ನಯನಾ ನಾಗರಾಜ್ 
ಸಿನಿಮಾ ಸುದ್ದಿ

'ಗಿಣಿರಾಮ', 'ಪಾಪ ಪಾಂಡು' ನಟಿ ನಯನಾ ನಾಗರಾಜ್ ಕನ್ನಡ ಕಿರುತೆರೆಯಿಂದ ಬ್ಯಾನ್‌!

ಗಿಣಿರಾಮ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಯನಾ ನಾಗರಾಜ್ ಅವರನ್ನು ಕಳೆದ ವರ್ಷ ಧಾರಾವಾಹಿಗಳಿಂದ ಬ್ಯಾನ್ ಮಾಡಲಾಗಿದೆಯಂತೆ. ಈ ವಿಚಾರವನ್ನು ಸ್ವತಃ ನಯನಾ ನಾಗರಾಜ್ ತಿಳಿಸಿದ್ದಾರೆ.

ಬೆಂಗಳೂರು: ಪಾಪ ಪಾಂಡು ಹಾಗೂ ಗಿಣಿರಾಮದಂತಹ ಸೂಪರ್‌ ಹಿಟ್‌ ಧಾರಾವಾಹಿಗಳಲ್ಲಿ ನಟಿಸಿದ್ದ ನಯನಾ ನಾಗರಾಜ್ ಅವರನ್ನು ಕಿರುತೆರೆಯ ಎಲ್ಲಾ ಕಾರ್ಯಕ್ರಮಗಳಿಂದ ಬ್ಯಾನ್ ಮಾಡಲಾಗಿದೆ.

ಗಿಣಿರಾಮ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಯನಾ ನಾಗರಾಜ್ ಅವರನ್ನು ಕಳೆದ ವರ್ಷ ಧಾರಾವಾಹಿಗಳಿಂದ ಬ್ಯಾನ್ ಮಾಡಲಾಗಿದೆಯಂತೆ. ಈ ವಿಚಾರವನ್ನು ಸ್ವತಃ ನಯನಾ ನಾಗರಾಜ್ ಇತ್ತೀಚಿಗೆ ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ತಾವು ನಟಿಸುತ್ತಿದ್ದ ಧಾರಾವಾಹಿ ತಂಡದಲ್ಲಿ ವ್ಯಕ್ತಿಯೊಬ್ಬನಿ೦ದ ಮಾನಸಿಕ ಹಿಂಸೆಯಾಗುತ್ತಿತ್ತು. ಆತನ ಕಮೆಂಟ್‌ಗೆ ಎದುರೇಟು ಕೊಟ್ಟಿದ್ದಕ್ಕೆ ಆತ ಒಂದು ವರ್ಷ ನನ್ನ ಬದುಕನ್ನು ನರಕ ಮಾಡಿದ. ಹೀಗಾಗಿ ಆತನ ಮೇಲೆ ವಾಹಿನಿಗೆ ದೂರು ನೀಡಿದೆ. ಇದರಿಂದ ಹಿಂಸೆ ಇನ್ನಷ್ಟು ಜಾಸ್ತಿ ಆಯ್ತು. ಬಳಿಕ ಧಾರಾವಾಹಿ ಬಿಡುವ ನಿರ್ಧಾರ ಮಾಡಿದೆ. ಕೊನೆಗೆ ಧಾರಾವಾಹಿ ಕಥೆ ಅಂತ್ಯಗೊಳಿಸಲಾಯಿತು.

ಇದರಿಂದ ತಮ್ಮ ಧಾರಾವಾಹಿಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತು ಎಂದು ಆರೋಪಿಸಿ ನನ್ನ ವಿರುದ್ಧ ದೂರು ನೀಡಿದರು. ಇದೇ ಕಾರಣದಿಂದ ನಾನು ಧಾರಾವಾಹಿ ಮಾಡದಂತೆ ನಿಷೇಧ ವಿಧಿಸಲಾಯಿತು ಎಂದು ನಟಿ ನಯನಾ ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಧಿಕಾರ ಹಂಚಿಕೆ ಬಗ್ಗೆ ಯಾರೂ ಮಾತನಾಡಬೇಡಿ, ಸಾರ್ವಜನಿಕ ಹೇಳಿಕೆ ಕೊಡಬೇಡಿ': ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬುದ್ದಿಮಾತು

'ನೀವು ಶಾಶ್ವತ ವಿಪತ್ತು ನಿಧಿ ಏಕೆ ರಚಿಸಿಲ್ಲ': ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ

ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ: ಡಿ ಕೆ ಶಿವಕುಮಾರ್

ಟೈಗರ್‌ ಜಿಂದಾ ಹೈ, ಕಿಂಗ್‌ ಈಸ್ ಅಲೈವ್‌: CM ಬಗ್ಗೆ ಬೈರತಿ ಗುಣಗಾನ; ಯತೀಂದ್ರ ಹೇಳಿಕೆಗೆ ಕೆರಳಿ ಕೆಂಡವಾದ ಡಿಕೆಶಿ ಬಣ!

ದೇವನಹಳ್ಳಿಯ 1,777 ಎಕರೆ ಜಮೀನು 'ಶಾಶ್ವತ ವಿಶೇಷ ಕೃಷಿ ವಲಯ'; ಭೂಮಿ ಮಾರಾಟಕ್ಕೆ ಕಡಿವಾಣ ಇಲ್ಲ: ಸರ್ಕಾರ

SCROLL FOR NEXT