ಎದ್ದೇಳು ಮಂಜುನಾಥ 2 ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಗುರುಪ್ರಸಾದ್ ನಿರ್ದೇಶಿಸಿ ನಟಿಸಿರುವ ಕೊನೆಯ ಚಿತ್ರ 'ಎದ್ದೇಳು ಮಂಜುನಾಥ 2' ಟೀಸರ್ ಬಿಡುಗಡೆ

ಮೈಸೂರು ರಮೇಶ್ ನಿರ್ಮಾಣದ ಎದ್ದೇಳು ಮಂಜುನಾಥ 2 ಚಿತ್ರಕ್ಕೆ ಗುರುಪ್ರಸಾದ್ ಅವರ ಬಹುತೇಕ ಎಲ್ಲ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದ ಅನೂಪ್ ಸೀಳಿನ್ ಅವರ ಸಂಗೀತವಿದೆ.

ನಿರ್ದೇಶಕ ಗುರುಪ್ರಸಾದ್ ಅವರ ಕೊನೆಯ ಚಿತ್ರ 'ಎದ್ದೇಳು ಮಂಜುನಾಥ 2' ಫೆಬ್ರುವರಿ 21 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಎದ್ದೇಳು ಮಂಜುನಾಥ ಚಿತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಗುರುಪ್ರಸಾದ್ ಎದ್ದೇಳು ಮಂಜುನಾಥ 2 ಚಿತ್ರವನ್ನು ನಿರ್ದೇಶಿಸಿದ್ದರು. ಚಿತ್ರದ ಬಿಡುಗಡೆಗೂ ಮುನ್ನವೇ ನಿರ್ದೇಶಕರು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ನಿರ್ಮಾಪಕರು ಬಾಕಿ ಉಳಿದಿದ್ದ ಕಾರ್ಯಗಳನ್ನು ಪೂರ್ಣಗೊಳಿಸಿ ಯೋಜನೆಯನ್ನು ತೆರೆಗೆ ತರಲು ಹರಸಾಹಸ ಪಟ್ಟಿದ್ದಾರೆ.

ಚಿತ್ರದ ಟ್ರೇಲರ್ ಬಿಡುಗಡೆ ಮಾಡುವ ಮಾರ್ಗವನ್ನು ಅನುಸರಿಸುವ ಬದಲು, ಟೀಸರ್‌ಗಳ ರೂಪದಲ್ಲಿ ಚಿತ್ರದ ತುಣುಕುಗಳನ್ನು ಹೊರತರುವ ಮೂಲಕ ಸಂಚಲನ ಮೂಡಿಸಲು ಚಿತ್ರತಂಡ ನಿರ್ಧರಿಸಿದೆ. 'ಕಿತ್ತೋದ ಪ್ರೇಮ' ಹಾಡಿನ ಬಿಡುಗಡೆಯ ನಂತರ, ಚಿತ್ರತಂಡ ಇದೀಗ ಮೊದಲ ಟೀಸರ್ ಬಿಡುಗಡೆ ಮಾಡಲು ಸಜ್ಜಾಗಿದೆ.

ಮೈಸೂರು ರಮೇಶ್ ನಿರ್ಮಾಣದ ಎದ್ದೇಳು ಮಂಜುನಾಥ 2 ಚಿತ್ರಕ್ಕೆ ಗುರುಪ್ರಸಾದ್ ಅವರ ಬಹುತೇಕ ಎಲ್ಲ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದ ಅನೂಪ್ ಸೀಳಿನ್ ಅವರ ಸಂಗೀತವಿದೆ. ಅಶೋಕ್ ಸಾಮ್ರಾಟ್ ಅವರ ಛಾಯಾಗ್ರಹಣವಿದೆ. ಎದ್ದೇಳು ಮಂಜುನಾಥ ಚಿತ್ರದಲ್ಲಿ ನಾಯಕನಾಗಿ ಜಗ್ಗೇಶ್ ಕಾಣಿಸಿಕೊಂಡಿದ್ದರು. ಈ ಬಾರಿ ಗುರುಪ್ರಸಾದ್ ಅವರೇ ಬಣ್ಣ ಹಚ್ಚಿದ್ದರೆ, ನಾಯಕಿಯಾಗಿ ರಚಿತಾ ಮಹಾಲಕ್ಷ್ಮಿ ಕಾಣಿಸಿಕೊಂಡಿದ್ದಾರೆ. ರಂಗನಾಯಕದಲ್ಲಿಯೂ ರಚಿತಾ ನಾಯಕಿಯಾಗಿದ್ದರು. ಚಿತ್ರದ ತಾರಾಗಣದಲ್ಲಿ ಶರತ್ ಲೋಹಿತಾಶ್ವ, ಚೈತ್ರಾ ಆಚಾರ್, ವಿಘ್ನೇಶ್ ಕತ್ತಿ ಮುಂತಾದವರು ಇದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT