ತಾರಾ ಅನುರಾಧ 
ಸಿನಿಮಾ ಸುದ್ದಿ

ಯಾವುದೇ ಪ್ರಶಸ್ತಿ ನಿರಾಕರಿಸುವಷ್ಟು ದೊಡ್ಡದಾಗಿ ನಾನು ಬೆಳದಿಲ್ಲ: ಸುದೀಪ್ ಗೆ ಟಾಂಟ್ ಕೊಟ್ರಾ ನಟಿ ತಾರಾ?

ಯಾವುದೇ ಪ್ರಶಸ್ತಿಯನ್ನು ನಿರಾಕರಿಸುವಷ್ಟು ದೊಡ್ಡದಾಗಿ ನಾನು ಬೆಳದಿಲ್ಲ. ಪ್ರಶಸ್ತಿ ನಮಗೆ ಸಂದ ಗೌರವ, ನಮಗೆ ತೋರಿಸುವ ಗೌರವ. ಆ ಪ್ರಶಸ್ತಿ ನನ್ನ ವೈಯಕ್ತಿವಾಗಿ ಸಂದ ಪ್ರಶಸ್ತಿ ಅಲ್ಲ. ಅದು ಒಬ್ಬ ಕಲಾವಿದನಿಗೆ ಬಂದ ಗೌರವ.

ಬೆಂಗಳೂರು: ಸ್ಯಾಂಡಲ್‌ವುಡ್ ಪ್ರೇಕ್ಷಕರಿಗಂತೂ ನಟಿ ತಾರಾ ಅನುರಾಧ ಚಿರಪರಿಚಿತ. ಇತ್ತೀಚೆಗೆ ಕಿರುತೆರೆ ಪ್ರೇಕ್ಷಕರಿಗೂ ಬಹಳ ಹತ್ತಿರವಾಗಿರುವ ಈ ನಟಿಗೆ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಿದೆ.

ಕಳೆದ ನಾಲ್ಕು ದಶಕಗಳಿಂದಲೂ ಕಲಾ ಕ್ಷೇತ್ರದಲ್ಲಿ ಸೇವೆ ಹಾಗೂ ಸಾಧನೆಗಳನ್ನು ಮಾಡುತ್ತಿರುವ ನಟಿ ತಾರಾ ಅನುರಾಧ ನಟನೆ ಅಷ್ಟೇ ಅಲ್ಲದೆ ರಾಜಕೀಯ ಹಾಗೂ ಮಹಿಳಾ ಸಬಲೀಕರಣದ ವಿಚಾರವಾಗಿಯೂ ಸದಾ ಆಸಕ್ತಿಯನ್ನು ತೋರಿದ್ದಾರೆ. ಇವರ ಕಲಾ ಸಾಧನೆಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಸಂದಿದ್ದಲ್ಲದೆ ಇದೀಗ ಗೌರವ ಡಾಕ್ಟರೇಟ್ ಕೂಡ ಸಿಕ್ಕಿದೆ.

ಸಂದರ್ಶನವೊಂದರಲ್ಲಿ ಮಾತನಾಡಿದ ತಾರಾ ಅವರು, ತಮಗೆ ಡಾಕ್ಟರೇಟ್ ಪದವಿ ಸಿಕ್ಕಿದ್ದರ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು. 'ನಮಗೆ ಈ ರೀತಿ ಪ್ರಶಸ್ತಿಗಳು ಬಂದಾಗ ಹೌದಾ..? ನಾನು ಈ ಪ್ರಶಸ್ತಿಗೆ ಭಾಜನಾಗಿದ್ನಾ ಅನ್ನೋ ಪ್ರಶ್ನೆ ಬರುತ್ತದೆ. ನನಗೆ ಪ್ರಶಸ್ತಿ ಬಂದಿರುವುದು ತುಂಬಾ ದೊಡ್ಡ ಗೌರವ.

ಡಾಕ್ಟರೇಟ್ ಅನ್ನು ತುಂಬಾ ಹಿರಿಯರಿಗೆ ಕೊಡುತ್ತಾರೆ ಅನ್ನೋ ಭ್ರಮೆ ಇತ್ತು ನನಗೆ. ಆದರೆ ಅದಕ್ಕೆ ತಕ್ಕ ವ್ಯಕ್ತಿ ಯಾರೇ ಆಗಲಿ ಅವರನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ತುಂಬಾ ಜನ ಹಿರಿಯರಿಗೆ ಈ ಪ್ರಶಸ್ತಿ ಸಿಕ್ಕಿದೆ. ತುಂಬಾ ಜನರಿಗೆ ಪ್ರಶಸ್ತಿ ಸಿಗಬೇಕಿದೆ. ಆ ಹಿರಿಯರಲ್ಲಿ ನನ್ನನ್ನು ಗುರುತಿಸಿ ಈ ಪ್ರಶಸ್ತಿ ನೀಡಿದ್ದು ತುಂಬಾ ಖುಷಿ ಆಗಿದೆ' ಎಂದು ತಾರಾ ಅವರು ಹೇಳಿದರು.

ಯಾವುದೇ ಪ್ರಶಸ್ತಿಯನ್ನು ನಿರಾಕರಿಸುವಷ್ಟು ದೊಡ್ಡದಾಗಿ ನಾನು ಬೆಳದಿಲ್ಲ. ಪ್ರಶಸ್ತಿ ನಮಗೆ ಸಂದ ಗೌರವ, ನಮಗೆ ತೋರಿಸುವ ಗೌರವ. ಆ ಪ್ರಶಸ್ತಿ ನನ್ನ ವೈಯಕ್ತಿವಾಗಿ ಸಂದ ಪ್ರಶಸ್ತಿ ಅಲ್ಲ. ಅದು ಒಬ್ಬ ಕಲಾವಿದನಿಗೆ ಬಂದ ಗೌರವ. ಅದನ್ನು ಕೊಟ್ಟಾಗ ನಮ್ಮ ಜವಾಬ್ದಾರಿ ಹೆಚ್ಚಾಗುತ್ತದೆ. ನಾನು ಇನ್ನಷ್ಟು ಏನಾದರೂ ಮಾಡಬೇಕು ಅನ್ನೋದು ತಲೆಯಲ್ಲಿ ಬರುತ್ತದೆ. ಆದರೆ ಅದನ್ನು ನಿರಾಕರಿಸೋದು ನನಗೆ ಸರಿ ಅನಿಸೋದಿಲ್ಲ' ಎಂದು ತಾರಾ ಹೇಳಿದ್ದಾರೆ. ಈ ಮೂಲಕ ನಟ ರಾಜ್ಯ ಪ್ರಶಸ್ತಿ ಹಾಗೂ ಡಾಕ್ಟರೇಟ್ ನಿರಾಕರಿಸಿದ ನಟ ಸುದೀಪ್ ಗೆ ತಾರಾ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT