಡ ಬದಲಾಗಬೇಕು ಎಂದು ಹಠ ಹಿಡಿದಿದ್ದಾರಂತೆ. ಈ ವಿಚಾರದಲ್ಲಿ ಚಿತ್ರತಂಡದ ಜೊತೆ ಮಾತುಕಥೆ ನಡೆದು, ಸಫಲವಾಗದ ಪರಿಣಾಮ ಅವರು ಚಿತ್ರತಂಡದಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಈ ಸಂಬಂಧ ಚಿತ್ರತಂಡ ಇದುವರೆಗೂ ಯಾವುದೇ ಮಾಹಿತಿ ನೀಡಿಲ್ಲ. ಅಕ್ಷಯ್ ಖನ್ನಾ ಮತ್ತು ನಿರ್ಮಾಪಕರ ನಡುವಿನ ಮಾತುಕತೆಗಳು ಇನ್ನೂ ನಡೆಯುತ್ತಿವೆ ಮತ್ತು ಅವರ ನಿರ್ಗಮನದ ಬಗ್ಗೆ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Unnao rape case: ಆರೋಪಿ ಶಿಕ್ಷೆ ಅಮಾನತು ವಿರೋಧಿಸಿ ಪ್ರತಿಭಟನೆ; ಸಂತ್ರಸ್ತೆ ತಾಯಿ ಮೇಲೆ ಪೊಲೀಸರ ಬಲಪ್ರಯೋಗ, ಸುದ್ದಿಗೋಷ್ಠಿಗೂ ತಡೆ! Video

ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಮುಖಭಂಗ, ಬಿಜೆಪಿಗೆ ಬಹುಮತ!

'ಕಿಚ್ಚನ ಕದನ ವಿರಾಮ?': ಕೊನೆಗೂ ನಟ ದರ್ಶನ್ ಕುರಿತು ಸುದೀಪ್ ಮಾತು! ಹೇಳಿದ್ದೇನು?

ಮಾರ್ಚ್ 2026 ರಲ್ಲಿ 'ಧುರಂಧರ್ 2' ಐದು ಭಾಷೆಗಳಲ್ಲಿ ಬಿಡುಗಡೆ

ಉದಯಪುರ: ಚಲಿಸುವ ಕಾರಿನಲ್ಲಿ ಐಟಿ ಕಂಪನಿ ಮ್ಯಾನೇಜರ್ ಮೇಲೆ ಸಾಮೂಹಿಕ ಅತ್ಯಾಚಾರ!

SCROLL FOR NEXT