ರಶ್ಮಿಕಾ ಮಂದಣ್ಣ 
ಸಿನಿಮಾ ಸುದ್ದಿ

ನಾನು ಹೈದರಾಬಾದ್ ನವಳು, ನಿಮ್ಮ ಫ್ಯಾಮಿಲಿಯಲ್ಲಿ ಒಬ್ಬಳು ಎಂದ ರಶ್ಮಿಕಾ: ನಿಮ್ಮನ್ನು ದ್ವೇಷಿಸಲು ಹೊಸ ಕಾರಣ ನೀಡುತ್ತೀರಿ- ನೆಟ್ಟಿಜನ್ಸ್ ಆಕ್ರೋಶ

ರಶ್ಮಿಕಾ ಅವರು ‘ನಾನು ಹೈದರಾಬಾದ್​ನವಳು’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ರಶ್ಮಿಕಾ ಹೇಳಿಕೆ ಚರ್ಚೆಗೆ ಕಾರಣವಾಗಿದ್ದು, ಇದನ್ನು ಅನೇಕರು ಟ್ರೋಲ್ ಮಾಡುತ್ತಾ ಇದ್ದಾರೆ.

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸದಾ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಲ್ಲಿರುತ್ತಾರೆ. ಈಗ ಅವರನ್ನು ಟ್ರೋಲ್ ಮಾಡಲು ಹೊಸ ಕಾರಣ ಸಿಕ್ಕಿದೆ.

ರಶ್ಮಿಕಾ ಅವರು ‘ನಾನು ಹೈದರಾಬಾದ್​ನವಳು’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ರಶ್ಮಿಕಾ ಹೇಳಿಕೆ ಚರ್ಚೆಗೆ ಕಾರಣವಾಗಿದ್ದು, ಇದನ್ನು ಅನೇಕರು ಟ್ರೋಲ್ ಮಾಡುತ್ತಾ ಇದ್ದಾರೆ.

ರಶ್ಮಿಕಾ ಮಂದಣ್ಣ 'ಛಾವಾ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಜೊತೆ ನಟಿಸಿದ್ದಾರೆ. ಈ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದ ಈವೆಂಟ್ ಒಂದು ಮುಂಬೈನಲ್ಲಿ ನಡೆದಿತ್ತು. ಅದರಲ್ಲಿ ರಶ್ಮಿಕಾ ಅವರು ಈ ಮಾತನ್ನು ಹೇಳಿದರು. ನಾನು ಹೈದರಾಬಾದ್​ನವಳು. ನಾನು ಅಲ್ಲಿಂದ ಒಬ್ಬಂಟಿಯಾಗಿ ಬಂದಿದ್ದೇನೆ. ಬಹುಶಃ ನಾನು ಈಗ ನಿಮ್ಮ ಕುಟುಂಬದ ಭಾಗ ಆಗಿದ್ದೇನೆ ಎಂದು ರಶ್ಮಿಕಾ ಹೇಳಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ. ಕನ್ನಡಿಗರು ರಶ್ಮಿಕಾ ಬಗ್ಗೆ ಟೀಕೆ ಹೊರಹಾಕಿದ್ದಾರೆ. ರಶ್ಮಿಕಾಗೆ ಕರ್ನಾಟಕ ಸಂಪೂರ್ಣವಾಗಿ ಮರೆತು ಹೋಗಿದೆ ಎಂದು ಅನೇಕರು ಹೇಳಿದ್ದಾರೆ.

ರಶ್ಮಿಕಾ ಯಾವಾಗ ಹೈದರಾಬಾದ್​ನವರಾದರು? ಇದನ್ನು ಜನನ ಪ್ರಮಾಣಪತ್ರದಲ್ಲಿ ಸೇರಿಸಿದ್ದಾರಾ’ ಎಂದು ಕೆಲವರು ಕೇಳಿದ್ದಾರೆ. ‘ಪ್ರೀತಿಗಾಗಿ ಊರನ್ನೇ ಮರೆತ ರಶ್ಮಿಕಾ’ ಎಂದು ಕೆಲವರು ಹೇಳಿಕೊಂಡಿದ್ದಾರೆ. ‘ನಿಮ್ಮನ್ನು ದ್ವೇಷಿಸಲು ನಿತ್ಯ ಹೊಸ ಹೊಸ ಕಾರಣ ನೀಡುತ್ತೀರಿ’ ಎಂದು ಕೆಲವರು ಹೇಳಿದ್ದಾರೆ. ಕೂರ್ಗ್ ನವರಾದ ನೀವು ನಿಮ್ಮ ಮೂಲ ಮರೆತಿದ್ದೀರಿ. ನಿಮಗೆ ಗೌರವ ಪಡೆದು ಕೊಳ್ಳುವ ಅರ್ಹತೆಯಿಲ್ಲ, ನಿಮಗೆ ನೈತಿಕತೆಯಿಲ್ಲ, ನಾಚಿಕೆಯಾಗಬೇಕು ಎಂದು ನೆಟಿಜನ್ ಒಬ್ಬರು ಕಮೆಂಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ