ದೇವ್ ಚರಣ್ ರಾಜ್ - ಚರಣ್ ರಾಜ್ 
ಸಿನಿಮಾ ಸುದ್ದಿ

ಮತ್ತೆ ನಿರ್ದೇಶನದತ್ತ ನಟ ಚರಣ್ ರಾಜ್: 'ಕರುನಾಡ ಕಣ್ಮಣಿ' ಚಿತ್ರಕ್ಕೆ ಆ್ಯಕ್ಷನ್ ಕಟ್; ಸ್ಯಾಂಡಲ್‌ವುಡ್‌ಗೆ ಪುತ್ರ ಪದಾರ್ಪಣೆ

ದೇವ್ ಜೊತೆಗೆ ನಟ ಕಿಶೋರ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ದಕ್ಷಿಣ ಭಾರತದ ಚಿತ್ರರಂಗದಲ್ಲಿ ಹೆಸರು ಮಾಡಿರುವ ನಟ ಚರಣ್ ರಾಜ್, ಹಿಂದಿ ಮತ್ತು ಒಡಿಯಾ ಚಿತ್ರಗಳಲ್ಲಿಯೂ ಕೆಲಸ ಮಾಡಿದ್ದಾರೆ. ಇದೀಗ ಸ್ವಲ್ಪ ವಿರಾಮದ ನಂತರ ನಿರ್ದೇಶನಕ್ಕೆ ಮರಳುತ್ತಿದ್ದಾರೆ. ಈ ಹಿಂದೆ ಅಣ್ಣನ್ ತಂಗಚಿ (1999), ಯದಾರ್ಥ ಪ್ರೇಮ ಕಥಾ (2012) ಮತ್ತು ಕುಪ್ಪನ್ (2024) ಚಿತ್ರಗಳನ್ನು ನಿರ್ದೇಶಿಸಿದ್ದ ನಟ, 'ಕರುನಾಡ ಕಣ್ಮಣಿ' ಎಂಬ ಕನ್ನಡ ಚಿತ್ರವನ್ನು ನಿರ್ದೇಶಿಸಲು ಸಜ್ಜಾಗಿದ್ದಾರೆ. ಮರ್ಡರ್ ಮಿಸ್ಟರಿಯಾಗಿರುವ ಕರುನಾಡ ಕಣ್ಮಣಿ ತಮಿಳು ಮತ್ತು ತೆಲುಗಿನಲ್ಲೂ ಬಿಡುಗಡೆಯಾಗಲಿದೆ.

ಈ ಚಿತ್ರದ ನಿರ್ಮಾಣವು ಮಾರ್ಚ್‌ನಲ್ಲಿ ಪ್ರಾರಂಭವಾಗಲಿದೆ. ಈ ಚಿತ್ರದ ಮೂಲಕ ಚರಣ್ ರಾಜ್ ಅವರ ಪುತ್ರ ದೇವ್ ಚರಣ್ ರಾಜ್ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ದೇವ್ ಜೊತೆಗೆ ನಟ ಕಿಶೋರ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಚರಣ್ ರಾಜ್ ಮಾತನಾಡಿ, 'ನಿಮ್ಮ ಪ್ರೀತಿ ಮತ್ತು ಬೆಂಬಲ ಯಾವಾಗಲೂ ನನ್ನ ಶಕ್ತಿಯಾಗಿದೆ. ನನ್ನ ಮಗ ಇದೀಗ ಚಿತ್ರರಂಗದಲ್ಲಿ ತನ್ನ ಪ್ರಯಾಣವನ್ನು ಪ್ರಾರಂಭಿಸಲು ಸಿದ್ಧನಾಗಿದ್ದು, ಈಗಲೂ ನಿಮ್ಮಿಂದ ಅದೇ ಪ್ರೋತ್ಸಾಹ ಮುಂದುವರೆಯಲಿ ಎಂದು ನಾನು ಬಯಸುತ್ತೇನೆ' ಎಂದು ಹೇಳಿದರು.

ಚಿತ್ರಕ್ಕೆ ಸಾಗರ್ ಗುರುರಾಜ್ ಅವರ ಸಂಗೀತ ಮತ್ತು ಪೃಥ್ವಿ ಅವರ ಛಾಯಾಗ್ರಹಣವಿದೆ. ಚಿತ್ರದ ತಾರಾಗಣವನ್ನು ಇನ್ನೂ ಅಂತಿಮಗೊಳಿಸಲಾಗುತ್ತಿದ್ದು, ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದು ಚಿತ್ರತಂಡ ತಿಳಿಸಿದೆ.

ಕಾಲೇಜು ಪರಿಸರದಲ್ಲಿ ಸೆಟ್ಟೇರಲಿರುವ 'ಕರುನಾಡ ಕಣ್ಮಣಿ' ಚಿತ್ರವು ಕಾಲೇಜು ರಜೆ ಆರಂಭವಾದ ನಂತರ ಚಿತ್ರೀಕರಣ ಆರಂಭವಾಗಲಿದೆ. ಕನ್ನಡದ ಭಾಗಗಳನ್ನು ಬೆಂಗಳೂರಿನಲ್ಲಿ, ತಮಿಳು ಭಾಗಗಳನ್ನು ಪುದುಚೇರಿ ಮತ್ತು ಕಡಲೂರಿನಲ್ಲಿ ಚಿತ್ರೀಕರಿಸಲಾಗುವುದು ಮತ್ತು ತೆಲುಗು ಸೀಕ್ವೆನ್ಸ್‌ಗಳು ಹೊಂಗನೂರಿನಲ್ಲಿ ನಡೆಯಲಿವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT