ದರ್ಶನ್ ಸಿಡಿಪಿ, ಪವಿತ್ರಗೌಡ ಚಿತ್ರ 
ಸಿನಿಮಾ ಸುದ್ದಿ

ದರ್ಶನ್ ಹುಟ್ಟುಹಬ್ಬ: CDP ಬಿಡುಗಡೆ ಮಾಡಿ ಶುಭ ಕೋರಿದ ವಿಜಯಲಕ್ಷ್ಮಿ; ಅಮ್ಮನೇ ನನ್ನ ದೊಡ್ಡ ಶಕ್ತಿ ಎಂದ ಪವಿತ್ರ ಗೌಡ!

ದರ್ಶನ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪತ್ನಿ ವಿಜಯಲಕ್ಷ್ಮಿ ಅವರು ಕಾಮನ್ ಡಿಸ್ ಪ್ಲೇ ಚಿತ್ರವನ್ನು (CDP) ಬಿಡುಗಡೆ ಮಾಡಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಜಾಮೀನು ಪಡೆದು ನಿರಾಳವಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು 47ನೇ ವಸಂತಕ್ಕೆ ಕಾಲಿಟ್ಟಿದ್ದು, ಕುಟುಂಬಸ್ಥರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಸಂತೋಷ, ಸಡಗರದಿಂದ ಹುಟ್ಟುಹಬ್ಬ ಆಚರಿಸಿದ್ದಾರೆ.

ದರ್ಶನ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪತ್ನಿ ವಿಜಯಲಕ್ಷ್ಮಿ ಅವರು ಕಾಮನ್ ಡಿಸ್ ಪ್ಲೇ ಚಿತ್ರವನ್ನು (CDP) ಬಿಡುಗಡೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂನಲ್ಲಿ ಫೋಸ್ಟ್ ಮಾಡಿರುವ ವಿಜಯಲಕ್ಷ್ಮಿ, Celebrating the one and only D Boss! ಎಂದು ಬರೆದುಕೊಂಡಿದ್ದಾರೆ.

ಸಿಡಿಪಿಯಲ್ಲಿ ಅಂಗಡಿಗಳ ಮುಂದೆ ನಿಲ್ಲಿಸಿರುವ ದರ್ಶನ್ ಅವರ ದೊಡ್ಡ ಕಟೌಟ್ ಎದುರು ಅಭಿಮಾನಿಗಳು ಸಂಭ್ರಮಿಸುತ್ತಿರುವಂತೆ ಚಿತ್ರಿಸಲಾಗಿದೆ. HAPPY BIrthday D Boss ಎಂದು ಶುಭ ಕೋರಿದ್ದಾರೆ. ಈ ಸಿಡಿಪಿಯನ್ನು ದರ್ಶನ್ ಅವರ ಅಪಾರ ಅಭಿಮಾನಿಗಳು ವಿವಿಧ ಸಾಮಾಜಿಕ ಜಾಲತಾಣಗಳ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ.

ಮತ್ತೊಂದೆಡೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೊತೆಗೆ ಜೈಲು ಸೇರಿದ್ದ ಅವರ ಆಪ್ತ ಗೆಳತಿ ಪವಿತ್ರ ಗೌಡ, ಇನ್ಸಾಟಾಗ್ರಾಮ್ ನಲ್ಲಿ ತನ್ನ ಅಮ್ಮನ ಫೋಟೋವನ್ನು ಹಂಚಿಕೊಂಡಿದ್ದು, ಅವರೇ ನನ್ನ ದೊಡ್ಡ ಶಕ್ತಿ ಎಂದಿದ್ದಾರೆ. ದರ್ಶನ್ ಅವರಿಗೆ ಶುಭಾಶಯ ಕೋರುವಂತಹ ಯಾವುದೇ ಫೋಸ್ಟ್ ಹಾಕಿಲ್ಲ. ಇದು ದರ್ಶನ್ ಅಭಿಮಾನಿಗಳಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಅನಾರೋಗ್ಯದ ಕಾರಣ ಸಾರ್ವಜನಿಕವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಇತ್ತೀಚಿಗೆ ವಿಡಿಯೋ ಸಂದೇಶದಲ್ಲಿ ದರ್ಶನ್ ಅಭಿಮಾನಿಗಳಿಗೆ ತಿಳಿಸಿದ್ದರು.

ಈ ನಡುವೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ದಿ ಡೆವಿಲ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಮಿಲನ ಖ್ಯಾತಿಯ ನಿರ್ದೇಶಕ ಪ್ರಕಾಶ್ ವೀರ್ ನಿರ್ದೇಶಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT