ರೂಪೇಶ್ ಶೆಟ್ಟಿ - ಸುನೀಲ್ ಶೆಟ್ಟಿ 
ಸಿನಿಮಾ ಸುದ್ದಿ

'ಜೈ' ತುಳು ಚಿತ್ರದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ; ಚೊಚ್ಚಲ ನಿರ್ದೇಶನದ ಅನುಭವ ಹಂಚಿಕೊಂಡ ರೂಪೇಶ್ ಶೆಟ್ಟಿ

'ಅವರು ಮುಂದೊಂದು ದಿನ ತುಳು ಸಿನಿಮಾ ಮಾಡ್ತಾರೆ ಅಂತ ಗೊತ್ತಿತ್ತು. ಆದರೆ, ನಾನು ಆ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತೇನೆ ಅಂತ ಅಂದುಕೊಂಡಿರಲಿಲ್ಲ'

ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ಇತ್ತೀಚೆಗಷ್ಟೇ ತಮ್ಮ ಚೊಚ್ಚಲ ನಿರ್ದೇಶನದ 'ಜೈ' ಸಿನಿಮಾದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಚಿತ್ರದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ತುಳು ಮೂಲದವರೇ ಆಗಿರುವ ಸುನೀಲ್ ಶೆಟ್ಟಿ, ತುಳು ಚಿತ್ರದಲ್ಲಿ ಇದೇ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ.

'ಸುನೀಲ್ ಶೆಟ್ಟಿ ಅವರು ಮುಂದೊಂದು ದಿನ ತುಳು ಸಿನಿಮಾ ಮಾಡ್ತಾರೆ ಅಂತ ಗೊತ್ತಿತ್ತು. ಆದರೆ, ನಾನು ಆ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತೇನೆ ಅಂತ ಅಂದುಕೊಂಡಿರಲಿಲ್ಲ. ನನಗೆ ಅವರು ನನಗೆ ವೈಯುಕ್ತಿಕವಾಗಿಯೂ ಸಂಪರ್ಕದಲ್ಲಿರಲಿಲ್ಲ ಅಥವಾ ಬೇರೆ ಯಾವುದೇ ಕಡೆಯಿಂದಲೂ ಪರಿಚಯವಿರಲಿಲ್ಲ. ಕೊನೆಗೆ ನಿರ್ಮಾಪಕರೊಬ್ಬರ ಮೂಲಕ ಅವರನ್ನು ಭೇಟಿಯಾಗುವ ಅವಕಾಶ ನನಗೆ ಸಿಕ್ಕಿತು. ಸಿಕ್ಕಾಗ ಸಿನಿಮಾದ ಬಗ್ಗೆ ನಾನು ಮಾತನಾಡುತ್ತೇನೆಂಬ ಯೋಚನೆ ಅವರಿಗಿರಲಿಲ್ಲ. ನಾನು ಯಾವುದೇ ನಿರೀಕ್ಷೆ ಇಟ್ಟುಕೊಳ್ಳದೆಯೇ ಹೋದೆ. ನಾನು ಅವರನ್ನು ಭೇಟಿಯಾಗುತ್ತೇನೆ ಮತ್ತು ಫೋಟೊ ತೆಗೆದುಕೊಂಡು ಬರುತ್ತೇನೆ ಎಂದು ಭಾವಿಸಿದ್ದೆ. ಅಚ್ಚರಿ ಎಂದರೆ ಮಂಗಳೂರಿನಲ್ಲಿ ನಡೆಯುವ 'ಜೈ' ಕಥೆಯನ್ನು ಹೇಳಲು ನನಗೆ ಐದು ನಿಮಿಷ ಸಮಯ ಸಿಕ್ಕಿತು. ಅದು ಅವರ ಆಸಕ್ತಿಯನ್ನು ಕೆರಳಿಸಿತು' ಎನ್ನುತ್ತಾರೆ ರೂಪೇಶ್ ಶೆಟ್ಟಿ.

'ಕಥೆ ಕೇಳಿದ ಬಳಿಕ ಅವರ ಉತ್ಸಾಹವನ್ನು ಕಂಡ ನಾನು, ಆ ಪಾತ್ರದಲ್ಲಿ ನಟಿಸುವಂತೆ ಕೇಳಿದೆ ಮತ್ತು ಅವರು ಅದಕ್ಕೆ ಒಪ್ಪಿಗೆ ನೀಡಿದರು. ಅವರೊಂದಿಗೆ ಚಿತ್ರೀಕರಣ ಮಾಡುವುದು ನನ್ನ ಜೀವನದ ದೊಡ್ಡ ಅನುಭವವಾಗಿದೆ. ನಾವು ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದೇವೆ. ಕೇವಲ ಒಂದು ಹಾಡಿನ ಚಿತ್ರೀಕರಣ ಬಾಕಿ ಉಳಿದಿದೆ. ನಾವು 2025ರ ದ್ವಿತೀಯಾರ್ಧದಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಗುರಿಯನ್ನು ಹೊಂದಿದ್ದೇವೆ' ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT